ಸತೀಶ್ ಜಾರಕಿಹೊಳಿಗೆ ಆಹ್ವಾನ ನೀಡಿರುವ ಬಿಜೆಪಿ
15 ವಿಮಾನ ನಿಲ್ದಾಣಗಳ ಯೋಜನೆಗೆ ಮೋದಿ ಚಾಲನೆ
2 ವರ್ಷಗಳಲ್ಲಿ ಟರ್ಮಿನಲ್ ಪೂರ್ಣಗೊಳ್ಳುವ ವಿಶ್ವಾಸ
ಬೆಳಗಾವಿ: ಯಾವಾಗ ಬೇಕಾದ್ರೂ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಧಾನಿ ಮೋದಿ ದೇಶಾದ್ಯಂತ ನೂರಾರು ಕಾಮಗಾರಿಗಳಿಗೆ ಏಕಕಾಲದಲ್ಲಿ ಚಾಲನೆ ನೀಡುತ್ತಿದ್ದಾರೆ. ಇಂದು ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ಮೋದಿ ಮಿಂಚಿನಂತೆ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಲಕ್ಷಾಂತರ ಕೋಟಿ ಮೊತ್ತದ ಯೋಜನೆಗಳನ್ನು ದೇಶದ ಜನರಿಗೆ ನೀಡುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿಯೇ ರಾಜ್ಯಕ್ಕೂ ಗಿಫ್ಟ್ ನೀಡಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ ಹೊಸ ಟರ್ಮಿನಲ್ ಕಾಮಗಾರಿಗೆ ಮೋದಿ ಚಾಲನೆ
ಇಂದು ಪ್ರಧಾನಿ ಮೋದಿ ದೇಶಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಪೈಕಿ ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಹೊಸ ಟರ್ಮಿನಲ್ಗೂ ಚಾಲನೆ ನೀಡಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ನಿರ್ಮಾಣಕ್ಕೆ 357 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಆಗಮಿಸಿದ್ರು. ಇನ್ನು 340 ಕೋಟಿ ರೂಪಾಯಿ ವೆಚ್ಚದಲ್ಲಿ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣದಲ್ಲೂ ಹೊಸ ಟರ್ಮಿನಲ್ಗೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲು ಚಾಲನೆ ನೀಡಿರುವ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣ ಕಾಮಗಾರಿ ಇನ್ನೆರೆಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ಗಿಲ್ಲ ಆಹ್ವಾನ.. ಶಿಷ್ಟಾಚಾರ ಉಲ್ಲಂಘನೆ ಆರೋಪ
ಇನ್ನು ಕಾರ್ಯಕ್ರಮ ಮತ್ತೊಂದು ವಿಚಾರಕ್ಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಗೆ ಆಮಂತ್ರಣ ನೀಡಿದ್ರೂ ಸ್ಥಳೀಯ ಶಾಸಕಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಆಮಂತ್ರಣ ನೀಡದಿರೋದು ಶಿಷ್ಟಾಚಾರ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿ ಟರ್ಮಿನಲ್
ಹುಬ್ಬಳ್ಳಿ ಟರ್ಮಿನಲ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸತೀಶ್ ಜಾರಕಿಹೊಳಿಗೆ ಆಹ್ವಾನ ನೀಡಿರುವ ಬಿಜೆಪಿ
15 ವಿಮಾನ ನಿಲ್ದಾಣಗಳ ಯೋಜನೆಗೆ ಮೋದಿ ಚಾಲನೆ
2 ವರ್ಷಗಳಲ್ಲಿ ಟರ್ಮಿನಲ್ ಪೂರ್ಣಗೊಳ್ಳುವ ವಿಶ್ವಾಸ
ಬೆಳಗಾವಿ: ಯಾವಾಗ ಬೇಕಾದ್ರೂ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಧಾನಿ ಮೋದಿ ದೇಶಾದ್ಯಂತ ನೂರಾರು ಕಾಮಗಾರಿಗಳಿಗೆ ಏಕಕಾಲದಲ್ಲಿ ಚಾಲನೆ ನೀಡುತ್ತಿದ್ದಾರೆ. ಇಂದು ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ಮೋದಿ ಮಿಂಚಿನಂತೆ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಲಕ್ಷಾಂತರ ಕೋಟಿ ಮೊತ್ತದ ಯೋಜನೆಗಳನ್ನು ದೇಶದ ಜನರಿಗೆ ನೀಡುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿಯೇ ರಾಜ್ಯಕ್ಕೂ ಗಿಫ್ಟ್ ನೀಡಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ ಹೊಸ ಟರ್ಮಿನಲ್ ಕಾಮಗಾರಿಗೆ ಮೋದಿ ಚಾಲನೆ
ಇಂದು ಪ್ರಧಾನಿ ಮೋದಿ ದೇಶಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಪೈಕಿ ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಹೊಸ ಟರ್ಮಿನಲ್ಗೂ ಚಾಲನೆ ನೀಡಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ನಿರ್ಮಾಣಕ್ಕೆ 357 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಆಗಮಿಸಿದ್ರು. ಇನ್ನು 340 ಕೋಟಿ ರೂಪಾಯಿ ವೆಚ್ಚದಲ್ಲಿ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣದಲ್ಲೂ ಹೊಸ ಟರ್ಮಿನಲ್ಗೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲು ಚಾಲನೆ ನೀಡಿರುವ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣ ಕಾಮಗಾರಿ ಇನ್ನೆರೆಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ಗಿಲ್ಲ ಆಹ್ವಾನ.. ಶಿಷ್ಟಾಚಾರ ಉಲ್ಲಂಘನೆ ಆರೋಪ
ಇನ್ನು ಕಾರ್ಯಕ್ರಮ ಮತ್ತೊಂದು ವಿಚಾರಕ್ಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಗೆ ಆಮಂತ್ರಣ ನೀಡಿದ್ರೂ ಸ್ಥಳೀಯ ಶಾಸಕಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಆಮಂತ್ರಣ ನೀಡದಿರೋದು ಶಿಷ್ಟಾಚಾರ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿ ಟರ್ಮಿನಲ್
ಹುಬ್ಬಳ್ಳಿ ಟರ್ಮಿನಲ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ