newsfirstkannada.com

ಸಾಲ ಪಡೆಯೋ ಮುನ್ನ ಎಚ್ಚರ.. ಲೋನ್ ಆ್ಯಪ್ ಟಾರ್ಚರ್​ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Share :

12-07-2023

    ವಿದ್ಯಾರ್ಥಿಗಳು ಹಾಗೂ ಪೋಷಕರು ಓದಲೇಬೇಕಾದ ಸ್ಟೋರಿ ಇದು

    ಲೋನ್​​ ಆ್ಯಪ್​ಗಳ ವಿಪರೀತ ಟಾರ್ಚರ್​​ಗೆ ಸಾವಿನ ಕದ ತಟ್ಟಿದ ವಿದ್ಯಾರ್ಥಿ

    ಮೆಕಾನಿಕಲ್ ಎಂಜಿನಿಯರಿಂಗ್​​ನಲ್ಲಿ ಓದುತ್ತಾ ಕಾಲೇಜಿಗೆ ಟಾಪರ್ ಆಗಿದ್ದ

ಬೆಂಗಳೂರು: ಲೋನ್​​ ಕಂಪನಿಗಳ ಟಾರ್ಚರ್​​ ತಾಳಲಾಗದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ತೇಜಸ್ (22 ) ಮೃತ ಯುವಕ.

ಮೃತ ತೇಜಸ್​​ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ಮೆಕಾನಿಕಲ್ ಎಂಜಿನಿಯರಿಂಗ್​ನಲ್ಲಿ ಕಾಲೇಜಿಗೆ ಟಾಪರ್ ಆಗಿದ್ದನು. ಸ್ನೇಹಿತ ಮಹೇಶ್​ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಆ್ಯಪ್‌ ಮೂಲಕ ಲೋನ್ ಪಡೆದುಕೊಂಡಿದ್ದನಂತೆ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ನೀಡುತ್ತಿದ್ದವಂತೆ. ಹೀಗಾಗಿ ಮನನೊಂದು ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ..?

ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿದ ತಪ್ಪಿಗೆ ಬೇರೆ ದಾರಿಯಿಲ್ಲ. ಮಾಡಿರುವ ಸಾಲ ತೀರಿಸಲು ಆಗೋದಿಲ್ಲ. ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸು ಗುಡ್ ಬಾಯ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಾಲ ಪಡೆಯೋ ಮುನ್ನ ಎಚ್ಚರ.. ಲೋನ್ ಆ್ಯಪ್ ಟಾರ್ಚರ್​ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

https://newsfirstlive.com/wp-content/uploads/2023/07/bng-boy-death-1.jpg

    ವಿದ್ಯಾರ್ಥಿಗಳು ಹಾಗೂ ಪೋಷಕರು ಓದಲೇಬೇಕಾದ ಸ್ಟೋರಿ ಇದು

    ಲೋನ್​​ ಆ್ಯಪ್​ಗಳ ವಿಪರೀತ ಟಾರ್ಚರ್​​ಗೆ ಸಾವಿನ ಕದ ತಟ್ಟಿದ ವಿದ್ಯಾರ್ಥಿ

    ಮೆಕಾನಿಕಲ್ ಎಂಜಿನಿಯರಿಂಗ್​​ನಲ್ಲಿ ಓದುತ್ತಾ ಕಾಲೇಜಿಗೆ ಟಾಪರ್ ಆಗಿದ್ದ

ಬೆಂಗಳೂರು: ಲೋನ್​​ ಕಂಪನಿಗಳ ಟಾರ್ಚರ್​​ ತಾಳಲಾಗದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ತೇಜಸ್ (22 ) ಮೃತ ಯುವಕ.

ಮೃತ ತೇಜಸ್​​ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ಮೆಕಾನಿಕಲ್ ಎಂಜಿನಿಯರಿಂಗ್​ನಲ್ಲಿ ಕಾಲೇಜಿಗೆ ಟಾಪರ್ ಆಗಿದ್ದನು. ಸ್ನೇಹಿತ ಮಹೇಶ್​ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಆ್ಯಪ್‌ ಮೂಲಕ ಲೋನ್ ಪಡೆದುಕೊಂಡಿದ್ದನಂತೆ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ನೀಡುತ್ತಿದ್ದವಂತೆ. ಹೀಗಾಗಿ ಮನನೊಂದು ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ..?

ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿದ ತಪ್ಪಿಗೆ ಬೇರೆ ದಾರಿಯಿಲ್ಲ. ಮಾಡಿರುವ ಸಾಲ ತೀರಿಸಲು ಆಗೋದಿಲ್ಲ. ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸು ಗುಡ್ ಬಾಯ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More