ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಯುವಕನ್ನ ಹತ್ಯೆ ಮಾಡಿರುವ ಶಂಕೆ
ಯುವಕನ ಮೃತದೇಹವನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ
ಸದ್ಯ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು
ಕಲಬುರಗಿ: ತಡರಾತ್ರಿ ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ರೋಹನ್ ವಾಕಡೆ (22) ಹತ್ಯೆಯಾಗಿರುವ ಯುವಕ. ಯಾವುದೋ ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಗಲಾಟೆ ತೆಗೆದುಕೊಂಡಿದ್ದಾರೆ. ಬಳಿಕ ತಮ್ಮ ಬಳಿ ಇದ್ದಂತಹ ಮಾರಕಾಸ್ತ್ರಗಳಿಂದ ಬರ್ಬರವಾಗಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಯುವಕನ್ನ ಹತ್ಯೆ ಮಾಡಿರುವ ಶಂಕೆ
ಯುವಕನ ಮೃತದೇಹವನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ
ಸದ್ಯ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು
ಕಲಬುರಗಿ: ತಡರಾತ್ರಿ ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ರೋಹನ್ ವಾಕಡೆ (22) ಹತ್ಯೆಯಾಗಿರುವ ಯುವಕ. ಯಾವುದೋ ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಗಲಾಟೆ ತೆಗೆದುಕೊಂಡಿದ್ದಾರೆ. ಬಳಿಕ ತಮ್ಮ ಬಳಿ ಇದ್ದಂತಹ ಮಾರಕಾಸ್ತ್ರಗಳಿಂದ ಬರ್ಬರವಾಗಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ