newsfirstkannada.com

ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. ಪ್ರಪಂಚ ನೋಡೋ ಮುನ್ನವೇ 7 ನವಜಾತ ಶಿಶುಗಳು ಸಾವು

Share :

Published May 26, 2024 at 9:23am

    ಆಸ್ಪತ್ರೆಯಲ್ಲಿ ಬೆಂಕಿ ಕಾಣಿಕೊಳ್ಳಲು ನಿಖರವಾದ ಕಾರಣವೇನು.?

    ಚಿಕಿತ್ಸೆಗೆಂದು ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದ ಪೋಷಕರು

    ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ರೂ 7 ಶಿಶುಗಳನ್ನ ಕಾಪಾಡಲಾಗಲಿಲ್ಲ

ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ ನಡೆದಿದೆ.

ವಿವೇಕ್ ವಿಹಾರ್ ನಗರದಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ರಾತ್ರಿ 11:32ರ ಸುಮಾರಿಗೆ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ನವಜಾತ ಶಿಶುಗಳು ಮೃತಪಟ್ಟಿವೆ. ಅಲ್ಲದೇ ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ. 5 ಮಕ್ಕಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ

ಇನ್ನು ಮಾಹಿತಿ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿರುವ 12 ಅಗ್ನಿ ಶಾಮಕ ವಾಹನಗಳು ರಕ್ಷಣೆ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಕೆಲವರನ್ನು ರಕ್ಷಣೆ ಮಾಡಿ ಹೊರಕ್ಕೆ ತಂದಿದ್ದಾರೆ. ಆದ್ರೆ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಂತರ ಈ ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ: T20 ವಿಶ್ವಕಪ್; ರೋಹಿತ್ ಜೊತೆ ಪ್ಲೈಟ್​​ನಲ್ಲಿ ವಿರಾಟ್​ ಕೊಹ್ಲಿ ಹೋಗಲಿಲ್ಲ, ಯಾಕೆ?

 

ಗುಜರಾತ್​​ನ ರಾಜ್​ಕೋಟ್​ನಲ್ಲಿ ಗೇಮಿಂಗ್‌ ಜೋನ್‌ನಲ್ಲಿ ಎಸಿ ಸ್ಫೋಟಗೊಂಡು ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಸುಮಾರು 9 ಮಕ್ಕಳು ಸೇರಿ 27 ಮಂದಿ ಸಜೀವ ದಹನಗೊಂಡಿದ್ದರು. ಇದರ ಬೆನ್ನಲ್ಲೇ ದೆಹಲಿಯಲ್ಲಿ 7 ಮಕ್ಕಳು ಬೆಂಕಿಯಿಂದ ಸಾವನ್ನಪ್ಪಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. ಪ್ರಪಂಚ ನೋಡೋ ಮುನ್ನವೇ 7 ನವಜಾತ ಶಿಶುಗಳು ಸಾವು

https://newsfirstlive.com/wp-content/uploads/2024/05/DELHI_FIRE-1.jpg

    ಆಸ್ಪತ್ರೆಯಲ್ಲಿ ಬೆಂಕಿ ಕಾಣಿಕೊಳ್ಳಲು ನಿಖರವಾದ ಕಾರಣವೇನು.?

    ಚಿಕಿತ್ಸೆಗೆಂದು ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದ ಪೋಷಕರು

    ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ರೂ 7 ಶಿಶುಗಳನ್ನ ಕಾಪಾಡಲಾಗಲಿಲ್ಲ

ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ ನಡೆದಿದೆ.

ವಿವೇಕ್ ವಿಹಾರ್ ನಗರದಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ರಾತ್ರಿ 11:32ರ ಸುಮಾರಿಗೆ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ನವಜಾತ ಶಿಶುಗಳು ಮೃತಪಟ್ಟಿವೆ. ಅಲ್ಲದೇ ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ. 5 ಮಕ್ಕಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ

ಇನ್ನು ಮಾಹಿತಿ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿರುವ 12 ಅಗ್ನಿ ಶಾಮಕ ವಾಹನಗಳು ರಕ್ಷಣೆ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಕೆಲವರನ್ನು ರಕ್ಷಣೆ ಮಾಡಿ ಹೊರಕ್ಕೆ ತಂದಿದ್ದಾರೆ. ಆದ್ರೆ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಂತರ ಈ ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ: T20 ವಿಶ್ವಕಪ್; ರೋಹಿತ್ ಜೊತೆ ಪ್ಲೈಟ್​​ನಲ್ಲಿ ವಿರಾಟ್​ ಕೊಹ್ಲಿ ಹೋಗಲಿಲ್ಲ, ಯಾಕೆ?

 

ಗುಜರಾತ್​​ನ ರಾಜ್​ಕೋಟ್​ನಲ್ಲಿ ಗೇಮಿಂಗ್‌ ಜೋನ್‌ನಲ್ಲಿ ಎಸಿ ಸ್ಫೋಟಗೊಂಡು ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಸುಮಾರು 9 ಮಕ್ಕಳು ಸೇರಿ 27 ಮಂದಿ ಸಜೀವ ದಹನಗೊಂಡಿದ್ದರು. ಇದರ ಬೆನ್ನಲ್ಲೇ ದೆಹಲಿಯಲ್ಲಿ 7 ಮಕ್ಕಳು ಬೆಂಕಿಯಿಂದ ಸಾವನ್ನಪ್ಪಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More