ಹಲವಾರು ದಿನಗಳಿಂದ ಗ್ರಾಮದ ಸುತ್ತಮುತ್ತ ಓಡಾಡ್ತಿದ್ದ ಚಿರತೆ
ಭಯದಲ್ಲೇ ಹೊಲ, ಗದ್ದೆಗಳಿಗೆ ಹೋಗಿ ಬರುತ್ತಿದ್ದ ಗ್ರಾಮದ ರೈತರು
ಸಾಕು ಪ್ರಾಣಿಗಳ ಮೇಲೆ ಅಟ್ಯಾಕ್ ಮಾಡಿ ಗಾಸಿಗೊಳಿಸಿದ್ದ ಚಿರತೆ
ಮೈಸೂರು: ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಕೋಳಿ ಫಾರ್ಮ್ನಲ್ಲಿಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಜಯಪುರ ಹೋಬಳಿಯ ದಾರಿಪುರ ಗ್ರಾಮದಲ್ಲಿ ನಡೆದಿದೆ.
ದಾರಿಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರಲ್ಲಿ ಈ ಚಿರತೆ ಭಯ ಹುಟ್ಟಿಸಿತ್ತು. ಹಲವಾರು ದಿನಗಳಿಂದ ಈ ಭಾಗದಲ್ಲಿ ಅಡ್ಡಾಡುತ್ತ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಇದರಿಂದ ಎಚ್ಚೆತ್ತುಕೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಬಳಿಕ ದಾರಿಪುರ ಗ್ರಾಮದ ಕೋಳಿ ಫಾರ್ಮ್ನಲ್ಲಿ ಬೋನ್ ಇಟ್ಟಿದ್ದರು. ಸಿಬ್ಬಂದಿ ಯೋಜನೆಯಂತೆ 2 ವರ್ಷದ ಹೆಣ್ಣು ಚಿರತೆ ಸದ್ಯ ಬೋನಿಗೆ ಬಿದ್ದಿದ್ದು ಗ್ರಾಮಸ್ಥರೆಲ್ಲ ನಿಟ್ಟುಸಿರು ಬಿಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು ದೂರದ ಅರಣ್ಯಕ್ಕೆ ಸೆರೆ ಸಿಕ್ಕಿರುವ ಚಿರತೆ ಬಿಡಲು ರವಾನೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಲವಾರು ದಿನಗಳಿಂದ ಗ್ರಾಮದ ಸುತ್ತಮುತ್ತ ಓಡಾಡ್ತಿದ್ದ ಚಿರತೆ
ಭಯದಲ್ಲೇ ಹೊಲ, ಗದ್ದೆಗಳಿಗೆ ಹೋಗಿ ಬರುತ್ತಿದ್ದ ಗ್ರಾಮದ ರೈತರು
ಸಾಕು ಪ್ರಾಣಿಗಳ ಮೇಲೆ ಅಟ್ಯಾಕ್ ಮಾಡಿ ಗಾಸಿಗೊಳಿಸಿದ್ದ ಚಿರತೆ
ಮೈಸೂರು: ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಕೋಳಿ ಫಾರ್ಮ್ನಲ್ಲಿಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಜಯಪುರ ಹೋಬಳಿಯ ದಾರಿಪುರ ಗ್ರಾಮದಲ್ಲಿ ನಡೆದಿದೆ.
ದಾರಿಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರಲ್ಲಿ ಈ ಚಿರತೆ ಭಯ ಹುಟ್ಟಿಸಿತ್ತು. ಹಲವಾರು ದಿನಗಳಿಂದ ಈ ಭಾಗದಲ್ಲಿ ಅಡ್ಡಾಡುತ್ತ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಇದರಿಂದ ಎಚ್ಚೆತ್ತುಕೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಬಳಿಕ ದಾರಿಪುರ ಗ್ರಾಮದ ಕೋಳಿ ಫಾರ್ಮ್ನಲ್ಲಿ ಬೋನ್ ಇಟ್ಟಿದ್ದರು. ಸಿಬ್ಬಂದಿ ಯೋಜನೆಯಂತೆ 2 ವರ್ಷದ ಹೆಣ್ಣು ಚಿರತೆ ಸದ್ಯ ಬೋನಿಗೆ ಬಿದ್ದಿದ್ದು ಗ್ರಾಮಸ್ಥರೆಲ್ಲ ನಿಟ್ಟುಸಿರು ಬಿಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು ದೂರದ ಅರಣ್ಯಕ್ಕೆ ಸೆರೆ ಸಿಕ್ಕಿರುವ ಚಿರತೆ ಬಿಡಲು ರವಾನೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ