newsfirstkannada.com

ರಾಜ್ಯದಲ್ಲಿ ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು.. ಡೆತ್​​ನೋಟ್ ಪತ್ತೆ..

Share :

Published June 1, 2024 at 8:57am

    ಫ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಗುತ್ತಿಗೆದಾರ

    ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಗುತ್ತಿಗೆದಾರ ಸಾವು

    ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ

ದಾವಣಗೆರೆ: ತುಂಡು ಗುತ್ತಿಗೆದಾರ, ಕಾಂಗ್ರೆಸ್ ಕಾರ್ಯಕರ್ತ ಪ್ರಸನ್ನ ಗೌಡರ್ (54) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ 26 ರಂದು ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಅನಾಹುತ ಮಾಡಿಕೊಂಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Trailer: 50ನೇ ಸಿನಿಮಾದಲ್ಲಿ ವಿಜಯ್​ ಸೇತುಪತಿ! ‘ಮಹಾರಾಜ’ನಾಗಿ ಪ್ರೇಕ್ಷಕರ ತಲೆಗೆ ಹುಳಬಿಟ್ಟ ನಟ!

ಮೃತ ಗುತ್ತಿಗೆದಾರ ಪ್ರಸನ್ನ ಗೌಡರ್.. ಸಾವಿಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.  ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಅದರಲ್ಲಿ ಆರೋಪಿಸಿದ್ದಾರಂತೆ. ಮಾಹಿತಿಗಳ ಪ್ರಕಾರ.. 2023 ಫೆಬ್ರವರಿಯಲ್ಲಿ ಸಂತೆಬೆನ್ನೂರು ರೈತ ಸಂಪರ್ಕ ಕೇಂದ್ರಕ್ಕೆ ಸಿಮೆಂಟ್ ಬೆಡ್ ಹಾಕುವ ಕೆಲಸ ಮಾಡಿದ್ದರು. ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆಲಸ ಮಾಡಿದ್ದರಂತೆ. ಕೆಲಸ ಮುಗಿಸಿದ ಬಳಿಕ ಸತತವಾಗಿ ಒಂದು ವರ್ಷದಿಂದ ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಒಂದು ವರ್ಷದಿಂದ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಧಿಕಾರಿಗಳು ಪ್ರಸನ್ನ ಗೌಡರ್​ ಅವರನ್ನು ಅಲೆದಾಡಿಸಿದ್ದರಂತೆ. ಕೊನೆಗೂ ಹಣ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಇದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಂತರಿಕ ತನಿಖೆಗೆ ಆದೇಶ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು.. ಡೆತ್​​ನೋಟ್ ಪತ್ತೆ..

https://newsfirstlive.com/wp-content/uploads/2024/06/death9.jpg

    ಫ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಗುತ್ತಿಗೆದಾರ

    ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಗುತ್ತಿಗೆದಾರ ಸಾವು

    ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ

ದಾವಣಗೆರೆ: ತುಂಡು ಗುತ್ತಿಗೆದಾರ, ಕಾಂಗ್ರೆಸ್ ಕಾರ್ಯಕರ್ತ ಪ್ರಸನ್ನ ಗೌಡರ್ (54) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ 26 ರಂದು ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಅನಾಹುತ ಮಾಡಿಕೊಂಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Trailer: 50ನೇ ಸಿನಿಮಾದಲ್ಲಿ ವಿಜಯ್​ ಸೇತುಪತಿ! ‘ಮಹಾರಾಜ’ನಾಗಿ ಪ್ರೇಕ್ಷಕರ ತಲೆಗೆ ಹುಳಬಿಟ್ಟ ನಟ!

ಮೃತ ಗುತ್ತಿಗೆದಾರ ಪ್ರಸನ್ನ ಗೌಡರ್.. ಸಾವಿಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.  ಲ್ಯಾಂಡ್ ಆರ್ಮಿ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಅದರಲ್ಲಿ ಆರೋಪಿಸಿದ್ದಾರಂತೆ. ಮಾಹಿತಿಗಳ ಪ್ರಕಾರ.. 2023 ಫೆಬ್ರವರಿಯಲ್ಲಿ ಸಂತೆಬೆನ್ನೂರು ರೈತ ಸಂಪರ್ಕ ಕೇಂದ್ರಕ್ಕೆ ಸಿಮೆಂಟ್ ಬೆಡ್ ಹಾಕುವ ಕೆಲಸ ಮಾಡಿದ್ದರು. ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆಲಸ ಮಾಡಿದ್ದರಂತೆ. ಕೆಲಸ ಮುಗಿಸಿದ ಬಳಿಕ ಸತತವಾಗಿ ಒಂದು ವರ್ಷದಿಂದ ಹಣ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಒಂದು ವರ್ಷದಿಂದ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಧಿಕಾರಿಗಳು ಪ್ರಸನ್ನ ಗೌಡರ್​ ಅವರನ್ನು ಅಲೆದಾಡಿಸಿದ್ದರಂತೆ. ಕೊನೆಗೂ ಹಣ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಇದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಂತರಿಕ ತನಿಖೆಗೆ ಆದೇಶ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More