2ನೇ ಅವಧಿಯ ಕೊನೆ ಬಜೆಟ್ ಮಂಡಿಸಲಿರೋ ಕೇಂದ್ರ ಸರ್ಕಾರ
ಎಷ್ಟು ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ.?
ಸರ್ಕಾರದ 5 ವರ್ಷದ ಸಾಧನೆ ಕುರಿತು ಮಾತಾಡಲಿರೋ ರಾಷ್ಟ್ರಪತಿ
ನವದೆಹಲಿ: 2024ರ ಲೋಕಸಭಾ ಎಲೆಕ್ಷನ್ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದ್ದು ಇದಕ್ಕೆ ಚುನಾವಣಾ ಆಯೋಗ ಮತದಾನದ ದಿನಾಂಕ ಘೋಷಣೆ ಮಾಡಬೇಕಿದೆ. ಸದ್ಯ ಈ ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಆಯವ್ಯಯ ಮಂಡನೆ ಮಾಡಲಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ 2ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲು ಸಿದ್ಧವಾಗಿದ್ದು, ಜನವರಿ 31ರಿಂದ ಫೆಬ್ರವರಿ 9ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮ ಜನವರಿ 31ರಂದು ಸರ್ಕಾರದ 5 ವರ್ಷಗಳ ಸಾಧನೆ ಕುರಿತು ಜಂಟಿ ಸದನದಲ್ಲಿ ಮಾತನಾಡುವ ಮೂಲಕ ಅಧಿವೇಶನ ಆರಂಭಗೊಳ್ಳಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಾಗದ ರಹಿತ ಬಜೆಟ್ ಮಂಡಿಸಲಾಗುತ್ತಿದ್ದು, ಈ ಬಾರಿಯು ಪೇಪರ್ ಲೆಸ್ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಪೂರ್ವ ಬಜೆಟ್ನಲ್ಲಿ ದೇಶದ 5 ಪ್ರಮುಖ ವಿಭಾಗಗಳಾದ ಮಹಿಳೆಯರು, ಬಡವರು, ಯುವಕರು, ರೈತರು ಮತ್ತು ಬುಡಕಟ್ಟು ಜನಾಂಗದ ಕಲ್ಯಾಣ ಯೋಜನೆಗಳ ಮೇಲೆ ಕೇಂದ್ರೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಅವಧಿಗೆ ಎನ್ಡಿಎ ಮೈತ್ರಿಕೂಡ ಅಧಿಕಾರದ ಗದ್ದುಗೆ ಏರುವ ಪ್ರಯತ್ನದಲ್ಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2ನೇ ಅವಧಿಯ ಕೊನೆ ಬಜೆಟ್ ಮಂಡಿಸಲಿರೋ ಕೇಂದ್ರ ಸರ್ಕಾರ
ಎಷ್ಟು ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ.?
ಸರ್ಕಾರದ 5 ವರ್ಷದ ಸಾಧನೆ ಕುರಿತು ಮಾತಾಡಲಿರೋ ರಾಷ್ಟ್ರಪತಿ
ನವದೆಹಲಿ: 2024ರ ಲೋಕಸಭಾ ಎಲೆಕ್ಷನ್ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದ್ದು ಇದಕ್ಕೆ ಚುನಾವಣಾ ಆಯೋಗ ಮತದಾನದ ದಿನಾಂಕ ಘೋಷಣೆ ಮಾಡಬೇಕಿದೆ. ಸದ್ಯ ಈ ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಆಯವ್ಯಯ ಮಂಡನೆ ಮಾಡಲಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ 2ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲು ಸಿದ್ಧವಾಗಿದ್ದು, ಜನವರಿ 31ರಿಂದ ಫೆಬ್ರವರಿ 9ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮ ಜನವರಿ 31ರಂದು ಸರ್ಕಾರದ 5 ವರ್ಷಗಳ ಸಾಧನೆ ಕುರಿತು ಜಂಟಿ ಸದನದಲ್ಲಿ ಮಾತನಾಡುವ ಮೂಲಕ ಅಧಿವೇಶನ ಆರಂಭಗೊಳ್ಳಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಾಗದ ರಹಿತ ಬಜೆಟ್ ಮಂಡಿಸಲಾಗುತ್ತಿದ್ದು, ಈ ಬಾರಿಯು ಪೇಪರ್ ಲೆಸ್ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಪೂರ್ವ ಬಜೆಟ್ನಲ್ಲಿ ದೇಶದ 5 ಪ್ರಮುಖ ವಿಭಾಗಗಳಾದ ಮಹಿಳೆಯರು, ಬಡವರು, ಯುವಕರು, ರೈತರು ಮತ್ತು ಬುಡಕಟ್ಟು ಜನಾಂಗದ ಕಲ್ಯಾಣ ಯೋಜನೆಗಳ ಮೇಲೆ ಕೇಂದ್ರೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಅವಧಿಗೆ ಎನ್ಡಿಎ ಮೈತ್ರಿಕೂಡ ಅಧಿಕಾರದ ಗದ್ದುಗೆ ಏರುವ ಪ್ರಯತ್ನದಲ್ಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ