newsfirstkannada.com

Share :

29-05-2023

    ಟ್ರಕ್​​, ಕಾರು ನಡುವೆ ಭೀಕರ ಅಪಘಾತ

    ಸ್ಥಳದಲ್ಲೇ ಏಳು ಮಂದಿ ವಿದ್ಯಾರ್ಥಿಗಳು ಸಾವು!

    ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ದುರ್ಘಟನೆ

ದಿಸ್ಪುರ್​: ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರೋ ಘಟನೆ ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ನಡೆದಿದೆ.

ವೇಗವಾಗಿ ಬಂದ ಎಸ್‌ಯುವಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಎದುರುಗಡೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಅವರು, ಅಪಘಾತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದರಿಂದ ತೀವ್ರ ನೋವಾಗಿದೆ. ಅವರ ಪೋಷಕರು ಮತ್ತು ಕುಟುಂಬಗಳಿಗೆ ನನ್ನ ಸಂತಾಪ ಎಂದು ಬರೆದುಕೊಂಡಿದ್ದಾರೆ.


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

    ಟ್ರಕ್​​, ಕಾರು ನಡುವೆ ಭೀಕರ ಅಪಘಾತ

    ಸ್ಥಳದಲ್ಲೇ ಏಳು ಮಂದಿ ವಿದ್ಯಾರ್ಥಿಗಳು ಸಾವು!

    ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ದುರ್ಘಟನೆ

ದಿಸ್ಪುರ್​: ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರೋ ಘಟನೆ ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ನಡೆದಿದೆ.

ವೇಗವಾಗಿ ಬಂದ ಎಸ್‌ಯುವಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಎದುರುಗಡೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಅವರು, ಅಪಘಾತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದರಿಂದ ತೀವ್ರ ನೋವಾಗಿದೆ. ಅವರ ಪೋಷಕರು ಮತ್ತು ಕುಟುಂಬಗಳಿಗೆ ನನ್ನ ಸಂತಾಪ ಎಂದು ಬರೆದುಕೊಂಡಿದ್ದಾರೆ.


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More