ತಂದೆ ಶಾಲೆಗೆ ಬಿಡಲು ತೆರಳುತ್ತಿದ್ದಾಗ ನಡೆದ ದುರ್ಘಟನೆ
ಬಿಎಂಟಿಸಿ ಬಸ್ ಡಿಕ್ಕಿ ರಭಸಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿ
ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಡಿಕ್ಕಿ
ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಶಾಲೆಗೆ ಹೋಗುತ್ತಿದ್ದ ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿರೋ ದಾರುಣ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ನಾಲ್ಕೂವರೆ ವರ್ಷದ ಪೂರ್ವಿ ಎನ್ನುವ ಬಾಲಕಿ ಮೃತ ದುರ್ದೈವಿ. ತಂದೆ ಪ್ರಸನ್ನ ಅವರು ಮಗಳನ್ನ ಶಾಲೆಗೆ ಬಿಡಲು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್ಗೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ರಭಸಕ್ಕೆ ಬೈಕ್ ಚಾಲನೆ ಮಾಡುತ್ತಿದ್ದ ಬಾಲಕಿ ತಂದೆ ಎಡಬದಿ ಬಿದ್ದಿದ್ರೆ, ಬಾಲಕಿ ಬಲ ಬದಿ ಬಿದ್ದಿದ್ದಾಳೆ. ಪರಿಣಾಮ ಬಾಲಕಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಂದೆ ಶಾಲೆಗೆ ಬಿಡಲು ತೆರಳುತ್ತಿದ್ದಾಗ ನಡೆದ ದುರ್ಘಟನೆ
ಬಿಎಂಟಿಸಿ ಬಸ್ ಡಿಕ್ಕಿ ರಭಸಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿ
ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಡಿಕ್ಕಿ
ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಶಾಲೆಗೆ ಹೋಗುತ್ತಿದ್ದ ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿರೋ ದಾರುಣ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ನಾಲ್ಕೂವರೆ ವರ್ಷದ ಪೂರ್ವಿ ಎನ್ನುವ ಬಾಲಕಿ ಮೃತ ದುರ್ದೈವಿ. ತಂದೆ ಪ್ರಸನ್ನ ಅವರು ಮಗಳನ್ನ ಶಾಲೆಗೆ ಬಿಡಲು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್ಗೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ರಭಸಕ್ಕೆ ಬೈಕ್ ಚಾಲನೆ ಮಾಡುತ್ತಿದ್ದ ಬಾಲಕಿ ತಂದೆ ಎಡಬದಿ ಬಿದ್ದಿದ್ರೆ, ಬಾಲಕಿ ಬಲ ಬದಿ ಬಿದ್ದಿದ್ದಾಳೆ. ಪರಿಣಾಮ ಬಾಲಕಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ