ಆರು ಜನ ಪ್ರಯಾಣಿಸುತ್ತಿದ್ದ ಒಂದು ಕಾರಿಗೆ ಮತ್ತೊಂದು ಕಾರು ಡಿಕ್ಕಿ
ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಕಾರುಗಳ ಅಪಘಾತ
ಅಪಘಾತಕ್ಕೆ ಓರ್ವ ಮಹಿಳೆ, ಮಗು ಸೇರಿ ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ: ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿರೋ ಭಯಾನಕ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಆರು ಜನ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ ಮೂವರು ಸಾವನ್ನಪ್ಪಿದರೆ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ಸತ್ಯಪ್ಪ ನಾಯ್ಕ (08 ), ಗೋಪಾಲ ಸತ್ಯಪ್ಪ ನಾಯ್ಕ (45), ಧಾರವಾಡ ಮೂಲದ ಅನ್ನಪೂರ್ಣ ಬಾಳೇಶ ಶಿರೋಳ(53) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ.. ದುಬೈನಲ್ಲಿ ಮಂಗಳೂರು ಮೂಲದ ಯುವತಿ ದಾರುಣ ಸಾವು
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆರು ಜನ ಪ್ರಯಾಣಿಸುತ್ತಿದ್ದ ಒಂದು ಕಾರಿಗೆ ಮತ್ತೊಂದು ಕಾರು ಡಿಕ್ಕಿ
ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಕಾರುಗಳ ಅಪಘಾತ
ಅಪಘಾತಕ್ಕೆ ಓರ್ವ ಮಹಿಳೆ, ಮಗು ಸೇರಿ ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ: ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿರೋ ಭಯಾನಕ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಆರು ಜನ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ ಮೂವರು ಸಾವನ್ನಪ್ಪಿದರೆ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ಸತ್ಯಪ್ಪ ನಾಯ್ಕ (08 ), ಗೋಪಾಲ ಸತ್ಯಪ್ಪ ನಾಯ್ಕ (45), ಧಾರವಾಡ ಮೂಲದ ಅನ್ನಪೂರ್ಣ ಬಾಳೇಶ ಶಿರೋಳ(53) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ.. ದುಬೈನಲ್ಲಿ ಮಂಗಳೂರು ಮೂಲದ ಯುವತಿ ದಾರುಣ ಸಾವು
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ