newsfirstkannada.com

×

ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಕಾರು; ಮೂವರು ಯುವಕರು ದಾರುಣ ಸಾವು

Share :

Published February 4, 2024 at 12:27pm

    ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವ್ಯಕ್ತಿಗಳ ಪೈಕಿ ಮೂವರು ಸಾವು

    ಬಂದ ವೇಗದಲ್ಲೇ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು, ಹಳ್ಳಕ್ಕೆ ಬಿತ್ತು

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಂಡ್ಯ: ಕಾರೊಂದು ಕರೆಂಟ್ ಕಂಬಕ್ಕೆ ಭಯಾನಕವಾಗಿ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ.

ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ (32) ಮೃತ ದುರ್ದೈವಿಗಳು. ಸಾಗರ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಾಲ್ವರು ಸೇರಿ ತಡರಾತ್ರಿ ಅಕ್ಕಿಹೆಬ್ಬಾಳು ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಆಗ ಅಕ್ಕಿಹೆಬ್ಬಾಳುವಿನ ಸೇತುವೆ ಬಳಿ ಬರುತ್ತಿದ್ದಂತೆ ಕಾರು ವೇಗದಲ್ಲೇ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

ಇದರಿಂದ ಮೂವರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿದ್ದ ರಭಸಕ್ಕೆ ಕಾರು ಫುಲ್ ಜಖಂ ಆಗಿದೆ. ಈ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಕಾರು; ಮೂವರು ಯುವಕರು ದಾರುಣ ಸಾವು

https://newsfirstlive.com/wp-content/uploads/2024/02/MND_CAR_ACCIDENT.jpg

    ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವ್ಯಕ್ತಿಗಳ ಪೈಕಿ ಮೂವರು ಸಾವು

    ಬಂದ ವೇಗದಲ್ಲೇ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು, ಹಳ್ಳಕ್ಕೆ ಬಿತ್ತು

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಂಡ್ಯ: ಕಾರೊಂದು ಕರೆಂಟ್ ಕಂಬಕ್ಕೆ ಭಯಾನಕವಾಗಿ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ.

ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ (32) ಮೃತ ದುರ್ದೈವಿಗಳು. ಸಾಗರ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಾಲ್ವರು ಸೇರಿ ತಡರಾತ್ರಿ ಅಕ್ಕಿಹೆಬ್ಬಾಳು ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಆಗ ಅಕ್ಕಿಹೆಬ್ಬಾಳುವಿನ ಸೇತುವೆ ಬಳಿ ಬರುತ್ತಿದ್ದಂತೆ ಕಾರು ವೇಗದಲ್ಲೇ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

ಇದರಿಂದ ಮೂವರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿದ್ದ ರಭಸಕ್ಕೆ ಕಾರು ಫುಲ್ ಜಖಂ ಆಗಿದೆ. ಈ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More