newsfirstkannada.com

ಮುಖಕ್ಕೆ ಆಕ್ಸಿಜನ್.. ನಿಧಿಗಾಗಿ 40 ಮೀಟರ್ ಆಳದ ಗುಹೆ ಇಳಿದ ಕಿಡಿಗೇಡಿಗಳು.. ಮುಂದೇನಾಯ್ತು..?

Share :

Published August 8, 2024 at 8:36am

    ಅರಣ್ಯಾಧಿಕಾರಿಗಳ ಕೈಗೆ ಖದೀಮರು ಲಾಕ್ ಆಗಿದ್ದೆ ಇಲ್ಲಿ ರೋಚಕ

    ಗುಹೆಯ ಆಳದಲ್ಲಿ ನಿಧಿ ಶೋಧಕ್ಕಾಗಿ ಕೃತಕ ಆಕ್ಸಿಜನ್ ವ್ಯವಸ್ಥೆ

    ಅತ್ಯಾಧುನಿಕ ಸಾಧನ ಬಳಸಿ ಹಗಲಿರುಳು ಗುಹೆಯೊಳಗೆ ಡಿಗ್ಗಿಂಗ್

ಬಳ್ಳಾರಿ: ನಿಧಿ ಆಸೆಗಾಗಿ ಬೆಟ್ಟದ ಮೇಲಿನ ಗುಹೆಯೊಳಗೆ ಸುರಂಗ ಕೊರೆಯಲು ಮುಂದಾಗಿದ್ದ 11 ಖದೀಮರ ಪೈಕಿ ಐವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸಂಡೂರು ತಾಲೂಕಿನ ತಾರಾನಗರದ ನಾರಿಹಳ್ಳದ ಹಿಂಭಾಗದ ಗುಡ್ಡದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ನಿರಾಸೆ.. ಕೇವಲ ಒಂದೇ ಒಂದು ಕೆಜಿಯಿಂದ ಮೆಡಲ್​ ಮಿಸ್ ಮಾಡಿಕೊಂಡ ಮೀರಾಬಾಯಿ ಚಾನು

ಆಂಧ್ರ ಮೂಲದ ಶ್ರೀನಿವಾಸ್ (45), ಆಕಾಶ್ ( 20), ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ (50)ಯನ್ನ ಬಂಧಿಸಲಾಗಿದೆ. 6 ಜನ ಅರಣ್ಯಾಧಿಕಾರಿಗಳು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ. ಇವರೆಲ್ಲ ಸೇರಿ ನಿಧಿಗಾಗಿ 40 ಮೀಟರ್ ಆಳದ ಗುಹೆಯೊಳಗೆ ಇಳಿದಿದ್ದರು. ಗುಹೆಯೊಳಗೆ ಸುರಂಗ ಕೊರೆಯಲು ಕೃತಕ ಆಕ್ಸಿಜನ್ ವ್ಯವಸ್ಥೆ, ಲೈಟಿಂಗ್​​ಗಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಂಡಿದ್ದರು. ಅತ್ಯಾಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆಗೆ ಮುಂದಾಗಿದ್ದರು. ಅರಣ್ಯದಲ್ಲಿರುವ ಗುಹೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದರು. ತಾರಾನಗರ ಓರ್ವ ಹಾಗೂ ಹೊಸಪೇಟೆ ಇನ್ನೊಬ್ಬ ಇದಕ್ಕೆ ಕುಮ್ಮಕ್ಕು ನೀಡಿದ್ದಾನೆ.

ಇದನ್ನೂ ಓದಿ: BREAKING: ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್

ನಿಧಿಗಾಗಿ ಎಲ್ಲ ಸಿದ್ಧತೆ ಮಾಡಿಕೊಂಡು ನೀರು ತರಲೆಂದು ಖದೀಮರು ನಾರಿಹಳ್ಳಕ್ಕೆ ಹೋಗಿದ್ದಾರೆ. ಈ ವೇಳೆ ಅದೇ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳು ಅವರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ನಿಧಿಗಾಗಿ ಬಂದಿರುವುದು ಗೊತ್ತಾಗಿ ಗುಹೆಯ ಬಳಿ ಹೋಗಿ ಎಲ್ಲ ನೋಡಿದ್ದಾರೆ. ಸುರಂಗ ಕೊರೆಯಲು ಮಾಡಿಕೊಂಡಿದ್ದ ವ್ಯವಸ್ಥೆ ನೋಡಿ ಅರಣ್ಯಾಧಿಕಾರಿಗಳು ಫುಲ್ ಶಾಕ್ ಆಗಿದ್ದಾರೆ. ಈ ಸಂಬಂಧ ಐವರನ್ನು ಅರೆಸ್ಟ್ ಮಾಡಿರುವ ಅರಣ್ಯಾಧಿಕಾರಿಗಳು ಕಾಡು ಪ್ರಾಣಿಗಳ ಹತ್ಯೆ ಕಾಯ್ದೆಯಡಿ ತನಿಕೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಖಕ್ಕೆ ಆಕ್ಸಿಜನ್.. ನಿಧಿಗಾಗಿ 40 ಮೀಟರ್ ಆಳದ ಗುಹೆ ಇಳಿದ ಕಿಡಿಗೇಡಿಗಳು.. ಮುಂದೇನಾಯ್ತು..?

https://newsfirstlive.com/wp-content/uploads/2024/08/BLY_NIDHI_1.jpg

    ಅರಣ್ಯಾಧಿಕಾರಿಗಳ ಕೈಗೆ ಖದೀಮರು ಲಾಕ್ ಆಗಿದ್ದೆ ಇಲ್ಲಿ ರೋಚಕ

    ಗುಹೆಯ ಆಳದಲ್ಲಿ ನಿಧಿ ಶೋಧಕ್ಕಾಗಿ ಕೃತಕ ಆಕ್ಸಿಜನ್ ವ್ಯವಸ್ಥೆ

    ಅತ್ಯಾಧುನಿಕ ಸಾಧನ ಬಳಸಿ ಹಗಲಿರುಳು ಗುಹೆಯೊಳಗೆ ಡಿಗ್ಗಿಂಗ್

ಬಳ್ಳಾರಿ: ನಿಧಿ ಆಸೆಗಾಗಿ ಬೆಟ್ಟದ ಮೇಲಿನ ಗುಹೆಯೊಳಗೆ ಸುರಂಗ ಕೊರೆಯಲು ಮುಂದಾಗಿದ್ದ 11 ಖದೀಮರ ಪೈಕಿ ಐವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸಂಡೂರು ತಾಲೂಕಿನ ತಾರಾನಗರದ ನಾರಿಹಳ್ಳದ ಹಿಂಭಾಗದ ಗುಡ್ಡದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ನಿರಾಸೆ.. ಕೇವಲ ಒಂದೇ ಒಂದು ಕೆಜಿಯಿಂದ ಮೆಡಲ್​ ಮಿಸ್ ಮಾಡಿಕೊಂಡ ಮೀರಾಬಾಯಿ ಚಾನು

ಆಂಧ್ರ ಮೂಲದ ಶ್ರೀನಿವಾಸ್ (45), ಆಕಾಶ್ ( 20), ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ (50)ಯನ್ನ ಬಂಧಿಸಲಾಗಿದೆ. 6 ಜನ ಅರಣ್ಯಾಧಿಕಾರಿಗಳು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ. ಇವರೆಲ್ಲ ಸೇರಿ ನಿಧಿಗಾಗಿ 40 ಮೀಟರ್ ಆಳದ ಗುಹೆಯೊಳಗೆ ಇಳಿದಿದ್ದರು. ಗುಹೆಯೊಳಗೆ ಸುರಂಗ ಕೊರೆಯಲು ಕೃತಕ ಆಕ್ಸಿಜನ್ ವ್ಯವಸ್ಥೆ, ಲೈಟಿಂಗ್​​ಗಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಂಡಿದ್ದರು. ಅತ್ಯಾಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆಗೆ ಮುಂದಾಗಿದ್ದರು. ಅರಣ್ಯದಲ್ಲಿರುವ ಗುಹೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದರು. ತಾರಾನಗರ ಓರ್ವ ಹಾಗೂ ಹೊಸಪೇಟೆ ಇನ್ನೊಬ್ಬ ಇದಕ್ಕೆ ಕುಮ್ಮಕ್ಕು ನೀಡಿದ್ದಾನೆ.

ಇದನ್ನೂ ಓದಿ: BREAKING: ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್

ನಿಧಿಗಾಗಿ ಎಲ್ಲ ಸಿದ್ಧತೆ ಮಾಡಿಕೊಂಡು ನೀರು ತರಲೆಂದು ಖದೀಮರು ನಾರಿಹಳ್ಳಕ್ಕೆ ಹೋಗಿದ್ದಾರೆ. ಈ ವೇಳೆ ಅದೇ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳು ಅವರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ನಿಧಿಗಾಗಿ ಬಂದಿರುವುದು ಗೊತ್ತಾಗಿ ಗುಹೆಯ ಬಳಿ ಹೋಗಿ ಎಲ್ಲ ನೋಡಿದ್ದಾರೆ. ಸುರಂಗ ಕೊರೆಯಲು ಮಾಡಿಕೊಂಡಿದ್ದ ವ್ಯವಸ್ಥೆ ನೋಡಿ ಅರಣ್ಯಾಧಿಕಾರಿಗಳು ಫುಲ್ ಶಾಕ್ ಆಗಿದ್ದಾರೆ. ಈ ಸಂಬಂಧ ಐವರನ್ನು ಅರೆಸ್ಟ್ ಮಾಡಿರುವ ಅರಣ್ಯಾಧಿಕಾರಿಗಳು ಕಾಡು ಪ್ರಾಣಿಗಳ ಹತ್ಯೆ ಕಾಯ್ದೆಯಡಿ ತನಿಕೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More