ಮತ್ತೆ ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ..?
ಅಮಿತ್ ಶಾರನ್ನು ಭೇಟಿ ಮಾಡಿಸ್ತೇವೆ ಅನ್ನೋ ಆರೋಪ
ಈ ಬಗ್ಗೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಿಷ್ಟು!
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ ಎಂದು ಮತ್ತೆ ಹಿಂದಿನ ಗ್ಯಾಂಗ್ ಆ್ಯಕ್ಟೀವ್ ಆಗಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಗಣಿಗ ರವಿಕುಮಾರ್, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬನ್ನಿ ಎಂದು ಆಮಿಷವೊಡ್ಡಿದ್ದಾರೆ ಎಂದರು.
ಎನ್. ಆರ್ ಸಂತೋಷ್ ಇತ್ತೀಚೆಗೆ ನಮ್ಮ ಶಾಸಕರನ್ನು ಗೋಲ್ಡ್ ಪಿಂಚ್ ಹೋಟೆಲ್ನಲ್ಲಿ ಭೇಟಿ ಮಾಡಿದ್ರು. ಸಂತೋಷ್ ಜತೆಗೆ ಇಬ್ಬರು ಎಂಎಲ್ಸಿ, ಬೆಳಗಾವಿ ಮಾಜಿ ಸಚಿವರು ಒಬ್ಬರು 10 ದಿನಗಳ ಹಿಂದೆ ನಮ್ಮ ಐವರು ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು.
ಸದ್ಯದಲ್ಲೇ ಈ ಐವರು ಶಾಸಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅವರೇ ಎಲ್ಲವನ್ನೂ ಬಿಚ್ಚಿಡಲಿದ್ದಾರೆ. ಏನು ಆಫರ್ ಕೊಟ್ರು ಎಂದು ಹೇಳಲಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮತ್ತೆ ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ..?
ಅಮಿತ್ ಶಾರನ್ನು ಭೇಟಿ ಮಾಡಿಸ್ತೇವೆ ಅನ್ನೋ ಆರೋಪ
ಈ ಬಗ್ಗೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಿಷ್ಟು!
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ ಎಂದು ಮತ್ತೆ ಹಿಂದಿನ ಗ್ಯಾಂಗ್ ಆ್ಯಕ್ಟೀವ್ ಆಗಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಗಣಿಗ ರವಿಕುಮಾರ್, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬನ್ನಿ ಎಂದು ಆಮಿಷವೊಡ್ಡಿದ್ದಾರೆ ಎಂದರು.
ಎನ್. ಆರ್ ಸಂತೋಷ್ ಇತ್ತೀಚೆಗೆ ನಮ್ಮ ಶಾಸಕರನ್ನು ಗೋಲ್ಡ್ ಪಿಂಚ್ ಹೋಟೆಲ್ನಲ್ಲಿ ಭೇಟಿ ಮಾಡಿದ್ರು. ಸಂತೋಷ್ ಜತೆಗೆ ಇಬ್ಬರು ಎಂಎಲ್ಸಿ, ಬೆಳಗಾವಿ ಮಾಜಿ ಸಚಿವರು ಒಬ್ಬರು 10 ದಿನಗಳ ಹಿಂದೆ ನಮ್ಮ ಐವರು ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು.
ಸದ್ಯದಲ್ಲೇ ಈ ಐವರು ಶಾಸಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅವರೇ ಎಲ್ಲವನ್ನೂ ಬಿಚ್ಚಿಡಲಿದ್ದಾರೆ. ಏನು ಆಫರ್ ಕೊಟ್ರು ಎಂದು ಹೇಳಲಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ