ಮತ್ತೊಂದು ರೈಲು ದುರಂತದಿಂದ ಬೆಚ್ಚಿ ಬಿದ್ದ ಜನರು
ಗೂಡ್ಸ್ ರೈಲಿಗೆ ಸಿಲುಕಿ ಪ್ರಾಣ ಬಿಟ್ಟ 7 ಕಾರ್ಮಿಕರು
ಬಾಲಸೋರ್ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ
ಒರಿಸ್ಸಾ: ಇತ್ತೀಚೆಗೆ ಬಾಲಸೋರ್ನಲ್ಲಿ ತ್ರಿವಳಿ ರೈಲುಗಳ ಡಿಕ್ಕಿ ಹೊಡೆದು 288 ಜನರು ಸಾವನ್ನಪ್ಪಿದ್ದರು. ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಆದರೆ ಆ ಆಘಾತ ಮಾಸುವ ಮುನ್ನವೇ ಮತ್ತೊಂದು ರೈಲು ದುರಂತ ಎದುರಾಗಿದೆ. ಈ ದುರಂತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರ ಗಾಯಗೊಂಡಿದ್ದಾರೆ,
ಜಜ್ಪುರ್ ಕಿಯೋಂಜರ್ ರೋಡ್ ಬಳಿ ಈ ಘಟನೆ ಸಂಭವಿಸಿದೆ. ಮಳೆಗೆ ಗೂಡ್ಸ್ ರೈಲಿನ ರೇಕ್ ಬಳಿ 8 ಜನರು ನಿಂತಿದ್ದರು. ಮಳೆಯಿಂದ ರಕ್ಷಿಸಿಕೊಳ್ಳಲು ರೈಲಿನ ರೇಕ್ ಬಳಿ ನಿಂತಿದ್ದರು. ಈ ವೇಳೆ ರೈಲು ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 7 ಜನರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇತ್ತೀಚಿನ ರೈಲು ದುರಂತ ಮಾಸುವ ಮುನ್ನವೇ ಮತ್ತೊಂದು ಅಘಾತ ಜನರನ್ನು ಬೆಚ್ಚಿ ಬೀಳಿಸಿದೆ. ಹೀಗಾಗಿ 7 ಜನರು ಕಾರ್ಮಿಕರ ಸಾವಿಗೆ ನಿಖರ ಕಾರಣವನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ.
ಇನ್ನು ಮೃತರ ಕುಟುಂಬಕ್ಕೆ ಸಿಎಂ ನವೀನ್ ಪಟ್ನಾಯಕ್ ಪರಿಹಾರ ಘೋಷಿಸಿದ್ದಾರೆ. ತಲಾ ₹ 5 ಲಕ್ಷ ಘೋಷಣೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮತ್ತೊಂದು ರೈಲು ದುರಂತದಿಂದ ಬೆಚ್ಚಿ ಬಿದ್ದ ಜನರು
ಗೂಡ್ಸ್ ರೈಲಿಗೆ ಸಿಲುಕಿ ಪ್ರಾಣ ಬಿಟ್ಟ 7 ಕಾರ್ಮಿಕರು
ಬಾಲಸೋರ್ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ
ಒರಿಸ್ಸಾ: ಇತ್ತೀಚೆಗೆ ಬಾಲಸೋರ್ನಲ್ಲಿ ತ್ರಿವಳಿ ರೈಲುಗಳ ಡಿಕ್ಕಿ ಹೊಡೆದು 288 ಜನರು ಸಾವನ್ನಪ್ಪಿದ್ದರು. ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಆದರೆ ಆ ಆಘಾತ ಮಾಸುವ ಮುನ್ನವೇ ಮತ್ತೊಂದು ರೈಲು ದುರಂತ ಎದುರಾಗಿದೆ. ಈ ದುರಂತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರ ಗಾಯಗೊಂಡಿದ್ದಾರೆ,
ಜಜ್ಪುರ್ ಕಿಯೋಂಜರ್ ರೋಡ್ ಬಳಿ ಈ ಘಟನೆ ಸಂಭವಿಸಿದೆ. ಮಳೆಗೆ ಗೂಡ್ಸ್ ರೈಲಿನ ರೇಕ್ ಬಳಿ 8 ಜನರು ನಿಂತಿದ್ದರು. ಮಳೆಯಿಂದ ರಕ್ಷಿಸಿಕೊಳ್ಳಲು ರೈಲಿನ ರೇಕ್ ಬಳಿ ನಿಂತಿದ್ದರು. ಈ ವೇಳೆ ರೈಲು ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 7 ಜನರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇತ್ತೀಚಿನ ರೈಲು ದುರಂತ ಮಾಸುವ ಮುನ್ನವೇ ಮತ್ತೊಂದು ಅಘಾತ ಜನರನ್ನು ಬೆಚ್ಚಿ ಬೀಳಿಸಿದೆ. ಹೀಗಾಗಿ 7 ಜನರು ಕಾರ್ಮಿಕರ ಸಾವಿಗೆ ನಿಖರ ಕಾರಣವನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ.
ಇನ್ನು ಮೃತರ ಕುಟುಂಬಕ್ಕೆ ಸಿಎಂ ನವೀನ್ ಪಟ್ನಾಯಕ್ ಪರಿಹಾರ ಘೋಷಿಸಿದ್ದಾರೆ. ತಲಾ ₹ 5 ಲಕ್ಷ ಘೋಷಣೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ