ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ರಾಜ್ಯದಲ್ಲಿ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಮತ್ತೆ ನಡೆಯುತ್ತಾ?
ರಾಜ್ಯ ಸರ್ಕಾರದ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿರೋ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಲಿದೆ.
ಇದನ್ನು ಓದಿ: ಕಾವೇರಿ ಮಡಿಲಲ್ಲಿ ಮೊದಲ ವರ್ಷಧಾರೆ.. ಮಳೆರಾಯನ ಸಿಂಚನಕ್ಕೆ ಕೊಡಗು ಕೂಲ್, ಕೂಲ್
5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 5, 8, 9 ಹಾಗೂ 11 ನೇ ತರಗತಿಗಳಿಗೆ ಆರಂಭವಾಗಿದ್ದ ಪರೀಕ್ಷೆಯಲ್ಲಿ ಪರೀಕ್ಷಾ ಮಂಡಳಿ ಮುಂದೂಡಿದೆ. ಈ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿದ ನ್ಯಾ. ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರ ನ್ಯಾಯಪೀಠ ಈ ತೀರ್ಪು ಕಾಯ್ದಿರಿಸಿದೆ. ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಮಹತ್ವದ ತೀರ್ಪು ಪ್ರಕಟ ಆಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ರಾಜ್ಯದಲ್ಲಿ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಮತ್ತೆ ನಡೆಯುತ್ತಾ?
ರಾಜ್ಯ ಸರ್ಕಾರದ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿರೋ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಲಿದೆ.
ಇದನ್ನು ಓದಿ: ಕಾವೇರಿ ಮಡಿಲಲ್ಲಿ ಮೊದಲ ವರ್ಷಧಾರೆ.. ಮಳೆರಾಯನ ಸಿಂಚನಕ್ಕೆ ಕೊಡಗು ಕೂಲ್, ಕೂಲ್
5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 5, 8, 9 ಹಾಗೂ 11 ನೇ ತರಗತಿಗಳಿಗೆ ಆರಂಭವಾಗಿದ್ದ ಪರೀಕ್ಷೆಯಲ್ಲಿ ಪರೀಕ್ಷಾ ಮಂಡಳಿ ಮುಂದೂಡಿದೆ. ಈ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿದ ನ್ಯಾ. ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರ ನ್ಯಾಯಪೀಠ ಈ ತೀರ್ಪು ಕಾಯ್ದಿರಿಸಿದೆ. ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಮಹತ್ವದ ತೀರ್ಪು ಪ್ರಕಟ ಆಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ