2ನೇ ದಿನ ದಾಖಲೆ ಬರೆದ ಮಹಾ ಕುಂಭಮೇಳ: 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

author-image
Ganesh Nachikethu
Updated On
ಮಹಾಕುಂಭ ಸ್ನಾನದ ನಂತರ ಈ ವಸ್ತು ದಾನ ಮಾಡಿದ್ರೆ ಶುಭ.. ಪೂರ್ವಜರ ಆತ್ಮಕ್ಕೂ ಸಂತೋಷ..!
Advertisment
  • 2025ರ ಮಹಾ ಕುಂಭಮೇಳಕ್ಕೆ ಸಾಗರದಂತೆ ಹರಿದು ಬಂತು ಜನ
  • 45 ದಿನಗಳ ಮಹಾ ಕುಂಭಮೇಳದಲ್ಲಿ 45 ಕೋಟಿ ಭಕ್ತರು ಭಾಗಿ!
  • ಮಹಾಕುಂಭ ಮೇಳದಿಂದ ಉತ್ತರ ಪ್ರದೇಶ ಆರ್ಥಿಕತೆಗೆ ಬಲ

ಪ್ರಯಾಗ್‌ರಾಜ್‌: ಮಹಾ ಕುಂಭಮೇಳ ಕೋಟ್ಯಂತರ ಭಕ್ತರನ್ನ ಸೆಳೆಯುತ್ತಿರೋ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಸಂಗಮ. ಪ್ರಯಾಗ್‌ರಾಜ್‌ ಮಿನಿ ಭಾರತದಂತೆ ಕಾಣಿಸ್ತಿದೆ. ಊಹೆಗೂ ಮೀರಿ ಭಕ್ತ ಸಾಗರವೇ ಹರಿದು ಬಂದಿದೆ. 144 ವರ್ಷಗಳಿಗೊಮ್ಮೆ ಬರೋ ಮಾಹಾಕುಂಭಮೇಳ ಆ ಭೋಲೇನಾಥನ ಆರಾಧನೆಯಲ್ಲಿ ತೇಲಿಸುತ್ತಿದೆ.

3.5 ಕೋಟಿ ಭಕ್ತರು ಪವಿತ್ರ ಸ್ನಾನ

ಮಂಗಳವಾರ ಮಕರ ಸಂಕ್ರಾಂತಿ. ಹೀಗಾಗಿ 2 ದಿನ ಸಂಗಮದಲ್ಲಿ ಬರೋಬ್ಬರಿ 4 ಕೋಟಿ ಭಕ್ತರು ಶಾಹಿ ಸ್ನಾನದ ನಿರೀಕ್ಷೆ ಇತ್ತು. 45 ದಿನಗಳ ಕಾಲ ನಡೆಯುವ ಮಹಾಕುಂಭಮೇಳದಲ್ಲಿ ದೇಶ, ವಿದೇಶಗಳಿಂದ 45 ಕೋಟಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಮಹಾಕುಂಭ ಮೇಳ ನಡೆಯುವ ಜಾಗವನ್ನೇ ಉತ್ತರ ಪ್ರದೇಶದ 76ನೇ ಜಿಲ್ಲೆಯಾಗಿ ಘೋಷಣೆ ಮಾಡಲಾಗಿದೆ. ಇದರ ಮಧ್ಯೆ ಮಹಾ ಕುಂಭವೇಳದ 2ನೇ ದಿನವಾದ ಮಕರ ಸಂಕ್ರಾಂತಿ ಅಂಗವಾಗಿ ಸಂತರು ಸಾಧುಗಳು ಸೇರಿದಂತೆ ಸುಮಾರು 3.5 ಕೋಟಿ ಭಕ್ತರು ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

publive-image

ತ್ರಿವೇಣಿ ಸಂಗಮದ ಬಳಿ 60 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ

ಹರಹರ ಮಹಾದೇವ್​​, ಜೈಶ್ರೀರಾಮ್​ ಮತ್ತು ಜೈ ಗಂಗಾ ಮಾತೆ ಎಂಬ ಘೋಷಣೆ ಮೂಲಕ ಕೋಟ್ಯಾಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ತ್ರಿವೇಣಿ ಸಂಗಮದ ಬಳಿ 60 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಅಂತ ಯುಪಿ ಗೃಹ ಇಲಾಖೆ ಕಾರ್ಯದರ್ಶಿ ಸಂಜಯ್​ ಪ್ರಸಾದ್​​ ತಿಳಿಸಿದ್ದಾರೆ.

ಧಾರ್ಮಿಕ ಸಂಗಮ ಭಕ್ತರನ್ನ ಸೆಳೆಯೋದು ಮಾತ್ರವಲ್ಲ ಉತ್ತರ ಪ್ರದೇಶದ ಆರ್ಥಿಕತೆ ನೆಕ್ಸ್ಟ್​ ಲೆವೆಲ್​ಗೆ ಕೊಂಡೊಯ್ಯುತ್ತಿದೆ. ಮಹಾಕುಂಭಮೇಳ ಉತ್ತರ ಪ್ರದೇಶದ ಆರ್ಥಿಕತೆಗೆ ಬಲ ತುಂಬಲಿದೆ ಅಂತ ಅಂದಾಜಿಸಲಾಗಿದೆ. ಯುಪಿ ಸರ್ಕಾರ ಬರೋಬ್ಬರಿ 25 ಸಾವಿರ ಕೋಟಿ ರೂಪಾಯಿಗಳನ್ನ ಖರ್ಚು ಮಾಡ್ತಿದೆ. ಆದ್ರೆ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿ ಆದಾಯದ ನಿರೀಕ್ಷೆಯನ್ನೂ ಹೊಂದಿದೆ. ಜೊತೆಗೆ ಕೇಂದ್ರಕ್ಕೂ ಆರ್ಥಿಕ ಲಾಭ ನೀಡ್ತಿದೆ. ಭಕ್ತಾದಿಗಳ ಓಡಾಟಕ್ಕೆ ಸುಮಾರು 13 ಸಾವಿರ ವಿಶೇಷ ರೈಲಿನ ಟ್ರಿಪ್​ ನೀಡಿದೆ.

ಇದನ್ನೂ ಓದಿ:ಮಹಾಕುಂಭ ಮೇಳದಲ್ಲಿ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ.. ಪುಣ್ಯ ಸ್ನಾನಕ್ಕೆ ಬಂದಾಗ ಏನಾಯ್ತು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment