Advertisment

6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ.. ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

author-image
Veena Gangani
Updated On
6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ.. ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Advertisment
  • ಬಾಬುಸಾಪಾಳ್ಯದಲ್ಲಿ ಮೊನ್ನೆ ಕುಸಿದು ಬಿದ್ದ 6 ಅಂತಸ್ಥಿನ ಕಟ್ಟಡ
  • ಮುಂದುವರೆದ ಅಗ್ನಿ ಶಾಮಕ, ಸಿಬ್ಬಂದಿಯಿಂದ ರಕ್ಷಣಾ ಕಾರ್ಯ
  • ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ

ಬೆಂಗಳೂರು: ಹೆಣ್ಣೂರಿನ ಬಾಬುಸಪಾಳ್ಯದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೃತರ ಪ್ರತಿ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಘಟನೆಯಲ್ಲಿ ಗಾಯಗೊಂಡವರಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

Advertisment

ಇದನ್ನೂ ಓದಿ:ಬಿಗ್​ಬಾಸ್​ ಇತಿಹಾಸದಲ್ಲೇ ಮೊದಲು.. ಕ್ಯಾಪ್ಟನ್ಸಿ ಪಟ್ಟಕ್ಕೆ ಸ್ಪರ್ಧಿಗಳ ಮಧ್ಯೆ ನಡೆದ ಭಾರೀ ಜಿದ್ದಾಜಿದ್ದಿ ಹೇಗಿತ್ತು?

ಸಿಎಂ ಸಿದ್ದರಾಮಯ್ಯ ಅವರು ಇಂದು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆ ನೋಡಿದ ಮೇಲೆ ನನಗೂ ತುಂಬಾ ನೋವಾಗಿದೆ. ಇದರಲ್ಲಿ ಸಾವನ್ನಪ್ಪಿದ 8 ಮಂದಿ ಕುಟುಂಸ್ಥರಿಗೆ ಪರಿಹಾರ ನೀಡಲಾಗುವುದು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಅಲ್ಲದೇ ಗಾಯಗೊಂಡವರಿಗೂ ಆಸ್ಪತ್ರೆಯ ಖರ್ಚು ಅನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹೇಳಿದ್ದಾರೆ.

publive-image

ಒಂದು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆಯ ಜೊತೆ, ಜೊತೆಗೆ ಸಿಲಿಕಾನ್​ ಸಿಟಿ ಒಂದಾದ ಮೇಲ್ಲೊಂದು ಆಘಾತವನ್ನು ಎದುರಿಸುತ್ತಿದೆ. ಮೊನ್ನೆ ಸಂಜೆ ಬಾಬುಸಾಪಾಳ್ಯದಲ್ಲಿ ನೋಡ ನೋಡ್ತಿದ್ದಂತೆ ಕ್ಷಣಾರ್ಧದಲ್ಲೇ ಕುಸಿದ ಆರು ಅಂತಸ್ತಿನ ಕಟ್ಟಡ ನೆಲಸಮವಾಗಿತ್ತು. ಒಳಗಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಅಕ್ಕಪಕ್ಕದವರು ಏನಾಗ್ತಿದೆ ಅಂತ ನೋಡೋವಷ್ಟರಲ್ಲಿ ಪಕ್ಕದಲ್ಲಿದ್ದ ಕಟ್ಟಡ ಕಣ್ಮರೆಯಾಗಿತ್ತು. ಅವಶೇಷಗಳಡಿ ಹೊಟ್ಟೆಪಾಡಿಗಾಗಿ ಕೆಲಸಕ್ಕೆ ಬಂದವರ ಉಸಿರುಗಟ್ಟಿತ್ತು.

Advertisment

ಇದನ್ನೂ ಓದಿ: ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ದರ್ಶನ್​ಗೆ ಸ್ಕ್ಯಾನಿಂಗ್: ಅನಾರೋಗ್ಯ ಕಾರಣದಿಂದ ಬೆಂಗಳೂರಿಗೆ ‘ದಾಸ’ ಶಿಫ್ಟ್?

ಇದೇ ವಿಚಾರವಾಗಿ ಮಾತಾಡಿದ ಸಿಎಂ, ಜೋನಲ್ ಆಫೀಸರ್ ನೊಟೀಸ್ ನೀಡಲು ಸೂಚನೆ ನೀಡಿದ್ದೇವೆ. ಗಾಯಾಳುಗಳ ಆಸ್ಪತ್ರೆ ಖರ್ಚು ಸರ್ಕಾರ ನೋಡಿಕೊಳ್ಳುತ್ತೆ. ಇದು ಮಳೆಯಿಂದ ಆಗಿರೋದಲ್ಲ, ಕಳಪೆ ಕಾಮಗಾರಿಯಿಂದ ಆಗಿರೋದು. ಇನ್ಮುಂದೆ ಅನ್ ಆಥರೈಸ್ಡ್ ಆಗಿ ಯಾರು ಮನೆ ಕಟ್ಟೋ ಆಗಿಲ್ಲ. ಕಟ್ಟಿದ್ರೆ ಇದಕ್ಕೆ ನೇರ ಹೊಣೆ ಜೋನಲ್ ಆಫೀಸರ್ ಹೊಣೆ. ಈ ಕುರಿತು ಬಿಬಿಎಂಪಿ ಆಯುಕ್ತರಿಗೆ ತಿಳಿಸಿದ್ದೇನೆ ಅಂತ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಯಾವುದೇ ಅನಧಿಕೃತ ಕಟ್ಟಡ ರಾಜಧಾನಿಯಲ್ಲಿ ನಿರ್ಮಾಣ ಆಗಬಾರದು. ಹಾಗೇನಾದರೂ ಆದರೆ ಅದಕ್ಕೆ ಸ್ಥಳೀಯ ಬಿಬಿಎಂಪಿ ಆಯುಕ್ತರು, ಸ್ಥಳೀಯ ಅಧಿಕಾರಿಗಳೇ ಹೊಣೆ ಆಗುತ್ತಾರೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment
Advertisment
Advertisment