ಫ್ಯಾನ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಗುತ್ತಿಗೆದಾರ
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಗುತ್ತಿಗೆದಾರ ಸಾವು
ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ
ದಾವಣಗೆರೆ: ತುಂಡು ಗುತ್ತಿಗೆದಾರ, ಕಾಂಗ್ರೆಸ್ ಕಾರ್ಯಕರ್ತ ಪ್ರಸನ್ನ ಗೌಡರ್ (54) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ 26 ರಂದು ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಅನಾಹುತ ಮಾಡಿಕೊಂಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: Trailer: 50ನೇ ಸಿನಿಮಾದಲ್ಲಿ ವಿಜಯ್ ಸೇತುಪತಿ! ‘ಮಹಾರಾಜ’ನಾಗಿ ಪ್ರೇಕ್ಷಕರ ತಲೆಗೆ ಹುಳಬಿಟ್ಟ ನಟ!
ಮೃತ ಗುತ್ತಿಗೆದಾರ ಪ್ರಸನ್ನ ಗೌಡರ್.. ಸಾವಿಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಅದರಲ್ಲಿ ಆರೋಪಿಸಿದ್ದಾರಂತೆ. ಮಾಹಿತಿಗಳ ಪ್ರಕಾರ.. 2023 ಫೆಬ್ರವರಿಯಲ್ಲಿ ಸಂತೆಬೆನ್ನೂರು ರೈತ ಸಂಪರ್ಕ ಕೇಂದ್ರಕ್ಕೆ ಸಿಮೆಂಟ್ ಬೆಡ್ ಹಾಕುವ ಕೆಲಸ ಮಾಡಿದ್ದರು. ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆಲಸ ಮಾಡಿದ್ದರಂತೆ. ಕೆಲಸ ಮುಗಿಸಿದ ಬಳಿಕ ಸತತವಾಗಿ ಒಂದು ವರ್ಷದಿಂದ ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.
ಒಂದು ವರ್ಷದಿಂದ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಧಿಕಾರಿಗಳು ಪ್ರಸನ್ನ ಗೌಡರ್ ಅವರನ್ನು ಅಲೆದಾಡಿಸಿದ್ದರಂತೆ. ಕೊನೆಗೂ ಹಣ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಇದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಂತರಿಕ ತನಿಖೆಗೆ ಆದೇಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಫ್ಯಾನ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಗುತ್ತಿಗೆದಾರ
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಗುತ್ತಿಗೆದಾರ ಸಾವು
ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ
ದಾವಣಗೆರೆ: ತುಂಡು ಗುತ್ತಿಗೆದಾರ, ಕಾಂಗ್ರೆಸ್ ಕಾರ್ಯಕರ್ತ ಪ್ರಸನ್ನ ಗೌಡರ್ (54) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ 26 ರಂದು ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಅನಾಹುತ ಮಾಡಿಕೊಂಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: Trailer: 50ನೇ ಸಿನಿಮಾದಲ್ಲಿ ವಿಜಯ್ ಸೇತುಪತಿ! ‘ಮಹಾರಾಜ’ನಾಗಿ ಪ್ರೇಕ್ಷಕರ ತಲೆಗೆ ಹುಳಬಿಟ್ಟ ನಟ!
ಮೃತ ಗುತ್ತಿಗೆದಾರ ಪ್ರಸನ್ನ ಗೌಡರ್.. ಸಾವಿಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಅದರಲ್ಲಿ ಆರೋಪಿಸಿದ್ದಾರಂತೆ. ಮಾಹಿತಿಗಳ ಪ್ರಕಾರ.. 2023 ಫೆಬ್ರವರಿಯಲ್ಲಿ ಸಂತೆಬೆನ್ನೂರು ರೈತ ಸಂಪರ್ಕ ಕೇಂದ್ರಕ್ಕೆ ಸಿಮೆಂಟ್ ಬೆಡ್ ಹಾಕುವ ಕೆಲಸ ಮಾಡಿದ್ದರು. ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆಲಸ ಮಾಡಿದ್ದರಂತೆ. ಕೆಲಸ ಮುಗಿಸಿದ ಬಳಿಕ ಸತತವಾಗಿ ಒಂದು ವರ್ಷದಿಂದ ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.
ಒಂದು ವರ್ಷದಿಂದ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಧಿಕಾರಿಗಳು ಪ್ರಸನ್ನ ಗೌಡರ್ ಅವರನ್ನು ಅಲೆದಾಡಿಸಿದ್ದರಂತೆ. ಕೊನೆಗೂ ಹಣ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಇದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಂತರಿಕ ತನಿಖೆಗೆ ಆದೇಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ