ಅಯೋಧ್ಯೆ ಕೇಸ್ ಬೆನ್ನಲ್ಲೇ ಬಂದ ಜ್ಞಾನವಾಪಿ ಮಸೀದಿ ವಿವಾದ!
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ದೊಡ್ಡ ಜಯ
ಜ್ಞಾನವಾಪಿ ಮಸೀದಿ ಕೇಸ್ ಕುರಿತು ಕೋರ್ಟ್ ಮಹತ್ವದ ತೀರ್ಪು
ಲಕ್ನೋ: ಅಯೋಧ್ಯೆ ಬೆನ್ನಲ್ಲೇ ಜ್ಞಾನವಾಪಿ ಮಸೀದಿ ಕೇಸಲ್ಲೂ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಇನ್ಮುಂದೆ ಮಸೀದಿ ಬೇಸ್ಮೆಟ್ನಲ್ಲಿ ಪೂಜೆ ಮಾಡಲು ಹಿಂದೂಗಳಿಗೆ ಅವಕಾಶ ನೀಡಿ ವಾರಣಾಸಿ ಕೋರ್ಟ್ ಆದೇಶ ಹೊರಡಿಸಿದೆ.
ಮುಂದಿನ ಒಂದು ವಾರದಲ್ಲಿ ಪೂಜೆಗೆ ವ್ಯವಸ್ಥೆ ಮಾಡಬೇಕು. ಹಿಂದೂಗಳು ಪೂಜೆ ಮಾಡಲು ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಕೋರ್ಟ್ ಸೂಚನೆ ಕೊಟ್ಟಿದೆ. ಕೋರ್ಟ್ ಕೊಟ್ಟ ಈ ತೀರ್ಪಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಈ ಹಿಂದೆಯೇ ವಾರಣಾಸಿ ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ದೇವಾಲಯ ಮರುಸ್ಥಾಪನೆಗೆ ಆದೇಶ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಎರಡು ಕಡೆಯವರ ವಾದ ಆಲಿಸಿದ ಹೈಕೋರ್ಟ್ ಆರ್ಕಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ನೇತೃತ್ವದಲ್ಲಿ ಸಮಿತಿ ಒಂದು ರಚಿಸಿದೆ. ಅಲ್ಲದೇ ಈ ಕುರಿತು ಕೂಲಂಕಷ ತನಿಖೆ ನಡೆಸಿ ಪರಿಶೀಲಿಸಿ ಒಂದು ರಿಪೋರ್ಟ್ ಸಿದ್ಧತೆ ಮಾಡಿ ಎಂದು ಸಮಿತಿಗೆ ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಎರಡು ಕಡೆಯವರು ರಿಪೋರ್ಟ್ ಸಲ್ಲಿಸಿದ ಬಳಿಕ ಕೋರ್ಟ್ ಈ ಆದೇಶ ಕೊಟ್ಟಿದೆ.
ಏನಿದು ಕೇಸ್..?
ಜ್ಞಾನವ್ಯಾಪಿ ಮಸೀದಿ ಉತ್ತರ ಪ್ರದೇಶದ ಬನಾರಸ್ನಲ್ಲಿ ಇದೆ. 1669ರಲ್ಲಿ ಮೊಘಲ ದೊರೆ ಔರಂಗಜೇಬ ಕೆಡವಿದ್ದರು ಎನ್ನಲಾದ ಹಳೆ ಶಿವ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸ್ಥಳ ಮೂಲತಃ ವಿಶ್ವೇಶ್ವರ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಬಸಾರಸ್ ಮೂಲದ ಅತ್ಯಂತ ಪ್ರಸಿದ್ಧ ಬ್ರಾಹ್ಮಣ ಕುಟುಂಬಕ್ಕೆ ಸೇರಿದ ನಾರಾಯಣ ಭಟ್ಟರು ಎಂಬುವರು ಸ್ಥಾಪಿಸಿದ್ದರು ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಯೋಧ್ಯೆ ಕೇಸ್ ಬೆನ್ನಲ್ಲೇ ಬಂದ ಜ್ಞಾನವಾಪಿ ಮಸೀದಿ ವಿವಾದ!
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ದೊಡ್ಡ ಜಯ
ಜ್ಞಾನವಾಪಿ ಮಸೀದಿ ಕೇಸ್ ಕುರಿತು ಕೋರ್ಟ್ ಮಹತ್ವದ ತೀರ್ಪು
ಲಕ್ನೋ: ಅಯೋಧ್ಯೆ ಬೆನ್ನಲ್ಲೇ ಜ್ಞಾನವಾಪಿ ಮಸೀದಿ ಕೇಸಲ್ಲೂ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಇನ್ಮುಂದೆ ಮಸೀದಿ ಬೇಸ್ಮೆಟ್ನಲ್ಲಿ ಪೂಜೆ ಮಾಡಲು ಹಿಂದೂಗಳಿಗೆ ಅವಕಾಶ ನೀಡಿ ವಾರಣಾಸಿ ಕೋರ್ಟ್ ಆದೇಶ ಹೊರಡಿಸಿದೆ.
ಮುಂದಿನ ಒಂದು ವಾರದಲ್ಲಿ ಪೂಜೆಗೆ ವ್ಯವಸ್ಥೆ ಮಾಡಬೇಕು. ಹಿಂದೂಗಳು ಪೂಜೆ ಮಾಡಲು ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಕೋರ್ಟ್ ಸೂಚನೆ ಕೊಟ್ಟಿದೆ. ಕೋರ್ಟ್ ಕೊಟ್ಟ ಈ ತೀರ್ಪಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಈ ಹಿಂದೆಯೇ ವಾರಣಾಸಿ ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ದೇವಾಲಯ ಮರುಸ್ಥಾಪನೆಗೆ ಆದೇಶ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಎರಡು ಕಡೆಯವರ ವಾದ ಆಲಿಸಿದ ಹೈಕೋರ್ಟ್ ಆರ್ಕಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ನೇತೃತ್ವದಲ್ಲಿ ಸಮಿತಿ ಒಂದು ರಚಿಸಿದೆ. ಅಲ್ಲದೇ ಈ ಕುರಿತು ಕೂಲಂಕಷ ತನಿಖೆ ನಡೆಸಿ ಪರಿಶೀಲಿಸಿ ಒಂದು ರಿಪೋರ್ಟ್ ಸಿದ್ಧತೆ ಮಾಡಿ ಎಂದು ಸಮಿತಿಗೆ ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಎರಡು ಕಡೆಯವರು ರಿಪೋರ್ಟ್ ಸಲ್ಲಿಸಿದ ಬಳಿಕ ಕೋರ್ಟ್ ಈ ಆದೇಶ ಕೊಟ್ಟಿದೆ.
ಏನಿದು ಕೇಸ್..?
ಜ್ಞಾನವ್ಯಾಪಿ ಮಸೀದಿ ಉತ್ತರ ಪ್ರದೇಶದ ಬನಾರಸ್ನಲ್ಲಿ ಇದೆ. 1669ರಲ್ಲಿ ಮೊಘಲ ದೊರೆ ಔರಂಗಜೇಬ ಕೆಡವಿದ್ದರು ಎನ್ನಲಾದ ಹಳೆ ಶಿವ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸ್ಥಳ ಮೂಲತಃ ವಿಶ್ವೇಶ್ವರ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಬಸಾರಸ್ ಮೂಲದ ಅತ್ಯಂತ ಪ್ರಸಿದ್ಧ ಬ್ರಾಹ್ಮಣ ಕುಟುಂಬಕ್ಕೆ ಸೇರಿದ ನಾರಾಯಣ ಭಟ್ಟರು ಎಂಬುವರು ಸ್ಥಾಪಿಸಿದ್ದರು ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ