ಮದುವೆ ನಿರಾಕರಿಸಿದ್ದಕ್ಕೆ ಗುಂಡಿನ ದಾಳಿ
ಯುವತಿ ಸೇರಿ ಮೂವರು ಸ್ಥಳದಲ್ಲೇ ಸಾವು
ಭಗ್ನಪ್ರೇಮಿಯ ಹುಚ್ಚಾಟಕ್ಕೆ ಪ್ರಾಣತೆತ್ತ ಮೂವರು
ಬಿಹಾರ: ಭಗ್ನಪ್ರೇಮಿಯೊಬ್ಬ ಒಂದೇ ಕುಟುಂಬದ ಆರು ಜನರ ಮೇಲೆ ಗುಂಡು ಹಾರಿಸಿದ ಘಟನೆ ಲಖಿಸರಾಯ್ ನಗರದ ಪಂಜಾಬಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಖಿಸರಾಯ್ ಪ್ರದೇಶದಲ್ಲಿಂದು ಜನರು ಛತ್ ಹಬ್ಬ ಆಚರಣೆಯಲ್ಲಿ ತೊಡಗಿದ್ದರು. ಆದರೆ ಇದೇ ಸಂಸತದಲ್ಲಿದ್ದ ಕುಟುಂಬದವರ ಮೇಲೆ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಗಾಯಗೊಂಡ ಮೂವರನ್ನು ಪಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಬಗ್ಗೆ ಕುಟುಂಬದ ಸದಸ್ಯರೊಬ್ಬರು ಮಾತನಾಡಿದ್ದು, ‘ನಾವು ಛತ್ಘಾಟ್ನಿಂದ ಬರುವ ವೇಳೆ ಆಶಿಶ್ ಚೌಧರಿ ಹಿಂದಿನಿಂದ ಬಂದು ಗುಂಡು ಹಾರಿಸಿದ್ದಾನೆ. ಅತ್ತಿಗೆ, ಮಾವ ಸೇರಿದಂತೆ ಆರು ಜನರ ಮೇಲೆ ಟಾರ್ಗೆಟ್ ಮಾಡಿ ಗುಂಡು ಹಾರಿಸಿದ್ದಾನೆ’ ಎಂದು ಹೇಳಿದ್ದಾರೆ.
ಬಳಿಕ ಮಾತು ಮುಂದುವರಿಸಿದ ಅವರು, ‘ಆರೋಪಿಯು ನಮ್ಮ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದು, ಆತನ ಜೊತೆಗೆ ಫೋನ್ನಲ್ಲಿ ಮಾತನಾಡುತ್ತಿದ್ದಳು. ಆದರೆ ಆತ ಆಕೆಯನ್ನು ವಿವಾಹವಾಗಲು ಬಯಸಿದ್ದ. ಆಕೆ ಮಾತ್ರ ಅದನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡು ಗುಂಡು ಹಾರಿಸಿದ್ದಾನೆ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮದುವೆ ನಿರಾಕರಿಸಿದ್ದಕ್ಕೆ ಗುಂಡಿನ ದಾಳಿ
ಯುವತಿ ಸೇರಿ ಮೂವರು ಸ್ಥಳದಲ್ಲೇ ಸಾವು
ಭಗ್ನಪ್ರೇಮಿಯ ಹುಚ್ಚಾಟಕ್ಕೆ ಪ್ರಾಣತೆತ್ತ ಮೂವರು
ಬಿಹಾರ: ಭಗ್ನಪ್ರೇಮಿಯೊಬ್ಬ ಒಂದೇ ಕುಟುಂಬದ ಆರು ಜನರ ಮೇಲೆ ಗುಂಡು ಹಾರಿಸಿದ ಘಟನೆ ಲಖಿಸರಾಯ್ ನಗರದ ಪಂಜಾಬಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಖಿಸರಾಯ್ ಪ್ರದೇಶದಲ್ಲಿಂದು ಜನರು ಛತ್ ಹಬ್ಬ ಆಚರಣೆಯಲ್ಲಿ ತೊಡಗಿದ್ದರು. ಆದರೆ ಇದೇ ಸಂಸತದಲ್ಲಿದ್ದ ಕುಟುಂಬದವರ ಮೇಲೆ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಗಾಯಗೊಂಡ ಮೂವರನ್ನು ಪಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಬಗ್ಗೆ ಕುಟುಂಬದ ಸದಸ್ಯರೊಬ್ಬರು ಮಾತನಾಡಿದ್ದು, ‘ನಾವು ಛತ್ಘಾಟ್ನಿಂದ ಬರುವ ವೇಳೆ ಆಶಿಶ್ ಚೌಧರಿ ಹಿಂದಿನಿಂದ ಬಂದು ಗುಂಡು ಹಾರಿಸಿದ್ದಾನೆ. ಅತ್ತಿಗೆ, ಮಾವ ಸೇರಿದಂತೆ ಆರು ಜನರ ಮೇಲೆ ಟಾರ್ಗೆಟ್ ಮಾಡಿ ಗುಂಡು ಹಾರಿಸಿದ್ದಾನೆ’ ಎಂದು ಹೇಳಿದ್ದಾರೆ.
ಬಳಿಕ ಮಾತು ಮುಂದುವರಿಸಿದ ಅವರು, ‘ಆರೋಪಿಯು ನಮ್ಮ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದು, ಆತನ ಜೊತೆಗೆ ಫೋನ್ನಲ್ಲಿ ಮಾತನಾಡುತ್ತಿದ್ದಳು. ಆದರೆ ಆತ ಆಕೆಯನ್ನು ವಿವಾಹವಾಗಲು ಬಯಸಿದ್ದ. ಆಕೆ ಮಾತ್ರ ಅದನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡು ಗುಂಡು ಹಾರಿಸಿದ್ದಾನೆ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ