ಅರ್ಚಕರು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಳ್ಳತನ
ಖದೀಮನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕದ್ದ ಕಳ್ಳ
ರಾಮನಗರ: ಡಿಸಿಎಂ ಡಿ.ಕೆ ಶಿವಕುಮಾರ್ ಮನೆದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಅರ್ಚಕರು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಳ್ಳ ಕೈಚಳಕ ತೋರಿಸಿದ್ದಾನೆ. ಆದರೆ ಖದೀಮನ ಕಳ್ಳತನದ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕನಕಪುರ ಪಟ್ಟಣದಲ್ಲಿರುವ ಕೆಂಕೇರಮ್ಮ ದೇವಾಲಯವಿದ್ದು, ನಿನ್ನೆ ಬೆಳಿಗ್ಗೆ ಕಳ್ಳತನ ನಡೆದಿದೆ. ಖದೀಮ ಸುಮಾರು 8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕದ್ದೊಯ್ದಿದ್ದಾನೆ. ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕಳ್ಳತನ ಮಾಡಿದ್ದಾನೆ.
ಕಳ್ಳತನದ ದೃಶ್ಯ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅರ್ಚಕರು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಳ್ಳತನ
ಖದೀಮನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕದ್ದ ಕಳ್ಳ
ರಾಮನಗರ: ಡಿಸಿಎಂ ಡಿ.ಕೆ ಶಿವಕುಮಾರ್ ಮನೆದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಅರ್ಚಕರು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಳ್ಳ ಕೈಚಳಕ ತೋರಿಸಿದ್ದಾನೆ. ಆದರೆ ಖದೀಮನ ಕಳ್ಳತನದ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕನಕಪುರ ಪಟ್ಟಣದಲ್ಲಿರುವ ಕೆಂಕೇರಮ್ಮ ದೇವಾಲಯವಿದ್ದು, ನಿನ್ನೆ ಬೆಳಿಗ್ಗೆ ಕಳ್ಳತನ ನಡೆದಿದೆ. ಖದೀಮ ಸುಮಾರು 8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕದ್ದೊಯ್ದಿದ್ದಾನೆ. ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕಳ್ಳತನ ಮಾಡಿದ್ದಾನೆ.
ಕಳ್ಳತನದ ದೃಶ್ಯ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ