/newsfirstlive-kannada/media/post_attachments/wp-content/uploads/2024/10/BY-ELECTION-CONGRESS-TICKET.jpg)
ಬಿಜೆಪಿ ಈಗಾಗಲೇ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಆದ್ರೆ ಚನ್ನಪಟ್ಟಣದ ಟಿಕೆಟ್​ ಯಾರಿಗೆ ಕೊಡಬೇಕು ಎನ್ನುವ ಗೊಂದಲದಲ್ಲಿದೆ. ಇತ್ತ ಕಾಂಗ್ರೆಸ್​ ಕೂಡ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಶಿಗ್ಗಾವಿ ಕ್ಷೇತ್ರದ ಬಗ್ಗೆ ಇನ್ನೂ ಯಾವ ನಿರ್ಧಾರಕ್ಕೆ ಬಂದಿಲ್ಲ.
ಇದನ್ನೂ ಓದಿ:ಚನ್ನಪಟ್ಟಣದಲ್ಲಿ ಯೋಗೇಶ್ವರ್ ಎದುರಾಳಿ ಯಾರು? ಜೆಡಿಎಸ್ ಲೆಕ್ಕಾಚಾರ ಏನು? ನಾಲ್ವರಲ್ಲಿ ಯಾರಿಗೆ ಟಿಕೆಟ್?
ಅಂದುಕೊಂಡಂತೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ನಿಂದ ಟಿಕೆಟ್ ಪಡೆಯುವಲ್ಲಿ ಸಿ.ಪಿ.ಯೋಗೇಶ್ವರ್ ಯಶಸ್ವಿಯಾಗಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಇ ತುಕಾರಂ ಪತ್ನಿ ಅನ್ನಪೂರ್ಣ ತುಕಾರಂಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ: ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್.. ಜೆಡಿಎಸ್, BJP ನಾಯಕರಿಂದ ಮಹತ್ವದ ತೀರ್ಮಾನ!
ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು ನವೆಂಬರ್ 13 ರಂದು ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳನ್ನು ಗೆಲ್ಲುವ ಗುರಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಎರಡೂ ಇವೆ. ಸದ್ಯ ಚನ್ನಪಟ್ಟಣದ ಟಿಕೆಟ್​ ಯಾರಿಗೆ ಅನ್ನೋ ಸಸ್ಪೆನ್ಸ್​ ಬಿಜೆಪಿ ಇಟ್ಟುಕೊಂಡಿದ್ರೆ. ಶಿಗ್ಗಾವಿ ಕ್ಷೇತ್ರ ಅಭ್ಯರ್ಥಿಯನ್ನು ಸಸ್ಪೆನ್ಸ್​ ಆಗಿ ಇಟ್ಟಿದೆ ಕಾಂಗ್ರೆಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us