newsfirstkannada.com

ಭೀಕರ ಅಪಘಾತ.. ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವು; ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Share :

Published May 26, 2024 at 12:37pm

    ಮಂಗಳೂರಿನಿಂದ ಬರುತ್ತಿದ್ದ ಕಾರು, ಟ್ರಕ್ ಮಧ್ಯೆ ಮುಖಾಮುಖಿ ಡಿಕ್ಕಿ

    ಡಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಕಾರಿನಲ್ಲಿದ್ದವರ ಮೃತದೇಹ ಛಿದ್ರ, ಛಿದ್ರ

    ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ

ಇಂದು ಬೆಳಗಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು, ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಮಂಗಳೂರಿನಿಂದ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಟ್ರಕ್‌ಗೆ ಗುದ್ದಿದೆ. ಟ್ರಕ್‌ಗೆ ಡಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಕಾರಿನಲ್ಲಿದ್ದವರ ಮೃತದೇಹ ಛಿದ್ರ, ಛಿದ್ರವಾಗಿದೆ. ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

MH-46-BM3875 ನಂಬರ್‌ನ ಕಂಟೇನರ್ ನೆಲಮಂಗಲದಿಂದ ಮಂಗಳೂರಿನ ಕಡೆಗೆ ಸಾಗುತ್ತಿತ್ತು. KA-53-C-1419 ನಂಬರ್‌ನ ಈಟೀಸ್ ಕಾರು ಮಂಗಳೂರಿನಿಂದ ಆಗಮಿಸುತ್ತಿದ್ದು ಕಾರಿನ ಚಾಲಕ ನಿದ್ದೆಗಣ್ಣಲ್ಲಿ ಡಿವೈಡರ್‌ಗೆ ಗುದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು, ಓರ್ವ ಮಗು ಸಾವನ್ನಪ್ಪಿದೆ.

ಇದನ್ನೂ ಓದಿ: ನಿತ್ಯ ಲೈಂಗಿಕ ಕಿರುಕುಳ.. ತನ್ನ ಮೇಲೆ ಅತ್ಯಾಚಾರ ಎಸಗ್ತಿದ್ದ ವ್ಯಕ್ತಿಯನ್ನ ಕೊಂದ ಬಾಲಕ 

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತ ದುರ್ದೈವಿಗಳು. ಕಾರಿನಲ್ಲಿದ್ದವರು ಹೊಸಕೋಟೆ ತಾಲ್ಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಅಪಘಾತ.. ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವು; ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

https://newsfirstlive.com/wp-content/uploads/2024/05/Hassan-Accident-Death.jpg

    ಮಂಗಳೂರಿನಿಂದ ಬರುತ್ತಿದ್ದ ಕಾರು, ಟ್ರಕ್ ಮಧ್ಯೆ ಮುಖಾಮುಖಿ ಡಿಕ್ಕಿ

    ಡಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಕಾರಿನಲ್ಲಿದ್ದವರ ಮೃತದೇಹ ಛಿದ್ರ, ಛಿದ್ರ

    ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ

ಇಂದು ಬೆಳಗಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು, ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಮಂಗಳೂರಿನಿಂದ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಟ್ರಕ್‌ಗೆ ಗುದ್ದಿದೆ. ಟ್ರಕ್‌ಗೆ ಡಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಕಾರಿನಲ್ಲಿದ್ದವರ ಮೃತದೇಹ ಛಿದ್ರ, ಛಿದ್ರವಾಗಿದೆ. ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

MH-46-BM3875 ನಂಬರ್‌ನ ಕಂಟೇನರ್ ನೆಲಮಂಗಲದಿಂದ ಮಂಗಳೂರಿನ ಕಡೆಗೆ ಸಾಗುತ್ತಿತ್ತು. KA-53-C-1419 ನಂಬರ್‌ನ ಈಟೀಸ್ ಕಾರು ಮಂಗಳೂರಿನಿಂದ ಆಗಮಿಸುತ್ತಿದ್ದು ಕಾರಿನ ಚಾಲಕ ನಿದ್ದೆಗಣ್ಣಲ್ಲಿ ಡಿವೈಡರ್‌ಗೆ ಗುದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು, ಓರ್ವ ಮಗು ಸಾವನ್ನಪ್ಪಿದೆ.

ಇದನ್ನೂ ಓದಿ: ನಿತ್ಯ ಲೈಂಗಿಕ ಕಿರುಕುಳ.. ತನ್ನ ಮೇಲೆ ಅತ್ಯಾಚಾರ ಎಸಗ್ತಿದ್ದ ವ್ಯಕ್ತಿಯನ್ನ ಕೊಂದ ಬಾಲಕ 

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತ ದುರ್ದೈವಿಗಳು. ಕಾರಿನಲ್ಲಿದ್ದವರು ಹೊಸಕೋಟೆ ತಾಲ್ಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More