newsfirstkannada.com

ಮದುವೆ ನಿಶ್ಚಯವಾಗಿದ್ದ ನರ್ಸ್ ಮೇಲೆ ಬಿದ್ದ ಕೇಬಲ್ ವೈರ್; ಸ್ಥಳದಲ್ಲೇ ಮಹಿಳೆ ದಾರುಣ ಸಾವು!

Share :

Published March 22, 2024 at 10:26pm

    ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಘಟನೆ

    ಕೆಲಸ ಮುಗಿಸಿಕೊಂಡು ಕುಣಿಗಲ್ ಪಟ್ಟಣಕ್ಕೆ ಹೋಗುತ್ತಿದ್ದಾಗ ಸಾವು

    ಗಂಭೀರವಾಗಿ ಗಾಯಗೊಂಡ ಲಕ್ಷ್ಮಣ್​ ಸಾರ್ವಜನಿಕ ಆಸ್ಪತ್ರೆಗೆ ದಾಖಲು

ತುಮಕೂರು: ದಾರಿಯಲ್ಲಿ ಹಾದುಹೋಗಿದ್ದ ವೇಳೆ ಕೇಬಲ್ ವೈರ್​ ವಿದ್ಯುತ್ ತಂತಿ ಬಿದ್ದಿದ್ದಕ್ಕೆ ನರ್ಸ್​ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36) ಮೃತ ದುರ್ದೈವಿ.

ಮೃತ ನರ್ಸ್​ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ನಿವಾಸಿ. ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ರು. ಹೀಗಾಗಿ ಲಕ್ಷ್ಮೀಬಾಯಿ ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದರು. ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಹಾದುಹೋಗುತ್ತಿದ್ದಾಗ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ.

ಇದನ್ನು ಓದಿ: ದಿನೇಶ್​ ಕಾರ್ತಿಕ್​​, ಅಜೂನ್​​ ರಾವತ್​ ಭರ್ಜರಿ ಬ್ಯಾಟಿಂಗ್​​.. ಚೆನ್ನೈಗೆ ಆರ್​​ಸಿಬಿ 174 ರನ್​ ಟಾರ್ಗೆಟ್​​​​

ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಬೈಕ್ ಸವಾರ ಲಕ್ಷ್ಮಣ್​ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮೃತ ಲಕ್ಷ್ಮೀಬಾಯಿಗೆ ಇತ್ತೀಚೆಗೆ ಮದುವೆ ನಿಶ್ಚಯವಾಗಿತ್ತಂತೆ. ಆದರೆ ಯಮನ ರೂಪದಲ್ಲಿ ಬಂದ ಕೇಬಲ್ ವೈರ್​ನಿಂದ ಲಕ್ಷ್ಮೀಬಾಯಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆ ನಿಶ್ಚಯವಾಗಿದ್ದ ನರ್ಸ್ ಮೇಲೆ ಬಿದ್ದ ಕೇಬಲ್ ವೈರ್; ಸ್ಥಳದಲ್ಲೇ ಮಹಿಳೆ ದಾರುಣ ಸಾವು!

https://newsfirstlive.com/wp-content/uploads/2024/03/death-2024-03-22T220634.873.jpg

    ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಘಟನೆ

    ಕೆಲಸ ಮುಗಿಸಿಕೊಂಡು ಕುಣಿಗಲ್ ಪಟ್ಟಣಕ್ಕೆ ಹೋಗುತ್ತಿದ್ದಾಗ ಸಾವು

    ಗಂಭೀರವಾಗಿ ಗಾಯಗೊಂಡ ಲಕ್ಷ್ಮಣ್​ ಸಾರ್ವಜನಿಕ ಆಸ್ಪತ್ರೆಗೆ ದಾಖಲು

ತುಮಕೂರು: ದಾರಿಯಲ್ಲಿ ಹಾದುಹೋಗಿದ್ದ ವೇಳೆ ಕೇಬಲ್ ವೈರ್​ ವಿದ್ಯುತ್ ತಂತಿ ಬಿದ್ದಿದ್ದಕ್ಕೆ ನರ್ಸ್​ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36) ಮೃತ ದುರ್ದೈವಿ.

ಮೃತ ನರ್ಸ್​ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ನಿವಾಸಿ. ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ರು. ಹೀಗಾಗಿ ಲಕ್ಷ್ಮೀಬಾಯಿ ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದರು. ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಹಾದುಹೋಗುತ್ತಿದ್ದಾಗ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ.

ಇದನ್ನು ಓದಿ: ದಿನೇಶ್​ ಕಾರ್ತಿಕ್​​, ಅಜೂನ್​​ ರಾವತ್​ ಭರ್ಜರಿ ಬ್ಯಾಟಿಂಗ್​​.. ಚೆನ್ನೈಗೆ ಆರ್​​ಸಿಬಿ 174 ರನ್​ ಟಾರ್ಗೆಟ್​​​​

ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಬೈಕ್ ಸವಾರ ಲಕ್ಷ್ಮಣ್​ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮೃತ ಲಕ್ಷ್ಮೀಬಾಯಿಗೆ ಇತ್ತೀಚೆಗೆ ಮದುವೆ ನಿಶ್ಚಯವಾಗಿತ್ತಂತೆ. ಆದರೆ ಯಮನ ರೂಪದಲ್ಲಿ ಬಂದ ಕೇಬಲ್ ವೈರ್​ನಿಂದ ಲಕ್ಷ್ಮೀಬಾಯಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More