newsfirstkannada.com

×

ಮದುವೆ ಆಗಿ 8 ತಿಂಗಳು.. ರಾತ್ರಿ ಮಲಗಿದ್ದ ಕೋಣೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

Share :

Published January 18, 2024 at 1:14pm

Update January 18, 2024 at 1:28pm

    ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಕ್ಕೆ ಬರದ ಮಹಿಳೆ

    ಅನುಮಾನಗೊಂಡು ಕಿಟಕಿಯಲ್ಲಿ ಇಣಕಿದಾಗ ಮೃತದೇಹ ಪತ್ತೆ

    ತೀರ್ಥಹಳ್ಳಿ ತಾ. ನಾಲೂರು ಕೊಳಿಗೆ ಸಮೀಪದ ಮನೆಯಲ್ಲಿ ಘಟನೆ

ಶಿವಮೊಗ್ಗ: ಎಂಟು ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲ್ಲೂಕು ನಾಲೂರು ಕೊಳಿಗೆ ಸಮೀಪ ದಾಸನಕೊಡಿಗೆಯಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು 24 ವರ್ಷದ ಶಮಿತಾ ಎಂದು ಗುರುತಿಸಲಾಗಿದೆ.

ಶಮಿತಾ ಪತಿ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ರಾತ್ರಿ ಪಾಳಿ ಇದ್ದಿದ್ದರಿಂದ ಕೆಲಸಕ್ಕೆ ಹೋಗಿದ್ದಾರೆ. ಆ ಬಳಿಕ ಶಮಿತಾ ಮನೆಯ ಉಪ್ಪರಿಗೆ ಮೇಲಿದ್ದ ಕೋಣೆಗೆ ಹೋಗಿ ಮಲಗಿದ್ದಾರೆ.

ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಕ್ಕೆ ಬರದ ಕಾರಣ ಮನೆಯವರು ಬಾಗಿಲು ತಟ್ಟಿದ್ದಾರೆ. ಅನುಮಾನಗೊಂಡು ಕಿಟಕಿಯಲ್ಲಿ ಇಣಕಿದ್ದಾರೆ. ಆಗ ಶಮಿತಾರ ಮೃತದೇಹ ಕಂಡುಬಂದಿದೆ. ನಾಲೂರು ಕೊಳಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: BBK10: ಕೊನೆಗೂ ಕಿಚ್ಚ ಸುದೀಪ್ ಕ್ಷಮೆ ಕೇಳಿದ ರಕ್ಷಕ್‌ ಬುಲೆಟ್‌; ಏನಿದು ಕಿರಿಕ್‌? ಅಸಲಿಗೆ ಆಗಿದ್ದೇನು?

ಪೊಲೀಸರಿಗೆ ವಿಷಯ ಮುಟ್ಟಿಸಿ ಸ್ಥಳೀಯರು ಮನೆಯ ಬಳಿ ಜಮಾಯಿಸಿದ್ದರು. ಮೃತಳ ಫೋಷಕರು ಬರುವರೆಗೂ ಕೋಣೆಯ ಬಾಗಿಲು ತೆಗೆದಿರಲಿಲ್ಲ. ಅಂತಿಮವಾಗಿ ಪೋಷಕರ ಸಮ್ಮುಖದಲ್ಲಿ ಬಾಗಿಲು ಒಡೆದು ಶಮಿತಾರ ಮೃತದೇಹ ಸ್ಥಳಾಂತರ ಮಾಡಲಾಗಿದೆ.

ಮೂಲಗಳ ಪ್ರಕಾರ, ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ. ಅನಾರೋಗ್ಯದ ಕಾರಣಕ್ಕೆ ಹೀಗೆ ಮಾಡಿಕೊಂಡಿದ್ದಾಗಿ ಬರೆದಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆ ಆಗಿ 8 ತಿಂಗಳು.. ರಾತ್ರಿ ಮಲಗಿದ್ದ ಕೋಣೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

https://newsfirstlive.com/wp-content/uploads/2024/01/Shivamogga-Lady-Death.jpg

    ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಕ್ಕೆ ಬರದ ಮಹಿಳೆ

    ಅನುಮಾನಗೊಂಡು ಕಿಟಕಿಯಲ್ಲಿ ಇಣಕಿದಾಗ ಮೃತದೇಹ ಪತ್ತೆ

    ತೀರ್ಥಹಳ್ಳಿ ತಾ. ನಾಲೂರು ಕೊಳಿಗೆ ಸಮೀಪದ ಮನೆಯಲ್ಲಿ ಘಟನೆ

ಶಿವಮೊಗ್ಗ: ಎಂಟು ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲ್ಲೂಕು ನಾಲೂರು ಕೊಳಿಗೆ ಸಮೀಪ ದಾಸನಕೊಡಿಗೆಯಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು 24 ವರ್ಷದ ಶಮಿತಾ ಎಂದು ಗುರುತಿಸಲಾಗಿದೆ.

ಶಮಿತಾ ಪತಿ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ರಾತ್ರಿ ಪಾಳಿ ಇದ್ದಿದ್ದರಿಂದ ಕೆಲಸಕ್ಕೆ ಹೋಗಿದ್ದಾರೆ. ಆ ಬಳಿಕ ಶಮಿತಾ ಮನೆಯ ಉಪ್ಪರಿಗೆ ಮೇಲಿದ್ದ ಕೋಣೆಗೆ ಹೋಗಿ ಮಲಗಿದ್ದಾರೆ.

ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಕ್ಕೆ ಬರದ ಕಾರಣ ಮನೆಯವರು ಬಾಗಿಲು ತಟ್ಟಿದ್ದಾರೆ. ಅನುಮಾನಗೊಂಡು ಕಿಟಕಿಯಲ್ಲಿ ಇಣಕಿದ್ದಾರೆ. ಆಗ ಶಮಿತಾರ ಮೃತದೇಹ ಕಂಡುಬಂದಿದೆ. ನಾಲೂರು ಕೊಳಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: BBK10: ಕೊನೆಗೂ ಕಿಚ್ಚ ಸುದೀಪ್ ಕ್ಷಮೆ ಕೇಳಿದ ರಕ್ಷಕ್‌ ಬುಲೆಟ್‌; ಏನಿದು ಕಿರಿಕ್‌? ಅಸಲಿಗೆ ಆಗಿದ್ದೇನು?

ಪೊಲೀಸರಿಗೆ ವಿಷಯ ಮುಟ್ಟಿಸಿ ಸ್ಥಳೀಯರು ಮನೆಯ ಬಳಿ ಜಮಾಯಿಸಿದ್ದರು. ಮೃತಳ ಫೋಷಕರು ಬರುವರೆಗೂ ಕೋಣೆಯ ಬಾಗಿಲು ತೆಗೆದಿರಲಿಲ್ಲ. ಅಂತಿಮವಾಗಿ ಪೋಷಕರ ಸಮ್ಮುಖದಲ್ಲಿ ಬಾಗಿಲು ಒಡೆದು ಶಮಿತಾರ ಮೃತದೇಹ ಸ್ಥಳಾಂತರ ಮಾಡಲಾಗಿದೆ.

ಮೂಲಗಳ ಪ್ರಕಾರ, ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ. ಅನಾರೋಗ್ಯದ ಕಾರಣಕ್ಕೆ ಹೀಗೆ ಮಾಡಿಕೊಂಡಿದ್ದಾಗಿ ಬರೆದಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More