ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಕೋಲಾರದಿಂದ ಹೊಸಕೋಟೆ ಕಡೆ ಕಾರಿನಲ್ಲಿ ಬರ್ತಿದ್ದ ಯುವಕನ ಕೊಲೆ
ಯುವಕನ ಕೊಲೆ ನಂತರ ವಾಹನ ಸಮೇತ ಹಂತಕರು ಸ್ಥಳದಿಂದ ಎಸ್ಕೇಪ್
ಕೋಲಾರ: ಸಿನಿಮಾ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೋಲಾರ ಮೂಲದ ಬಾರ್ಗವ್ (24) ಕೊಲೆಯಾದ ಯುವಕ. ಮೃತ ಯುವಕ ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆ ಕಾರಿನಲ್ಲಿ ಬರುತ್ತಿದ್ದ.
ಇದನ್ನೂ ಓದಿ: ಸಿಗರೇಟ್ ಸೇದದವರಿಗೆ ಲಂಗ್ ಕ್ಯಾನ್ಸರ್.. ಅಪರ್ಣಾ ಸಾವಿನ ಬೆನ್ನಲ್ಲೇ ಹೆಚ್ಚಿದ ಆತಂಕ; ಏನಿದು ಅಪಾಯ?
ಆದರೆ ಈ ವೇಳೆ ಕಾರು ಚೇಸ್ ಮಾಡಿ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಇದೆ ನೆಪದಲ್ಲಿ ಗಲಾಟೆ ಮಾಡಿ ಲಾಂಗು ಹಾಗೂ ಮಚ್ಚಿನಿಂದ ಹಲ್ಲೆ ಮಾಡಿ ಯುವಕನ್ನು ಕೊಲೆ ಮಾಡಿದ್ದಾರೆ. ಯುವಕನನ್ನು ಕೊಲೆ ಮಾಡಿದ ನಂತರ ಆರೋಪಿಗಳು ವಾಹನ ಸಮೇತ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಪರಾರಿಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಕೋಲಾರದಿಂದ ಹೊಸಕೋಟೆ ಕಡೆ ಕಾರಿನಲ್ಲಿ ಬರ್ತಿದ್ದ ಯುವಕನ ಕೊಲೆ
ಯುವಕನ ಕೊಲೆ ನಂತರ ವಾಹನ ಸಮೇತ ಹಂತಕರು ಸ್ಥಳದಿಂದ ಎಸ್ಕೇಪ್
ಕೋಲಾರ: ಸಿನಿಮಾ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೋಲಾರ ಮೂಲದ ಬಾರ್ಗವ್ (24) ಕೊಲೆಯಾದ ಯುವಕ. ಮೃತ ಯುವಕ ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆ ಕಾರಿನಲ್ಲಿ ಬರುತ್ತಿದ್ದ.
ಇದನ್ನೂ ಓದಿ: ಸಿಗರೇಟ್ ಸೇದದವರಿಗೆ ಲಂಗ್ ಕ್ಯಾನ್ಸರ್.. ಅಪರ್ಣಾ ಸಾವಿನ ಬೆನ್ನಲ್ಲೇ ಹೆಚ್ಚಿದ ಆತಂಕ; ಏನಿದು ಅಪಾಯ?
ಆದರೆ ಈ ವೇಳೆ ಕಾರು ಚೇಸ್ ಮಾಡಿ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಇದೆ ನೆಪದಲ್ಲಿ ಗಲಾಟೆ ಮಾಡಿ ಲಾಂಗು ಹಾಗೂ ಮಚ್ಚಿನಿಂದ ಹಲ್ಲೆ ಮಾಡಿ ಯುವಕನ್ನು ಕೊಲೆ ಮಾಡಿದ್ದಾರೆ. ಯುವಕನನ್ನು ಕೊಲೆ ಮಾಡಿದ ನಂತರ ಆರೋಪಿಗಳು ವಾಹನ ಸಮೇತ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಪರಾರಿಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ