ಗ್ರಾಮದಲ್ಲಿ ಇದ್ದ ಆ ಮದ್ಯದಂಗಡಿಯಿಂದಾಗಿ ಈ ಘಟನೆ ನಡೆಯಿತಾ?
ರಾತ್ರಿ ವೇಳೆ ಶೌಚಕ್ಕೆ ಹೋಗಿದ್ದ ಬಾಲಕಿ ವಾಪಸ್ ಮನೆಗೆ ಬರಲಿಲ್ಲ
ಅತ್ಯಾಚಾರ ಎಸಗಿ, ಕೊಲೆ ಮಾಡಿ ಬಾಲಕಿಯನ್ನ ಎಲ್ಲಿ ಬೀಸಾಡಿದ್ದ?
ಭೋಪಾಲ್: ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್ ಸಿಟಿಯ ಪಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಬಾರ್ ಮಾಲೀಕನ ಕೈವಾಡವಿದೆ ಎಂದು ಗ್ರಾಮಸ್ಥರೆಲ್ಲ ಸೇರಿ ಮದ್ಯದ ಅಂಗಡಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಲಕಿಯು ರಾತ್ರಿ ಸಮಯದಲ್ಲಿ ಶೌಚಕ್ಕೆ ಎಂದು ಹೊರ ಹೋಗಿದ್ದಾಳೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಪಾನಮತ್ತ ವ್ಯಕ್ತಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿ ಮೃತದೇಹವನ್ನು ಕೆರೆಯಲ್ಲಿ ಬೀಸಾಕಿದ್ದಾನೆ. ಮಗಳು ಹೊರ ಹೋಗಿದ್ದವಳು ಬಂದಿಲ್ಲವೆಂದು ಪೋಷಕರು ರಾತ್ರಿಯಿಂದಲೇ ಹುಡುಕಾಟ ನಡೆಸಿದಾಗ ಬೆಳಗ್ಗೆ ಕೆರೆಯ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು ಎನ್ನಲಾಗಿದೆ.
ಇದನ್ನೂ ಓದಿ: RCB v/s CSK ಮ್ಯಾಚ್ ಕೇವಲ ₹5 ಕೊಟ್ಟು ವೀಕ್ಷಿಸಿದ ಅಭಿಮಾನಿಗಳು.. ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!
ಇದರಿಂದ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಮದ್ಯದಂಗಡಿ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿ ನಾಶ ಮಾಡಿದ್ದಾರೆ. ಈ ವೇಳೆ ಮದ್ಯದಂಗಡಿ ಮಾಲೀಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಮಾಹಿತಿ ತಿಳಿದು ಗ್ರಾಮಕ್ಕೆ ಆಗಮಿಸಿದ ಪನಗರ ಪೊಲೀಸ್ ಠಾಣೆಯ ಪೊಲೀಸರು, ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗ್ರಾಮದಲ್ಲಿ ಇದ್ದ ಆ ಮದ್ಯದಂಗಡಿಯಿಂದಾಗಿ ಈ ಘಟನೆ ನಡೆಯಿತಾ?
ರಾತ್ರಿ ವೇಳೆ ಶೌಚಕ್ಕೆ ಹೋಗಿದ್ದ ಬಾಲಕಿ ವಾಪಸ್ ಮನೆಗೆ ಬರಲಿಲ್ಲ
ಅತ್ಯಾಚಾರ ಎಸಗಿ, ಕೊಲೆ ಮಾಡಿ ಬಾಲಕಿಯನ್ನ ಎಲ್ಲಿ ಬೀಸಾಡಿದ್ದ?
ಭೋಪಾಲ್: ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್ ಸಿಟಿಯ ಪಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಬಾರ್ ಮಾಲೀಕನ ಕೈವಾಡವಿದೆ ಎಂದು ಗ್ರಾಮಸ್ಥರೆಲ್ಲ ಸೇರಿ ಮದ್ಯದ ಅಂಗಡಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಲಕಿಯು ರಾತ್ರಿ ಸಮಯದಲ್ಲಿ ಶೌಚಕ್ಕೆ ಎಂದು ಹೊರ ಹೋಗಿದ್ದಾಳೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಪಾನಮತ್ತ ವ್ಯಕ್ತಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿ ಮೃತದೇಹವನ್ನು ಕೆರೆಯಲ್ಲಿ ಬೀಸಾಕಿದ್ದಾನೆ. ಮಗಳು ಹೊರ ಹೋಗಿದ್ದವಳು ಬಂದಿಲ್ಲವೆಂದು ಪೋಷಕರು ರಾತ್ರಿಯಿಂದಲೇ ಹುಡುಕಾಟ ನಡೆಸಿದಾಗ ಬೆಳಗ್ಗೆ ಕೆರೆಯ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು ಎನ್ನಲಾಗಿದೆ.
ಇದನ್ನೂ ಓದಿ: RCB v/s CSK ಮ್ಯಾಚ್ ಕೇವಲ ₹5 ಕೊಟ್ಟು ವೀಕ್ಷಿಸಿದ ಅಭಿಮಾನಿಗಳು.. ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!
ಇದರಿಂದ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಮದ್ಯದಂಗಡಿ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿ ನಾಶ ಮಾಡಿದ್ದಾರೆ. ಈ ವೇಳೆ ಮದ್ಯದಂಗಡಿ ಮಾಲೀಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಮಾಹಿತಿ ತಿಳಿದು ಗ್ರಾಮಕ್ಕೆ ಆಗಮಿಸಿದ ಪನಗರ ಪೊಲೀಸ್ ಠಾಣೆಯ ಪೊಲೀಸರು, ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ