ಹೋಶಿಯಾರ್ಪುರದ ಹೆದ್ದಾರಿಯಲ್ಲಿ ದುರ್ಘಟನೆ
ಕಾರಿಗೆ ವೇಗವಾಗಿ ಬಂದು ಗುದ್ದಿದ ಟ್ರಕ್ ಚಾಲಕ
ಬೆಂಕಿಯ ರಭಸಕ್ಕೆ ಹೊತ್ತಿ ಉರಿದ ಕಾರು
ಪಂಜಾಬ್ನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 4 ಜನರ ದುರ್ಮರಣ ಹೊಂದಿದ್ದಾರೆ. ಹೋಶಿಯಾರ್ಪುರದ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಡಿವೈಡರ್ ಮೇಲೆ ಹಾರಿ ಪಲ್ಟಿ ಹೊಡೆದಿದೆ. ಘಟನೆಯಿಂದ ಕಾರಿಗೆ ಬೆಂಕಿ ತಗುಲಿದ್ದು, ಕಾರಿನೊಳಗಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ಕೂ ಜನ ಸಾವನ್ನಪ್ಪಿದ್ದಾರೆ. ನಂತರ ಮಾಹಿತಿ ಪಡೆದು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೋಶಿಯಾರ್ಪುರದ ಹೆದ್ದಾರಿಯಲ್ಲಿ ದುರ್ಘಟನೆ
ಕಾರಿಗೆ ವೇಗವಾಗಿ ಬಂದು ಗುದ್ದಿದ ಟ್ರಕ್ ಚಾಲಕ
ಬೆಂಕಿಯ ರಭಸಕ್ಕೆ ಹೊತ್ತಿ ಉರಿದ ಕಾರು
ಪಂಜಾಬ್ನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 4 ಜನರ ದುರ್ಮರಣ ಹೊಂದಿದ್ದಾರೆ. ಹೋಶಿಯಾರ್ಪುರದ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಡಿವೈಡರ್ ಮೇಲೆ ಹಾರಿ ಪಲ್ಟಿ ಹೊಡೆದಿದೆ. ಘಟನೆಯಿಂದ ಕಾರಿಗೆ ಬೆಂಕಿ ತಗುಲಿದ್ದು, ಕಾರಿನೊಳಗಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ಕೂ ಜನ ಸಾವನ್ನಪ್ಪಿದ್ದಾರೆ. ನಂತರ ಮಾಹಿತಿ ಪಡೆದು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ