ಸರ್ಕಾರ ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಿಸುತ್ತಿದೆ
ಭಾರತದ ಅಖಂಡತೆ, ಸಾರ್ವಭೌಮತ್ವ ಕಾಪಾಡ್ತೇನೆ ಎಂದು ಪ್ರತಿಜ್ಞೆ
ಸಂಸದರು ಪ್ರತಿಜ್ಞೆ ಮಾಡಿದ್ದನ್ನ ಮರೆತು ಏನೇನೋ ಮಾತಾಡ್ತಿದ್ದಾರೆ
ಹುಬ್ಬಳ್ಳಿ: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಡಿ.ಕೆ ಸುರೇಶ್ ಸಂಸದರಾಗಿದ್ದು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ರಾಜ್ಯ ಸರ್ಕಾರ ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಣೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಂಸದರು ಈ ರೀತಿ ಮಾತನಾಡಿರುವುದು ಖಂಡನೀಯ. ಯಾವುದೇ ಒಬ್ಬ ಜನಪ್ರತಿನಿಧಿ ತಮ್ಮ ಸ್ಥಾನ ಅಲಂಕರಿಸುವ ಸಂದರ್ಭದಲ್ಲಿ ಸಂವಿಧಾನವನ್ನು ಮುಂದಿಟ್ಟುಕೊಂಡು ಪ್ರತಿಜ್ಞೆ ಮಾಡುತ್ತಾರೆ. ಈ ವೇಳೆ ಭಾರತದ ಅಖಂಡತೆ, ಸಾರ್ವಭೌಮತ್ವವನ್ನು ಕಾಪಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿರುವುದನ್ನ ಸುರೇಶ್ ಅವ್ರು ಮರೆತು ಹೋಗಿದ್ದಾರೆ ಎಂದು ಟಾಂಗ್ ಕೊಟ್ಟರು.
ಸಂಸದರು ಯಾವ ಅಭಿವೃದ್ಧಿ, ಯಾವ ಅನುದಾನದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಮ್ಮ ರಾಜ್ಯಕ್ಕೆ 2004-2014ರವರೆಗೆ 60 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. 2014 ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ 2 ಲಕ್ಷ 36 ಸಾವಿರ ಕೋಟಿ ರೂ.ಗಳನ್ನ ಕೊಟ್ಟಿದ್ದಾರೆ.
ಟ್ಯಾಕ್ಸ್ ಬಗ್ಗೆ ಪದೇ ಪದೆ ಮಾತಾಡುತ್ತಾರೆ. ಯುಪಿಎ ಇದ್ದಾಗ 81 ಸಾವಿರ ಕೋಟಿ ರೂ.ಗಳು ರಾಜ್ಯಕ್ಕೆ ಬಂದಿದೆ. ಬಿಜೆಪಿ ಸರ್ಕಾರದಲ್ಲಿ 2 ಲಕ್ಷ 82 ಸಾವಿರ ಕೋಟಿ ರೂ. ತೆರಿಗೆ ಹಣ ಕರ್ನಾಟಕಕ್ಕೆ ಬಂದಿದೆ. ಒಬ್ಬ ಸಂಸದರು ಬೇಜವಾಬ್ದಾರಿಯುತದಿಂದ ನಡೆದುಕೊಂಡಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸರ್ಕಾರ ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಿಸುತ್ತಿದೆ
ಭಾರತದ ಅಖಂಡತೆ, ಸಾರ್ವಭೌಮತ್ವ ಕಾಪಾಡ್ತೇನೆ ಎಂದು ಪ್ರತಿಜ್ಞೆ
ಸಂಸದರು ಪ್ರತಿಜ್ಞೆ ಮಾಡಿದ್ದನ್ನ ಮರೆತು ಏನೇನೋ ಮಾತಾಡ್ತಿದ್ದಾರೆ
ಹುಬ್ಬಳ್ಳಿ: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಡಿ.ಕೆ ಸುರೇಶ್ ಸಂಸದರಾಗಿದ್ದು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ರಾಜ್ಯ ಸರ್ಕಾರ ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಣೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಂಸದರು ಈ ರೀತಿ ಮಾತನಾಡಿರುವುದು ಖಂಡನೀಯ. ಯಾವುದೇ ಒಬ್ಬ ಜನಪ್ರತಿನಿಧಿ ತಮ್ಮ ಸ್ಥಾನ ಅಲಂಕರಿಸುವ ಸಂದರ್ಭದಲ್ಲಿ ಸಂವಿಧಾನವನ್ನು ಮುಂದಿಟ್ಟುಕೊಂಡು ಪ್ರತಿಜ್ಞೆ ಮಾಡುತ್ತಾರೆ. ಈ ವೇಳೆ ಭಾರತದ ಅಖಂಡತೆ, ಸಾರ್ವಭೌಮತ್ವವನ್ನು ಕಾಪಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿರುವುದನ್ನ ಸುರೇಶ್ ಅವ್ರು ಮರೆತು ಹೋಗಿದ್ದಾರೆ ಎಂದು ಟಾಂಗ್ ಕೊಟ್ಟರು.
ಸಂಸದರು ಯಾವ ಅಭಿವೃದ್ಧಿ, ಯಾವ ಅನುದಾನದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಮ್ಮ ರಾಜ್ಯಕ್ಕೆ 2004-2014ರವರೆಗೆ 60 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. 2014 ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ 2 ಲಕ್ಷ 36 ಸಾವಿರ ಕೋಟಿ ರೂ.ಗಳನ್ನ ಕೊಟ್ಟಿದ್ದಾರೆ.
ಟ್ಯಾಕ್ಸ್ ಬಗ್ಗೆ ಪದೇ ಪದೆ ಮಾತಾಡುತ್ತಾರೆ. ಯುಪಿಎ ಇದ್ದಾಗ 81 ಸಾವಿರ ಕೋಟಿ ರೂ.ಗಳು ರಾಜ್ಯಕ್ಕೆ ಬಂದಿದೆ. ಬಿಜೆಪಿ ಸರ್ಕಾರದಲ್ಲಿ 2 ಲಕ್ಷ 82 ಸಾವಿರ ಕೋಟಿ ರೂ. ತೆರಿಗೆ ಹಣ ಕರ್ನಾಟಕಕ್ಕೆ ಬಂದಿದೆ. ಒಬ್ಬ ಸಂಸದರು ಬೇಜವಾಬ್ದಾರಿಯುತದಿಂದ ನಡೆದುಕೊಂಡಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ