ಬಟ್ಟೆ ತೊಳೆದ ಜಾಗಕ್ಕೆ ಹೋದಾಗ ಪ್ರಕರಣ ಬೆಳಕಿಗೆ
ಸೌಂದರ್ಯ (26) ನೀರಿನಲ್ಲಿ ಬಿದ್ದು ಮೃತಪಟ್ಟ ಮಹಿಳೆ
ಗ್ರಾಮಾಂತರ ಪೊಲೀಸ್ ಅಧಿಕಾರಿಗಳಿಂದ ಪರಿಶೀಲನೆ
ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರೋ ಘಟನೆ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೌಂದರ್ಯ(26) ಮೃತ ಮಹಿಳೆ.
ಮೃತ ಮಹಿಳೆ ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಿವಾಸಿ. ಸೌಂದರ್ಯ ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದರು. ಈ ವೇಳೆ ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಮಹಿಳೆ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಕುಟುಂಬಸ್ಥರು ಭಾವಿಸಿದ್ದರು. ಆದರೆ ಅನುಮಾನಗೊಂಡ ಗ್ರಾಮಸ್ಥರು ಗೋಕಟ್ಟೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಟ್ಟೆ ತೊಳೆದ ಜಾಗಕ್ಕೆ ಹೋದಾಗ ಪ್ರಕರಣ ಬೆಳಕಿಗೆ
ಸೌಂದರ್ಯ (26) ನೀರಿನಲ್ಲಿ ಬಿದ್ದು ಮೃತಪಟ್ಟ ಮಹಿಳೆ
ಗ್ರಾಮಾಂತರ ಪೊಲೀಸ್ ಅಧಿಕಾರಿಗಳಿಂದ ಪರಿಶೀಲನೆ
ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರೋ ಘಟನೆ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೌಂದರ್ಯ(26) ಮೃತ ಮಹಿಳೆ.
ಮೃತ ಮಹಿಳೆ ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಿವಾಸಿ. ಸೌಂದರ್ಯ ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದರು. ಈ ವೇಳೆ ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಮಹಿಳೆ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಕುಟುಂಬಸ್ಥರು ಭಾವಿಸಿದ್ದರು. ಆದರೆ ಅನುಮಾನಗೊಂಡ ಗ್ರಾಮಸ್ಥರು ಗೋಕಟ್ಟೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ