ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ
ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಆದೇಶ ಅನ್ವಯ
ಹೋಟೆಲ್, ಮಾಲ್, ರೆಸ್ಟೋರೆಂಟ್, ಮಾರ್ಕೆಟ್ ಎಲ್ಲವೂ ಓಪನ್!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಾಜ್ಯ ಬಜೆಟ್ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ನಗರದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಂತರಾಷ್ಟ್ರೀಯ ತಜ್ಞರ ಸಮಿತಿ ರಚಿಸಲಾಗುವುದು. 70 ಕಿಲೋ ಮೀಟರ್ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ ಮಾಡಲು 27,000 ಕೋಟಿ ಹಣ ಮೀಸಲಿಡಲಾಗಿದೆ.
ಇನ್ನು, ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುವುದು. ಸರ್ಕಾರಿ ಇಲಾಖೆಗಳ ವಿದ್ಯುತ್ ಶುಲ್ಕ ಕಡಿತಕ್ಕೆ ಸೋಲಾರ್ ಪಾರ್ಕ್, 2025 ರ ಒಳಗೆ ಮೆಟ್ರೋ ರೈಲು 44 ಕಿಲೋ ಮೀಟರ್, ವಿಸ್ತರಣೆ, 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೂ ಮೆಟ್ರೋ ಮಾರ್ಗ ಕಲ್ಪಿಸಲಾಗುತ್ತೆ.
ಇನ್ನು ಬೆಂಗಳೂರಲ್ಲಿ ತಡರಾತ್ರಿ 1 ಗಂಟೆವರೆಗೂ ವ್ಯಾಪಾರ ವಹಿವಾಟಿಗೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬಜೆಟ್ನಲ್ಲಿ ಘೋಷಿಸಿದ್ದಾರೆ. ಹೀಗಾಗಿ ಹೋಟೆಲ್, ಬಾರ್. ಪಬ್, ಮಾಲ್, ರೆಸ್ಟೋರೆಂಟ್ ಎಲ್ಲವೂ ತಡರಾತ್ರಿ 1 ಗಂಟೆವರೆಗೂ ಕಾರ್ಯನಿರ್ವಹಿಸಲಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ
ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಆದೇಶ ಅನ್ವಯ
ಹೋಟೆಲ್, ಮಾಲ್, ರೆಸ್ಟೋರೆಂಟ್, ಮಾರ್ಕೆಟ್ ಎಲ್ಲವೂ ಓಪನ್!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಾಜ್ಯ ಬಜೆಟ್ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ನಗರದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಂತರಾಷ್ಟ್ರೀಯ ತಜ್ಞರ ಸಮಿತಿ ರಚಿಸಲಾಗುವುದು. 70 ಕಿಲೋ ಮೀಟರ್ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ ಮಾಡಲು 27,000 ಕೋಟಿ ಹಣ ಮೀಸಲಿಡಲಾಗಿದೆ.
ಇನ್ನು, ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುವುದು. ಸರ್ಕಾರಿ ಇಲಾಖೆಗಳ ವಿದ್ಯುತ್ ಶುಲ್ಕ ಕಡಿತಕ್ಕೆ ಸೋಲಾರ್ ಪಾರ್ಕ್, 2025 ರ ಒಳಗೆ ಮೆಟ್ರೋ ರೈಲು 44 ಕಿಲೋ ಮೀಟರ್, ವಿಸ್ತರಣೆ, 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೂ ಮೆಟ್ರೋ ಮಾರ್ಗ ಕಲ್ಪಿಸಲಾಗುತ್ತೆ.
ಇನ್ನು ಬೆಂಗಳೂರಲ್ಲಿ ತಡರಾತ್ರಿ 1 ಗಂಟೆವರೆಗೂ ವ್ಯಾಪಾರ ವಹಿವಾಟಿಗೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬಜೆಟ್ನಲ್ಲಿ ಘೋಷಿಸಿದ್ದಾರೆ. ಹೀಗಾಗಿ ಹೋಟೆಲ್, ಬಾರ್. ಪಬ್, ಮಾಲ್, ರೆಸ್ಟೋರೆಂಟ್ ಎಲ್ಲವೂ ತಡರಾತ್ರಿ 1 ಗಂಟೆವರೆಗೂ ಕಾರ್ಯನಿರ್ವಹಿಸಲಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ