ಕೊಲೆ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು
ರಾತ್ರಿ ಪಲ್ಲಕ್ಕಿ ಉತ್ಸವ ನೋಡಲು ದೊಮ್ಮಲೂರಿಗೆ ಬಂದಿದ್ದ ಮೃತ ವ್ಯಕ್ತಿ
ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಮೃತದೇಹ ರವಾನೆ
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ದೊಮ್ಮಲೂರು ಬಿಡಿಎ ಪಾರ್ಕ್ ಬಳಿ ನಡೆದಿದೆ. ಶಿವಾಜಿನಗರ ನಿವಾಸಿ ಸತೀಶ್ (32) ಕೊಲೆಯಾದ ವ್ಯಕ್ತಿ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸತೀಶ್ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಇದನ್ನೂ ಓದಿ: ಆಟವಾಡುತ್ತಿದ್ದ 4 ವರ್ಷದ ಮಗು ಮೇಲೆ ಹರಿದ ಲಾರಿ.. ಓವರ್ ಟೇಕ್ ಮಾಡೋ ಭರದಲ್ಲಿ ಅನಾಹುತ
ಮೃತ ಸತೀಶ್ ಬೆಂಗಳೂರಲ್ಲಿ ಕೊರಿಯರ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಕುಟುಂಬ ಸಮೇತ ವಾಸವಿದ್ದ. ರಾತ್ರಿ ಪಲ್ಲಕ್ಕಿ ಉತ್ಸವ ನೋಡಲು ದೊಮ್ಮಲೂರಿಗೆ ಬಂದಿದ್ದ. ಪಲ್ಲಕ್ಕಿ ಉತ್ಸವ ಮುಗಿಸಿ ಗೆಳೆಯರ ಜೊತೆ ಪಾರ್ಟಿ ಮಾಡುತ್ತಿದ್ದನಂತೆ. ಇದೇ ಪಾರ್ಟಿಯಲ್ಲಿ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ದೊಮ್ಮಲೂರಿನ ಬಳಿ ಸತೀಶ್ ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.
ಈ ಕೊಲೆಗೆ ಕಾರಣವೇನು..?
ಗೆಳೆಯರ ಜೊತೆ ಪಾರ್ಟಿ ಮಾಡುತ್ತಿದ್ದ ವೇಳೆ ಸಂತೋಷ್ ಮತ್ತು ಪವನ್ ಎಂಬುವವರು ಸತೀಶ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರಂತೆ. ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಕೊಲೆ ಸಂಬಂಧ ಐವರು ಆರೋಪಿಗಳನ್ನ ಹಲಸೂರು ಪೊಲೀಸರು ಬಂಧಿಸಿದ್ದಾರೆ. ಪವನ್, ಸಂತೋಷ್, ರಂಜಿತ್, ರಂಗನಾಥ್, ವಿನೋದ್ ಬಂಧಿತ ಆರೋಪಿಗಳು. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಲೆ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು
ರಾತ್ರಿ ಪಲ್ಲಕ್ಕಿ ಉತ್ಸವ ನೋಡಲು ದೊಮ್ಮಲೂರಿಗೆ ಬಂದಿದ್ದ ಮೃತ ವ್ಯಕ್ತಿ
ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಮೃತದೇಹ ರವಾನೆ
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ದೊಮ್ಮಲೂರು ಬಿಡಿಎ ಪಾರ್ಕ್ ಬಳಿ ನಡೆದಿದೆ. ಶಿವಾಜಿನಗರ ನಿವಾಸಿ ಸತೀಶ್ (32) ಕೊಲೆಯಾದ ವ್ಯಕ್ತಿ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸತೀಶ್ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಇದನ್ನೂ ಓದಿ: ಆಟವಾಡುತ್ತಿದ್ದ 4 ವರ್ಷದ ಮಗು ಮೇಲೆ ಹರಿದ ಲಾರಿ.. ಓವರ್ ಟೇಕ್ ಮಾಡೋ ಭರದಲ್ಲಿ ಅನಾಹುತ
ಮೃತ ಸತೀಶ್ ಬೆಂಗಳೂರಲ್ಲಿ ಕೊರಿಯರ್ ಕೆಲಸ ಮಾಡುತ್ತಿದ್ದ. ಶಿವಾಜಿನಗರದಲ್ಲಿ ಕುಟುಂಬ ಸಮೇತ ವಾಸವಿದ್ದ. ರಾತ್ರಿ ಪಲ್ಲಕ್ಕಿ ಉತ್ಸವ ನೋಡಲು ದೊಮ್ಮಲೂರಿಗೆ ಬಂದಿದ್ದ. ಪಲ್ಲಕ್ಕಿ ಉತ್ಸವ ಮುಗಿಸಿ ಗೆಳೆಯರ ಜೊತೆ ಪಾರ್ಟಿ ಮಾಡುತ್ತಿದ್ದನಂತೆ. ಇದೇ ಪಾರ್ಟಿಯಲ್ಲಿ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ದೊಮ್ಮಲೂರಿನ ಬಳಿ ಸತೀಶ್ ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.
ಈ ಕೊಲೆಗೆ ಕಾರಣವೇನು..?
ಗೆಳೆಯರ ಜೊತೆ ಪಾರ್ಟಿ ಮಾಡುತ್ತಿದ್ದ ವೇಳೆ ಸಂತೋಷ್ ಮತ್ತು ಪವನ್ ಎಂಬುವವರು ಸತೀಶ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರಂತೆ. ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಕೊಲೆ ಸಂಬಂಧ ಐವರು ಆರೋಪಿಗಳನ್ನ ಹಲಸೂರು ಪೊಲೀಸರು ಬಂಧಿಸಿದ್ದಾರೆ. ಪವನ್, ಸಂತೋಷ್, ರಂಜಿತ್, ರಂಗನಾಥ್, ವಿನೋದ್ ಬಂಧಿತ ಆರೋಪಿಗಳು. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ