ರಾಮನಗರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಚನ್ನಪಟ್ಟಣ ನಗರದ ಲಾಳಾಘಟ್ಟ ಸರ್ಕಲ್ನಲ್ಲಿ ತಡರಾತ್ರಿ ನಡೆದಿದೆ. ಪ್ರಸಾದ್ (35) ಚನ್ನಪಟ್ಟಣ ನಗರದ ಅಂಬೇಡ್ಕರ್ ನಿವಾಸಿ ಕೊಲೆಯಾಗಿರುವ ದುರ್ದೈವಿ.
ಪ್ರಸಾದ್ನನ್ನು ಹತ್ಯೆ ಮಾಡಿರುವುದು ಯಾರೆಂದು ತಿಳಿದುಬಂದಿಲ್ಲ. ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣಾ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ಶಿಪ್ಟ್ ಮಾಡಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post