ಕೊಲೆ ಮಾಡಿದ ಆರೋಪಿ ಶಿವಪ್ಪ ಕನಕ ನಗರದ ನಿವಾಸಿ
ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದ ಘಟನೆ
ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಯಾದಗಿರಿ: ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರೋ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ. ಸಿದ್ದಪ್ಪ ಜಿಂಗೇನಾರು (40) ಕೊಲೆಯಾದ ವ್ಯಕ್ತಿ.
ಇದನ್ನೂ ಓದಿ: ಟಿಸಿ ಕೊಡಲಿಲ್ಲ ಎಂದು ವಿದ್ಯಾರ್ಥಿ ಸಾವು ಕೇಸ್ಗೆ ಟ್ವಿಸ್ಟ್.. ಡೆತ್ ನೋಟ್ನಲ್ಲಿ ಏನಿದೆ?
ಶಿವಪ್ಪ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿಯು ಯಾದಗಿರಿಯ ಕನಕ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಆರೋಪಿ ಈ ಕೊಲೆ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ. ಆದರೆ ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾನೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಯಾದಗಿರಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಸಂಬಂಧ ಕೇಸ್ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಲೆ ಮಾಡಿದ ಆರೋಪಿ ಶಿವಪ್ಪ ಕನಕ ನಗರದ ನಿವಾಸಿ
ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದ ಘಟನೆ
ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಯಾದಗಿರಿ: ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರೋ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ. ಸಿದ್ದಪ್ಪ ಜಿಂಗೇನಾರು (40) ಕೊಲೆಯಾದ ವ್ಯಕ್ತಿ.
ಇದನ್ನೂ ಓದಿ: ಟಿಸಿ ಕೊಡಲಿಲ್ಲ ಎಂದು ವಿದ್ಯಾರ್ಥಿ ಸಾವು ಕೇಸ್ಗೆ ಟ್ವಿಸ್ಟ್.. ಡೆತ್ ನೋಟ್ನಲ್ಲಿ ಏನಿದೆ?
ಶಿವಪ್ಪ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿಯು ಯಾದಗಿರಿಯ ಕನಕ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಆರೋಪಿ ಈ ಕೊಲೆ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ. ಆದರೆ ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾನೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಯಾದಗಿರಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಸಂಬಂಧ ಕೇಸ್ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ