ಮೇ 28 ರಂದು ವಿಚಾರಣೆಗೆ ಹಾಜರಾಗುವಂತೆ ಸೋಚನೆ ನೀಡಿರುವ ಕೋರ್ಟ್
ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದ್ದು ಯಾಕೆ..?
ಕೋರ್ಟ್ ನೀಡಿರುವ ಸಮನ್ಸ್ಗೆ ಡಿ.ಕೆ.ಶಿವಕುಮಾರ್ ಏನ್ ಹೇಳಿದ್ದಾರೆ ಗೊತ್ತಾ?
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮೀಷನ್ ಸರ್ಕಾರ’ ಎಂದು ಅವಹೇಳನಕಾರಿ ಜಾಹೀರಾತು ನೀಡಿದ್ದ ಕಾಂಗ್ರೆಸ್ಗೆ ಕೋರ್ಟ್ ಸಮನ್ಸ್ ಕೊಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.
ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ವಿಚಾರಣೆ ಬಳಿಕ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರ್ಚ್ 28 ರಂದು ಕೋರ್ಟ್ ಹಾಜರಾಗುವಂತೆ ಸಮನ್ಸ್ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾನೂನಿಗೆ ಏನು ಗೌರವ ಕೊಡಬೇಕೋ ಕೊಡ್ತೇವೆ. ಕೋರ್ಟ್ ಗೆ ಹಾಜರಾಗುವ ಬಗ್ಗೆ ತೀರ್ಮಾನ ಮಾಡ್ತೇವೆ ಎಂದಿದ್ದಾರೆ.
ಕಳೆದ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ವೇಳೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಹೇಳನಾಕಾರಿ ಜಾಹೀರಾತು ಮಾಡಿ ಟೀಕಿಸಿತ್ತು. ಕಾಂಗ್ರೆಸ್ ಹರಿಬಿಟ್ಟಿದ್ದ PayCM ಎಂಬ QR ಕೋಡ್ ಹೊಂದಿದ್ದ ಪೋಸ್ಟರ್ ತುಂಬಾನೇ ವೈರಲ್ ಆಗಿ, ಸರ್ಕಾರ ಬಗ್ಗೆ ಭಾರೀ ಚರ್ಚೆ ಆಗುವಂತೆ ಮಾಡಿತ್ತು. 40 ಪರ್ಸೆಂಟ್ ಸರ್ಕಾರ್ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡರು.
ತನಿಖೆಗೆ ಆದೇಶ ನೀಡಿರುವ ಹೈಕೋರ್ಟ್..!
ಕಾಂಗ್ರೆಸ್ ಮಾಡಿರುವ 40 ಪರ್ಸೆಂಟ್ ಕಮೀಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕಳೆದ ವಾರ ಹೈಕೋರ್ಟ್ ಸೂಚನೆ ನೀಡಿದೆ. 6 ವಾರದೊಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ತನಿಖಾಧಿಖಾರಿಗಳಿಗೆ ತಿಳಿಸಲಾಗಿದೆ. ಈ ಮಧ್ಯೆ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಹಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೇ 28 ರಂದು ವಿಚಾರಣೆಗೆ ಹಾಜರಾಗುವಂತೆ ಸೋಚನೆ ನೀಡಿರುವ ಕೋರ್ಟ್
ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದ್ದು ಯಾಕೆ..?
ಕೋರ್ಟ್ ನೀಡಿರುವ ಸಮನ್ಸ್ಗೆ ಡಿ.ಕೆ.ಶಿವಕುಮಾರ್ ಏನ್ ಹೇಳಿದ್ದಾರೆ ಗೊತ್ತಾ?
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮೀಷನ್ ಸರ್ಕಾರ’ ಎಂದು ಅವಹೇಳನಕಾರಿ ಜಾಹೀರಾತು ನೀಡಿದ್ದ ಕಾಂಗ್ರೆಸ್ಗೆ ಕೋರ್ಟ್ ಸಮನ್ಸ್ ಕೊಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.
ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ವಿಚಾರಣೆ ಬಳಿಕ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರ್ಚ್ 28 ರಂದು ಕೋರ್ಟ್ ಹಾಜರಾಗುವಂತೆ ಸಮನ್ಸ್ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾನೂನಿಗೆ ಏನು ಗೌರವ ಕೊಡಬೇಕೋ ಕೊಡ್ತೇವೆ. ಕೋರ್ಟ್ ಗೆ ಹಾಜರಾಗುವ ಬಗ್ಗೆ ತೀರ್ಮಾನ ಮಾಡ್ತೇವೆ ಎಂದಿದ್ದಾರೆ.
ಕಳೆದ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ವೇಳೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಹೇಳನಾಕಾರಿ ಜಾಹೀರಾತು ಮಾಡಿ ಟೀಕಿಸಿತ್ತು. ಕಾಂಗ್ರೆಸ್ ಹರಿಬಿಟ್ಟಿದ್ದ PayCM ಎಂಬ QR ಕೋಡ್ ಹೊಂದಿದ್ದ ಪೋಸ್ಟರ್ ತುಂಬಾನೇ ವೈರಲ್ ಆಗಿ, ಸರ್ಕಾರ ಬಗ್ಗೆ ಭಾರೀ ಚರ್ಚೆ ಆಗುವಂತೆ ಮಾಡಿತ್ತು. 40 ಪರ್ಸೆಂಟ್ ಸರ್ಕಾರ್ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡರು.
ತನಿಖೆಗೆ ಆದೇಶ ನೀಡಿರುವ ಹೈಕೋರ್ಟ್..!
ಕಾಂಗ್ರೆಸ್ ಮಾಡಿರುವ 40 ಪರ್ಸೆಂಟ್ ಕಮೀಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕಳೆದ ವಾರ ಹೈಕೋರ್ಟ್ ಸೂಚನೆ ನೀಡಿದೆ. 6 ವಾರದೊಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ತನಿಖಾಧಿಖಾರಿಗಳಿಗೆ ತಿಳಿಸಲಾಗಿದೆ. ಈ ಮಧ್ಯೆ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಹಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ