newsfirstkannada.com

ಪ್ರಧಾನಿ ಮೋದಿ ಸರ್ಕಾರದಿಂದ ದಿಟ್ಟ ಹೆಜ್ಜೆ; ಕೊನೆಗೂ ಒನ್​ ನೇಷನ್​, ಒನ್​ ಎಲೆಕ್ಷನ್‌ಗಾಗಿ ಸಮಿತಿ ರಚನೆ; ಏನಿದರ ವಿವಾದ?

Share :

Published September 1, 2023 at 12:03pm

Update September 1, 2023 at 12:30pm

    2014 ಲೋಕಸಭಾ ಚುನಾವಣೆ; ಬಿಜೆಪಿ ಪ್ರಣಾಳಿಕೆಯಲ್ಲಿನ ಅಂಶ

    ಒನ್​ ನೇಷನ್​, ಒನ್​ ಎಲೆಕ್ಷನ್​ನಿಂದ ಆಗುವ ಉಪಯೋಗಗಳು ಏನು?

    ದೇಶದಲ್ಲಿ ಒಂದೇ ಬಾರಿ ಲೋಕಸಭೆ, ವಿಧಾನಸಭೆ ಎಲೆಕ್ಷನ್​ ಸಾಧ್ಯನಾ?

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.

ಪ್ರಧಾನಿ ಮೋದಿ ಸರ್ಕಾರ ನಿನ್ನೆಯಷ್ಟೇ ದಿಢೀರನೇ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಈ ಒನ್​ ನೇಷನ್​ ಒನ್​ ಎಲೆಕ್ಷನ್​ನ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ. ಆದ್ರೆ ವಿರೋಧ ಪಕ್ಷಗಳಲ್ಲಿ ಈ ಮಸೂದೆ ಬಗ್ಗೆ ಸಹಮತವಿಲ್ಲ. ಬೇರೆ ಬೇರೆ ಸಮಯಗಳಲ್ಲಿ ರಾಜ್ಯಗಳ ವಿಧಾನಸಭೆ ಮುಗಿಯುತ್ತವೆ. ಹೀಗಾಗಿ ಇದು ಕಾರ್ಯಸಾಧುವಲ್ಲ ಎಂದು ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಒನ್​ ನೇಷನ್​, ಒನ್​ ಎಲೆಕ್ಷನ್​ ಎಂದರೆ ದೇಶಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದಾಗಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಹಲವಾರು ಸಂದರ್ಭಗಳಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ 2014 ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಪ್ರಣಾಳಿಕೆಯಲ್ಲಿಯೂ ಈ ಅಂಶವಿತ್ತು. ಒನ್​ ನೇಷನ್​, ಒನ್​ ಎಲೆಕ್ಷನ್​ನಿಂದ ಉಪಯೋಗ ಜಾಸ್ತಿ ಇದೆ ಎನ್ನಲಾಗಿದೆ. ಇದರಿಂದ ಸಮಯ, ಖರ್ಚುಗಳನ್ನು ಕಡಿಮೆ ಮಾಡಬಹುದು. ದುಂದುವೆಚ್ಚಗಳನ್ನು ತಡೆಯಬಹದು ಎಂದು ಈಗಾಗಲೇ ಸಾಕಷ್ಟು ಬಾರಿ ಕೇಂದ್ರ ಸರ್ಕಾರ ಈ ಬಗ್ಗೆ ಹೇಳಿದೆ.

ಇನ್ನು ಒನ್​ ನೇಷನ್​, ಒನ್​ ಎಲೆಕ್ಷನ್​ ಸಮಿತಿಗೆ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದ್ದಂತೆ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿ ಹೂಗುಚ್ಚ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಧಾನಿ ಮೋದಿ ಸರ್ಕಾರದಿಂದ ದಿಟ್ಟ ಹೆಜ್ಜೆ; ಕೊನೆಗೂ ಒನ್​ ನೇಷನ್​, ಒನ್​ ಎಲೆಕ್ಷನ್‌ಗಾಗಿ ಸಮಿತಿ ರಚನೆ; ಏನಿದರ ವಿವಾದ?

https://newsfirstlive.com/wp-content/uploads/2023/09/PM_MODI-1.jpg

    2014 ಲೋಕಸಭಾ ಚುನಾವಣೆ; ಬಿಜೆಪಿ ಪ್ರಣಾಳಿಕೆಯಲ್ಲಿನ ಅಂಶ

    ಒನ್​ ನೇಷನ್​, ಒನ್​ ಎಲೆಕ್ಷನ್​ನಿಂದ ಆಗುವ ಉಪಯೋಗಗಳು ಏನು?

    ದೇಶದಲ್ಲಿ ಒಂದೇ ಬಾರಿ ಲೋಕಸಭೆ, ವಿಧಾನಸಭೆ ಎಲೆಕ್ಷನ್​ ಸಾಧ್ಯನಾ?

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.

ಪ್ರಧಾನಿ ಮೋದಿ ಸರ್ಕಾರ ನಿನ್ನೆಯಷ್ಟೇ ದಿಢೀರನೇ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಈ ಒನ್​ ನೇಷನ್​ ಒನ್​ ಎಲೆಕ್ಷನ್​ನ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ. ಆದ್ರೆ ವಿರೋಧ ಪಕ್ಷಗಳಲ್ಲಿ ಈ ಮಸೂದೆ ಬಗ್ಗೆ ಸಹಮತವಿಲ್ಲ. ಬೇರೆ ಬೇರೆ ಸಮಯಗಳಲ್ಲಿ ರಾಜ್ಯಗಳ ವಿಧಾನಸಭೆ ಮುಗಿಯುತ್ತವೆ. ಹೀಗಾಗಿ ಇದು ಕಾರ್ಯಸಾಧುವಲ್ಲ ಎಂದು ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಒನ್​ ನೇಷನ್​, ಒನ್​ ಎಲೆಕ್ಷನ್​ ಎಂದರೆ ದೇಶಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದಾಗಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಹಲವಾರು ಸಂದರ್ಭಗಳಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ 2014 ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಪ್ರಣಾಳಿಕೆಯಲ್ಲಿಯೂ ಈ ಅಂಶವಿತ್ತು. ಒನ್​ ನೇಷನ್​, ಒನ್​ ಎಲೆಕ್ಷನ್​ನಿಂದ ಉಪಯೋಗ ಜಾಸ್ತಿ ಇದೆ ಎನ್ನಲಾಗಿದೆ. ಇದರಿಂದ ಸಮಯ, ಖರ್ಚುಗಳನ್ನು ಕಡಿಮೆ ಮಾಡಬಹುದು. ದುಂದುವೆಚ್ಚಗಳನ್ನು ತಡೆಯಬಹದು ಎಂದು ಈಗಾಗಲೇ ಸಾಕಷ್ಟು ಬಾರಿ ಕೇಂದ್ರ ಸರ್ಕಾರ ಈ ಬಗ್ಗೆ ಹೇಳಿದೆ.

ಇನ್ನು ಒನ್​ ನೇಷನ್​, ಒನ್​ ಎಲೆಕ್ಷನ್​ ಸಮಿತಿಗೆ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದ್ದಂತೆ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿ ಹೂಗುಚ್ಚ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More