/newsfirstlive-kannada/media/post_attachments/wp-content/uploads/2025/05/accident7.jpg)
ಅಮರಾವತಿ: ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿರೋ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಮರೋಲು ಮಂಡಲದ ತತಿಚೆರ್ಲಮೋಟು ಬಳಿ ನಡೆದಿದೆ.
ಇದನ್ನೂ ಓದಿ: ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?
ಮಹಾನಂದಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ 8 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇನ್ನೋವಾ ಕಾರು ಅತಿವೇಗದಲ್ಲಿ ಬಂದು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ನಜ್ಜುಗುಜ್ಜಾದ ವಾಹನದೊಳಗೆ ಸಿಲುಕಿದ್ದ ಶವಗಳನ್ನ ಹೊರತೆಗೆದಿದ್ದಾರೆ. ಮೃತರನ್ನು ಭವಾನಿ, ನರಸಿಂಹನ್, ಬಬ್ಲು, ದಿವಾಕರ್, ಸನ್ನಿ ಮತ್ತು ಅಮ್ಕಾಲು ಎಂದು ಪೊಲೀಸರು ಗುರುತಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ