/newsfirstlive-kannada/media/post_attachments/wp-content/uploads/2024/11/Mnd-5-Years-Old-Boy.jpg)
ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಐದು ವರ್ಷದ ಮಗು, ಹೆಚ್​.ಎಸ್​. ಜಿಷ್ಣುವಿನ ತಲೆಯ ಮೇಲೆ ದೇಗುಲದ ಗೇಟ್ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಜಿಷ್ಣು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾನೆ. ನಿನ್ನೆ ಕಾರ್ತಿಕ ಸೋಮವಾರವಾದ ಹಿನ್ನೆಲೆಯ ಕುಟುಂಬದೊಂದಿಗೆ ಗ್ರಾಮದ ಚೆನ್ನಕೇಶವ ದೇಗುಲಕ್ಕೆ ಹೋಗಿತ್ತು ಮಗು. ಈ ವೇಳೆ ದೇಗುಲದ ಗೇಟ್ ಜಿಷ್ಣು ತಲೆ ಮೇಲೆ ಬಿದ್ದು ತೀವ್ರ ಗಾಯವಾಗಿತ್ತು.
ಗಂಭೀರವಾಗಿ ಗಾಯಗೊಂಡ ಮಗುವನ್ನ ಕೂಡಲೇ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಗು ಇಂದು ಸಾವನ್ನಪ್ಪಿದೆ.
ಘಟನೆ ಸಂಬಂಧ ಅರಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
/newsfirstlive-kannada/media/post_attachments/wp-content/uploads/2024/11/Mnd-5-Years-Old-Boy-1.jpg)
ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಪೊಷಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೇಟು ಮುರಿದು ಸಾಕಷ್ಟು ದಿನಗಳಾದರೂ ಕೂಡ ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರಿದ ಆರೋಪ ಮಾಡಿರುವ ಜಿಷ್ಣು ಪೋಷಕರು ಹಾಗೂ ಗ್ರಾಮಸ್ಥರು, ಧಾರ್ಮಿಕ ದತ್ತಿ ಇಲಾಖೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ದೂರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us