/newsfirstlive-kannada/media/post_attachments/wp-content/uploads/2024/11/SIDDARAMAIAH-3.jpg)
ಬೆಂಗಳೂರು: ಉಪಚುನಾವಣೆಯ ಬಿಸಿ ಆರಿದ ಮೇಲೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. 2 ದಿನಗಳ ಕಾಲ ದೆಹಲಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಲಿದೆ.
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸದ್ಯ 2 ಪ್ರಮುಖ ವಿಚಾರ ಬಹಳಷ್ಟು ಚರ್ಚೆಗೆ ಗುರಿಯಾಗಿದೆ. ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವಾಗಿ ಕಾಂಗ್ರೆಸ್ ನಾಯಕರು ಸುಳಿವು ಬಿಟ್ಟುಕೊಡುತ್ತಿದ್ದಾರೆ.
ಸಂಪುಟ ಪುನಾರಚನೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಯ್ಯ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ದೆಹಲಿ ಭೇಟಿ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
/newsfirstlive-kannada/media/post_attachments/wp-content/uploads/2023/06/SIDDU_MUNIYAPPA.jpg)
ಸಿಎಂ ದೆಹಲಿ ಪ್ರವಾಸವೇಕೆ?
ಕಾರಣ 01: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿರೋ ಸಿದ್ದರಾಮಯ್ಯ
ಕಾರಣ 02: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ
ಕಾರಣ 03: ಸಂಪುಟಕ್ಕೆ ಯಾರ ಸೇರ್ಪಡೆ? ಯಾರಿಗೆ ಕೊಕ್ ಎಂಬ ಚರ್ಚೆ
ಕಾರಣ 04: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿಯೂ ಚರ್ಚೆ
ಕಾರಣ 05: 4 ಪರಿಷತ್ ಸ್ಥಾನಗಳ ನೇಮಕ ಕುರಿತು ಸಮಾಲೋಚನೆ
ಮಗಳ ಪರ ಮುನಿಯಪ್ಪ ಬ್ಯಾಟಿಂಗ್!
ಸಂಪುಟ ಪುನಾರಚನೆಯ ಚರ್ಚೆ ಹಿನ್ನೆಲೆಯಲ್ಲಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಲರ್ಟ್ ಆಗಿದ್ದಾರೆ. ಈ ಬಾರಿ ಸಚಿವ ಸಂಪುಟದಿಂದ ತಮ್ಮನ್ನು​ ಕೈಬಿಡೋ ಸಾಧ್ಯತೆ ಇದೆ. ಹೀಗಾಗಿ ತನ್ನ ಖಾತೆ ತಮ್ಮ ಪುತ್ರಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ನೀಡುವಂತೆ ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: ಉಪಚುನಾವಣೆ ಮಹಾ ವಿಜಯ, ಕೈ ಪಾಳಯದ ಹೊಸ ಲೆಕ್ಕಾಚಾರ; ಗೃಹಲಕ್ಷ್ಮೀ ಸಂಘಗಳ ಸ್ಥಾಪನೆಗೆ ಚಿಂತನೆ
ಸಚಿವ ಕೆ.ಹೆಚ್ ಮುನಿಯಪ್ಪನವರು ಹೈಕಮಾಂಡ್ ನಾಯಕರ ಭೇಟಿಯಾಗಲು ಮುಂದಾಗಿದ್ದಾರೆ. ಈ ವೇಳೆ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲು ಸಿದ್ಧ. ಆದರೆ ನನ್ನ ಖಾತೆಯನ್ನ ನನ್ನ ಪುತ್ರಿಗೆ ನೀಡಬೇಕು. ರೂಪಕಲಾ ಶಶಿಧರ್ 2 ಬಾರಿ ಶಾಸಕಿಯಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಯಾರಿಗೂ ಮಂತ್ರಿಗಿರಿ ಸಿಕ್ಕಿಲ್ಲ. ಮಹಿಳಾ ಖೋಟಾದಡಿ ನನ್ನ ಪುತ್ರಿಗೆ ಸ್ಥಾನ ನೀಡಿ. ನನ್ನ ಪುತ್ರಿಗೆ ಸಚಿವ ಸ್ಥಾನ ನೀಡಿದ್ರೆ, ಮಹಿಳಾ ಮತ ಭದ್ರ ಆಗುತ್ತದೆ ಎಂದು ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us