ಟ್ವಿಟರ್ನಲ್ಲಿ ಖಾಸಗಿ FSL ವರದಿ ಪೋಸ್ಟ್ ಮಾಡಿ ಬಿಜೆಪಿ ಆಕ್ರೋಶ
ವಿಧಾನಸೌಧದಲ್ಲಿ ‘ಪಾಕ್ ಜಿಂದಾಬಾದ್’ ಕೂಗಿದ್ದು ದೃಢವೆಂದ ವರದಿ
ಘೋಷಣೆ ಕೂಗಿರೋದು ನಿಜ ಎಂದ ಖಾಸಗಿ ಎಫ್ಎಸ್ಎಲ್ ತಜ್ಞರು
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ‘ನಾಸೀರ್ ಸಾಬ್ ಜಿಂದಾಬಾದ್’ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎನ್ನಲಾಗಿರುವ ವಿಡಿಯೋ ಕ್ಲಿಪ್ ಅನ್ನು ಬಿಜೆಪಿ ಪ್ರತ್ಯೇಕವಾಗಿ ಖಾಸಗಿ ಲ್ಯಾಬ್ ಕಳುಹಿಸಿತ್ತು. ಅಲ್ಲಿಂದ ಬಂದಿರುವ ಎಫ್ಎಸ್ಎಲ್ ವರದಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರೋದು ದೃಢಪಟ್ಟಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಕಿಡಿ ಆರೋಪ ಮಾಡಿರುವ ಬಿಜೆಪಿ, ಖಾಸಗಿ ಕ್ಲೂ4 ಎವಿಡೆನ್ಸ್ ಫಾರೆನ್ಸಿಕ್ ಸಂಸ್ಥೆಯ FSL ವರದಿಯನ್ನು ಪೋಸ್ಟ್ ಮಾಡಿದೆ. ಈ ವರದಿ ಪ್ರಕಾರ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ದೃಢ. ವಿಡಿಯೋ ಅಸಲಿಯತ್ತು ಎಂದು ಹೇಳಿದೆ. ಈ ವರದಿಯನ್ನು FSL ತಜ್ಞ ಫಣೀಂದ್ರ ಅವರು ದೃಢ ಪಡಿಸಿದ್ದಾರೆ. ಕಾಂಗ್ರೆಸ್ನವರು ಸುಳ್ಳು ಸುದ್ದಿ ಸೃಷ್ಟಿಕರ್ತರು. ಹೀಗಾಗಿ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
— BJP Karnataka (@BJP4Karnataka) March 4, 2024
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ನವರು ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ‘ನಾಸೀರ್ ಸಾಬ್ ಜಿಂದಾಬಾದ್’ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವಿಟ್ನಲ್ಲಿ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟ್ವಿಟರ್ನಲ್ಲಿ ಖಾಸಗಿ FSL ವರದಿ ಪೋಸ್ಟ್ ಮಾಡಿ ಬಿಜೆಪಿ ಆಕ್ರೋಶ
ವಿಧಾನಸೌಧದಲ್ಲಿ ‘ಪಾಕ್ ಜಿಂದಾಬಾದ್’ ಕೂಗಿದ್ದು ದೃಢವೆಂದ ವರದಿ
ಘೋಷಣೆ ಕೂಗಿರೋದು ನಿಜ ಎಂದ ಖಾಸಗಿ ಎಫ್ಎಸ್ಎಲ್ ತಜ್ಞರು
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ‘ನಾಸೀರ್ ಸಾಬ್ ಜಿಂದಾಬಾದ್’ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎನ್ನಲಾಗಿರುವ ವಿಡಿಯೋ ಕ್ಲಿಪ್ ಅನ್ನು ಬಿಜೆಪಿ ಪ್ರತ್ಯೇಕವಾಗಿ ಖಾಸಗಿ ಲ್ಯಾಬ್ ಕಳುಹಿಸಿತ್ತು. ಅಲ್ಲಿಂದ ಬಂದಿರುವ ಎಫ್ಎಸ್ಎಲ್ ವರದಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರೋದು ದೃಢಪಟ್ಟಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಕಿಡಿ ಆರೋಪ ಮಾಡಿರುವ ಬಿಜೆಪಿ, ಖಾಸಗಿ ಕ್ಲೂ4 ಎವಿಡೆನ್ಸ್ ಫಾರೆನ್ಸಿಕ್ ಸಂಸ್ಥೆಯ FSL ವರದಿಯನ್ನು ಪೋಸ್ಟ್ ಮಾಡಿದೆ. ಈ ವರದಿ ಪ್ರಕಾರ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ದೃಢ. ವಿಡಿಯೋ ಅಸಲಿಯತ್ತು ಎಂದು ಹೇಳಿದೆ. ಈ ವರದಿಯನ್ನು FSL ತಜ್ಞ ಫಣೀಂದ್ರ ಅವರು ದೃಢ ಪಡಿಸಿದ್ದಾರೆ. ಕಾಂಗ್ರೆಸ್ನವರು ಸುಳ್ಳು ಸುದ್ದಿ ಸೃಷ್ಟಿಕರ್ತರು. ಹೀಗಾಗಿ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
— BJP Karnataka (@BJP4Karnataka) March 4, 2024
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ನವರು ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ‘ನಾಸೀರ್ ಸಾಬ್ ಜಿಂದಾಬಾದ್’ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವಿಟ್ನಲ್ಲಿ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ