ಸಿನಿಮಾದಿಂದ ರಾಜಕೀಯದತ್ತ ಮುಖ ಮಾಡ್ತಾರಾ ಡಾಲಿ
ಡಾಲಿ ಧನಂಜಯ್ಗೆ ರಾಜಕೀಯದ ಒಲವಿದೆಯಾ?
ಡಾಲಿ ರಾಜಕೀಯ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಲಿಡ್ಕರ್ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಡಾಲಿ ಇದೀಗ ರಾಜಕೀಯದತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗಂತೂ ಅಚ್ಚರಿಗೆ ಕಾರಣವಾಗಿದೆ.
ಸದ್ಯದಲ್ಲೇ ಲೋಕಸಭೆ 2024 ಬರಲಿದೆ. ಹೀಗಾಗಿ ಡಾಲಿ ಹೆಸರು ಮುನ್ನಲೆಗೆ ಬಂದಿದೆ. ಸದ್ಯ ಕೆಲವು ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಧನಂಜಯ್ ಅವರನ್ನು ಕಾಂಗ್ರೆಸ್ ಮುಖಂಡರು ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಡಾಲಿ ರಾಜ್ಯ ಸರ್ಕಾರ, ಕಾಂಗ್ರೆಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಈಗಾಗಲೇ ಮುಖಂಡರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಡಾಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಮೈಸೂರಿನಿಂದ ಲೋಕಸಭಾ ಕಣಕ್ಕೆ ನಿಲ್ಲಿಸುವ ಸಾಧ್ಯತೆ ಇದೆ.
ಡಾಲಿಗೆ ಯಾಕೆ ಅಷ್ಟೊಂದು ಬೇಡಿಕೆ?
ಧನಂಜಯ್ ಸಿನಿಮಾಗಳ ಮೂಲಕ ತಮ್ಮದೇ ಆದ ಅಭಿಮಾನಿ ವರ್ಗ ಸೃಷ್ಟಿಸಿದ್ದಾರೆ. ಅಪಾರ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಡಾಲಿ ಲಿಂಗಾಯತ ಸಮುದಾಯದ ನಾಯಕನಾಗಿದ್ದಾರೆ. ಮೈಸೂರಲ್ಲಿ ಕಾಂಗ್ರೆಸ್ ಪಕ್ಷ ಎಸ್ಸಿ, ಕುರುಬ, ಮುಸ್ಲಿಂ ಮತಗಳನ್ನು ಸೆಳೆಯುವ ಸಲುವಾಗಿ ಡಾಲಿಯನ್ನು ಪಕ್ಷಕ್ಕೆ ಕರೆಸಿಕೊಳ್ಳಲು ಚಿಂತಿಸಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ, ಲಿಂಗಾಯತ ಶಕ್ತಿ ಸೇರಿಕೊಂಡರೆ ಗೆಲ್ಲಬಹುದೆಂಬ ಲೆಕ್ಕಾಚಾರವನ್ನು ಕಾಂಗ್ರೆಸ್ ಪಕ್ಷ ಹಾಕಿಕೊಂಡಿದೆ.
ಡಾಲಿ ಸಾಮಾಜಿಕ ಬದ್ಧತೆ, ಸೈದ್ಧಾಂತಿಕ ಸ್ಪಷ್ಟತೆ ಇರುವ ವ್ಯಕ್ತಿಯಾಗಿದ್ದು, ಧನಂಜಯ್ ಚಿಂತನೆಗಳು ಕಾಂಗ್ರೆಸ್ಗೆ ಹೆಚ್ಚು ಹತ್ತಿರವಾಗಿವೆ. ಪ್ರತಾಪ್ ಸಿಂಹ ಜನಪ್ರಿಯತೆ ಎದುರಿಗೆ ಡಾಲಿ ಜನಪ್ರಿಯತೆ ಬಳಸಿಕೊಂಡು ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡರು ಡಾಲಿಯನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಡಾಲಿ ಧನಂಜಯ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿಗೆ. ಜೆಬ್ರಾ, ಉತ್ತರಖಂಡ, ಪುಷ್ಟ-2, ಅಣ್ಣ ಫ್ರಂ ಮೆಕ್ಸಿಕೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿನಿಮಾದಿಂದ ರಾಜಕೀಯದತ್ತ ಮುಖ ಮಾಡ್ತಾರಾ ಡಾಲಿ
ಡಾಲಿ ಧನಂಜಯ್ಗೆ ರಾಜಕೀಯದ ಒಲವಿದೆಯಾ?
ಡಾಲಿ ರಾಜಕೀಯ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಲಿಡ್ಕರ್ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಡಾಲಿ ಇದೀಗ ರಾಜಕೀಯದತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗಂತೂ ಅಚ್ಚರಿಗೆ ಕಾರಣವಾಗಿದೆ.
ಸದ್ಯದಲ್ಲೇ ಲೋಕಸಭೆ 2024 ಬರಲಿದೆ. ಹೀಗಾಗಿ ಡಾಲಿ ಹೆಸರು ಮುನ್ನಲೆಗೆ ಬಂದಿದೆ. ಸದ್ಯ ಕೆಲವು ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಧನಂಜಯ್ ಅವರನ್ನು ಕಾಂಗ್ರೆಸ್ ಮುಖಂಡರು ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಡಾಲಿ ರಾಜ್ಯ ಸರ್ಕಾರ, ಕಾಂಗ್ರೆಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಈಗಾಗಲೇ ಮುಖಂಡರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಡಾಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಮೈಸೂರಿನಿಂದ ಲೋಕಸಭಾ ಕಣಕ್ಕೆ ನಿಲ್ಲಿಸುವ ಸಾಧ್ಯತೆ ಇದೆ.
ಡಾಲಿಗೆ ಯಾಕೆ ಅಷ್ಟೊಂದು ಬೇಡಿಕೆ?
ಧನಂಜಯ್ ಸಿನಿಮಾಗಳ ಮೂಲಕ ತಮ್ಮದೇ ಆದ ಅಭಿಮಾನಿ ವರ್ಗ ಸೃಷ್ಟಿಸಿದ್ದಾರೆ. ಅಪಾರ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಡಾಲಿ ಲಿಂಗಾಯತ ಸಮುದಾಯದ ನಾಯಕನಾಗಿದ್ದಾರೆ. ಮೈಸೂರಲ್ಲಿ ಕಾಂಗ್ರೆಸ್ ಪಕ್ಷ ಎಸ್ಸಿ, ಕುರುಬ, ಮುಸ್ಲಿಂ ಮತಗಳನ್ನು ಸೆಳೆಯುವ ಸಲುವಾಗಿ ಡಾಲಿಯನ್ನು ಪಕ್ಷಕ್ಕೆ ಕರೆಸಿಕೊಳ್ಳಲು ಚಿಂತಿಸಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ, ಲಿಂಗಾಯತ ಶಕ್ತಿ ಸೇರಿಕೊಂಡರೆ ಗೆಲ್ಲಬಹುದೆಂಬ ಲೆಕ್ಕಾಚಾರವನ್ನು ಕಾಂಗ್ರೆಸ್ ಪಕ್ಷ ಹಾಕಿಕೊಂಡಿದೆ.
ಡಾಲಿ ಸಾಮಾಜಿಕ ಬದ್ಧತೆ, ಸೈದ್ಧಾಂತಿಕ ಸ್ಪಷ್ಟತೆ ಇರುವ ವ್ಯಕ್ತಿಯಾಗಿದ್ದು, ಧನಂಜಯ್ ಚಿಂತನೆಗಳು ಕಾಂಗ್ರೆಸ್ಗೆ ಹೆಚ್ಚು ಹತ್ತಿರವಾಗಿವೆ. ಪ್ರತಾಪ್ ಸಿಂಹ ಜನಪ್ರಿಯತೆ ಎದುರಿಗೆ ಡಾಲಿ ಜನಪ್ರಿಯತೆ ಬಳಸಿಕೊಂಡು ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡರು ಡಾಲಿಯನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಡಾಲಿ ಧನಂಜಯ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿಗೆ. ಜೆಬ್ರಾ, ಉತ್ತರಖಂಡ, ಪುಷ್ಟ-2, ಅಣ್ಣ ಫ್ರಂ ಮೆಕ್ಸಿಕೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ