ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ?
ನಾನೂ ಕೂಡ ಈ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂಬ ಮಾಜಿ IPS ಅಧಿಕಾರಿ
2 ಬಾರಿ ಗೆದ್ದ ಪ್ರತಾಪ್ ಸಿಂಹಗೆ ಈ ಬಾರಿ ಕೊಡಗು-ಮೈಸೂರು ಟಿಕೆಟ್ ಕೈತಪ್ಪುತ್ತಾ?
ಮಡಿಕೇರಿ: ಬಿಜೆಪಿ ಮುಖಂಡ ಭಾಸ್ಕರ್ರಾವ್ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್, ನಾನೂ ಕೂಡ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂದಿದ್ದಾರೆ.
ಎಸ್ಪಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ರಾಜಕೀಯವಾಗಿ ಕೊಡಗು ಮೈಸೂರಿಗೆ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಮಾತ್ರವಲ್ಲದೇ ನನ್ನ ಟಿಕೆಟ್ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ, ವರಿಷ್ಠರೂ ಏನು ತೀರ್ಮಾನ ತೆಗೆದುಕೊಂಡ್ರು ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. ಬೇರೆ ಅಭ್ಯರ್ಥಿಯನ್ನ ನಿಲ್ಲಿಸಿದ್ರು ಅವರ ಪರವಾಗಿ ನಾನು ಕೆಲಸ ಮಾಡ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ, ಈ ಬಾರಿಯ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅಭ್ಯರ್ಥಿಯಾಗಿ 2 ಬಾರಿ ಗೆದ್ದಿದ್ದಾರೆ. ಆದರೀಗ ಅದೇ ಕ್ಷೇತ್ರದ ಮೇಲೆ ಮಾಜಿ ಐಪಿಎಸ್ ಅಧಿಕಾರಿಯ ಕಣ್ಣಿದೆ. ಆದರೀಗ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಟಿಕೆಟ್ ಯಾರಿಗೆ ಸಿಗುತ್ತದೆ ಎಂದು ಕಾದು ನೋಡಬೇಕಿದೆ.
ಇನ್ನು ಬಿಜೆಪಿಯಲ್ಲಿ ಈಗಾಗಲೇ ಕೆಲವು ಅಭ್ಯರ್ಥಿಗಳು ತಮ್ಮನ್ನು ತಾವೇ ಅಭ್ಯರ್ಥಿಗಳು ಎಂದು ಘೋಷಿಸಿಕೊಂಡಿದ್ದಾರೆ. ಇನ್ನು ಕೆಲವರು ನಿಧಾನಗತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ರಮೇಶ್ ಜಿಗಜಿಗಣಿ ನಾನೇ ಅಭ್ಯರ್ಥಿಯೆಂದು ಸ್ವಯಂ ಘೋಷಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ?
ನಾನೂ ಕೂಡ ಈ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂಬ ಮಾಜಿ IPS ಅಧಿಕಾರಿ
2 ಬಾರಿ ಗೆದ್ದ ಪ್ರತಾಪ್ ಸಿಂಹಗೆ ಈ ಬಾರಿ ಕೊಡಗು-ಮೈಸೂರು ಟಿಕೆಟ್ ಕೈತಪ್ಪುತ್ತಾ?
ಮಡಿಕೇರಿ: ಬಿಜೆಪಿ ಮುಖಂಡ ಭಾಸ್ಕರ್ರಾವ್ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್, ನಾನೂ ಕೂಡ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂದಿದ್ದಾರೆ.
ಎಸ್ಪಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ರಾಜಕೀಯವಾಗಿ ಕೊಡಗು ಮೈಸೂರಿಗೆ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಮಾತ್ರವಲ್ಲದೇ ನನ್ನ ಟಿಕೆಟ್ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ, ವರಿಷ್ಠರೂ ಏನು ತೀರ್ಮಾನ ತೆಗೆದುಕೊಂಡ್ರು ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. ಬೇರೆ ಅಭ್ಯರ್ಥಿಯನ್ನ ನಿಲ್ಲಿಸಿದ್ರು ಅವರ ಪರವಾಗಿ ನಾನು ಕೆಲಸ ಮಾಡ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ, ಈ ಬಾರಿಯ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅಭ್ಯರ್ಥಿಯಾಗಿ 2 ಬಾರಿ ಗೆದ್ದಿದ್ದಾರೆ. ಆದರೀಗ ಅದೇ ಕ್ಷೇತ್ರದ ಮೇಲೆ ಮಾಜಿ ಐಪಿಎಸ್ ಅಧಿಕಾರಿಯ ಕಣ್ಣಿದೆ. ಆದರೀಗ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಟಿಕೆಟ್ ಯಾರಿಗೆ ಸಿಗುತ್ತದೆ ಎಂದು ಕಾದು ನೋಡಬೇಕಿದೆ.
ಇನ್ನು ಬಿಜೆಪಿಯಲ್ಲಿ ಈಗಾಗಲೇ ಕೆಲವು ಅಭ್ಯರ್ಥಿಗಳು ತಮ್ಮನ್ನು ತಾವೇ ಅಭ್ಯರ್ಥಿಗಳು ಎಂದು ಘೋಷಿಸಿಕೊಂಡಿದ್ದಾರೆ. ಇನ್ನು ಕೆಲವರು ನಿಧಾನಗತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ರಮೇಶ್ ಜಿಗಜಿಗಣಿ ನಾನೇ ಅಭ್ಯರ್ಥಿಯೆಂದು ಸ್ವಯಂ ಘೋಷಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ