ಹೋಟೆಲ್ ಮುಂಭಾಗ ಯುವಕನ ಮೇಲೆ ಆ್ಯಸಿಡ್ ದಾಳಿ
ಬೆಂಗಳೂರಿಗೆ ಹೊರಟಿದ್ದ ವೇಳೆ ದಾಳಿ ಮಾಡಿದ ದುಷ್ಕರ್ಮಿಗಳು
ಆರೋಪಿಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕ ಮೂವರು
ಚಿತ್ರದುರ್ಗ: ಇಲ್ಲಿನ ಹಿರಿಯೂರು ಪಟ್ಟಣದ ಹೋಟೆಲ್ ಮುಂಭಾಗ ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಗಳನ್ನು ಹಿರಿಯೂರು ನಗರ ಪೊಲೀಸರು ಬಂಧಿಸಿದ್ದಾರೆ.
ಹೊಳಲ್ಕೆರೆ ಮೂಲದ ಅರುಣ್ ಕುಮಾರ್ ಎಂಬಾತನ ಮೇಲೆ ಜನವರಿಯಲ್ಲಿ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ರು. ಈ ಸಂಬಂಧ ಬೆಂಗಳೂರು ಮೂಲದ ಪ್ರಜ್ವಲ್, ಕೊರಟಗೆರೆ ಮೂಲದ ನಿತಿನ್, ಹಿರಿಯೂರಿನ ಗಿರೀಶ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಅರುಣ್ ಕುಮಾರ್ ಬೆಂಗಳೂರಿಗೆ ಹೊರಟಿದ್ದ ವೇಳೆ ಜನವರಿ 10ರಂದು ಆ್ಯಸಿಡ್ ದಾಳಿ ನಡೆಸಿದ್ರು. ಆರೋಪಿಗಳ ಜಾಡು ಹಿಡಿದು ಹೊರಟ ಹಿರಿಯೂರು ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೋಟೆಲ್ ಮುಂಭಾಗ ಯುವಕನ ಮೇಲೆ ಆ್ಯಸಿಡ್ ದಾಳಿ
ಬೆಂಗಳೂರಿಗೆ ಹೊರಟಿದ್ದ ವೇಳೆ ದಾಳಿ ಮಾಡಿದ ದುಷ್ಕರ್ಮಿಗಳು
ಆರೋಪಿಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕ ಮೂವರು
ಚಿತ್ರದುರ್ಗ: ಇಲ್ಲಿನ ಹಿರಿಯೂರು ಪಟ್ಟಣದ ಹೋಟೆಲ್ ಮುಂಭಾಗ ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಗಳನ್ನು ಹಿರಿಯೂರು ನಗರ ಪೊಲೀಸರು ಬಂಧಿಸಿದ್ದಾರೆ.
ಹೊಳಲ್ಕೆರೆ ಮೂಲದ ಅರುಣ್ ಕುಮಾರ್ ಎಂಬಾತನ ಮೇಲೆ ಜನವರಿಯಲ್ಲಿ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ರು. ಈ ಸಂಬಂಧ ಬೆಂಗಳೂರು ಮೂಲದ ಪ್ರಜ್ವಲ್, ಕೊರಟಗೆರೆ ಮೂಲದ ನಿತಿನ್, ಹಿರಿಯೂರಿನ ಗಿರೀಶ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಅರುಣ್ ಕುಮಾರ್ ಬೆಂಗಳೂರಿಗೆ ಹೊರಟಿದ್ದ ವೇಳೆ ಜನವರಿ 10ರಂದು ಆ್ಯಸಿಡ್ ದಾಳಿ ನಡೆಸಿದ್ರು. ಆರೋಪಿಗಳ ಜಾಡು ಹಿಡಿದು ಹೊರಟ ಹಿರಿಯೂರು ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ