ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ; ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

author-image
Veena Gangani
ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ; ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ! 
Advertisment
  • ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದ ಘಟನೆ ಇದು
  • ಬೈಕ್​ನಲ್ಲಿ ಹೋಗುತ್ತಿದ್ದ ಇಬ್ರಾಹಿಂ ಮೇಲೆ ಅಷ್ಟು ಆಕ್ರೋಶ ಏಕೆ?
  • ಗಂಭೀರವಾಗಿ ಗಾಯಗೊಂಡಿದ್ದ ಇಬ್ರಾಹಿಂ ಆಸ್ಪತ್ರೆಯಲ್ಲಿ ಸಾವು

ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ. ಇಬ್ರಾಹಿಂ ಗೌಸ್ (22) ಮೃತ ಯುವಕ.

ಇದನ್ನೂ ಓದಿ: 3 ಡೆತ್‌ನೋಟ್‌.. ಬಾತ್‌ರೂಮ್‌ನಲ್ಲಿ ಕತ್ತು ಕೊಯ್ದ ಶವ; ಬೆಂಗಳೂರು ಯುವತಿ ಸಾವಿನ ಸುತ್ತಾ ಹಲವು ಅನುಮಾನ!

ಕೊಲೆಯಾದ ಯುವಕನು ಗಾಂಧಿ ನಗರ ನಿವಾಸಿ. ಇದೇ ಬಡಾವಣೆಯ ಯುವತಿ ಜೊತೆಗೆ ಇಬ್ರಾಹಿಂ ಪ್ರೀತಿ ಮಾಡುತ್ತಿದ್ದನಂತೆ. ಇವತ್ತು ಯುವತಿ ಜೊತೆಗೆ ಬೈಕ್​​ನಲ್ಲಿ ಇಬ್ರಾಹಿಂ ಹೋಗುತ್ತಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಕೋಪಗೊಂಡಿದ್ದಾನೆ. ಅದೇ ಕೋಪದಲ್ಲಿ ಇಬ್ರಾಹಿಂಗೆ ಯುವತಿ ಸಹೋದರ ಮುಜಮಿಲ್ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

[caption id="attachment_64366" align="alignnone" width="800"]publive-image ಕೊಲೆ ಮಾಡಿದ ಆರೋಪಿ[/caption]

ಗಂಭೀರವಾಗಿ ಗಾಯಗೊಂಡಿದ್ದ ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆ ಇಬ್ರಾಹಿಂ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಳ ಮಾರುತಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment