ಬಾಕಿ ಉಳಿದಿರುವ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್
ಇಂದು ಅಥವಾ ನಾಳೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಸಾಧ್ಯತೆ
ಸಿದ್ದರಾಮಯ್ಯ, ಡಿಕೆಎಸ್ಗೂ ಕ್ಯಾರೇ ಎನ್ನದ ಮಾಜಿ ಸಿಎಂ
ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ತಿದೆ. ಈಗಾಗಲೇ ಟಾರ್ಗೆಟ್ 20 ಫಿಕ್ಸ್ ಮಾಡಿಕೊಂಡಿರುವ ಹಸ್ತ ಪಡೆ, ಅಳೆದು ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಿದೆ. ಬಾಕಿ ಉಳಿದಿರುವ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಯ್ಕೆಯೇ ದೊಡ್ಡ ತಲೆನೋವಾಗಿತ್ತು. ಇದೀಗ ಬಾಕಿ ಉಳಿದ ನಾಲ್ಕೂ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ ಹಾಗೂ ಚಾಮರಾಜನಗರ ಕ್ಷೇತ್ರದ ಟಿಕೆಟ್ಗೆ ಭಾರೀ ಪೈಪೋಟಿ ಇದ್ದ ಕಾರಣ, ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಕೊನೆಗೂ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.
ಅಭ್ಯರ್ಥಿಗಳು ಫೈನಲ್
ಗೊಂದಲದಲ್ಲೇ ಕೋಲಾರಕ್ಕೆ ಎಲ್.ಹನುಮಂತಯ್ಯ ಹೆಸರು ಅಂತಿಮ
ರಾಜ್ಯ ಕಾಂಗ್ರೆಸ್ ನಾಯಕರು ಕೋಲಾರ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲದಲ್ಲೇ ಮಾಜಿ ರಾಜ್ಯಸಭೆ ಸದಸ್ಯ ಎಲ್ಹನುಮಂತಯ್ಯ ಹೆಸರನ್ನು ಫೈನಲ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋಲಾರದ ಟಿಕೆಟ್ಗಾಗಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ಕುಮಾರ್ ಬಣದ ನಡುವೆ ಪೈಪೋಟಿ ಇತ್ತು. ಬೆಂಬಲಿಗರ ಜೊತೆ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಶಕ್ತಿ ಪ್ರದರ್ಶನವನ್ನೂ ಮಾಡಿದ್ರು. ಮೊನ್ನೆ ರಾಜ್ಯದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲೂ, ಮುನಿಯಪ್ಪ ಅಳಿಯನಿಗೆ ಟಿಕೆಟ್ ಕೊಟ್ರೆ, ನಾವು ಕೆಲಸ ಮಾಡಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ಕುಮಾರ್ ಕಡ್ಡಿ ಮುರಿದಂತೆ ಮುನಿಸ್ವಾಮಿ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ರು. ಹೀಗಾಗಿ ಎಲ್. ಹನುಮಂತಯ್ಯಗೆ ಟಿಕೆಟ್ ನೀಡಲು ಸಿಎಂ, ಡಿಸಿಎಂ ಒಲವು ತೋರಿದ್ದು, ನಿರ್ಧಾರವನ್ನು ಹೈಕಮಾಂಡ್ಗೆ ಬಿಟ್ಟಿದ್ದಾರೆ.
ಸಿಎಂ, ಡಿಸಿಎಂಗೆ ಸೆಡ್ಡು ಹೊಡೆದ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ, ಶಿವಶಂಕರ್ ರೆಡ್ಡಿ ಮಧ್ಯೆ ಟಿಕೆಟ್ ಪೈಪೋಟಿ ಇತ್ತು. ಇದರ ಜೊತೆಗೆ ನಾನು ಟಿಕೆಟ್ ಆಕಾಂಕ್ಷಿ ಎಂದು ವೀರಪ್ಪ ಮೊಹ್ಲಿ ಬಹಿರಂಗವಾಗಿಯೇ ಹೇಳಿಕೊಂಡಿದ್ರು. ಆದ್ರೆ, ಅಂತಿಮವಾಗಿ ಸಿಎಂ, ಡಿಸಿಎಂ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಹೆಸರನ್ನು ಫೈನಲ್ ಮಾಡಿದ್ದಾರೆ. ಇದಕ್ಕೆ ಸೆಡ್ಡು ಹೊಡೆದಿರುವ ವೀರಪ್ಪ ಮೊಯ್ಲಿ, ಟಿಕೆಟ್ಗಾಗಿ ಸೋನಿಯಾ ಗಾಂಧಿ ಮೊರೆ ಹೋಗಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷರಿಂದಲೇ ಟಿಕೆಟ್ ಪಡೆದುಕೊಳ್ಳಲು ನಿರ್ಧಾರ
ರಕ್ಷಾ ರಾಮಯ್ಯ ಹೆಸರು ಫೈನಲ್ ಆಗಿರುವ ವಿಷಯ ಗೊತ್ತಾಗ್ತಿದ್ದಂತೆ ವೀರಪ್ಪ ಮೊಯ್ಲಿ ಎಐಸಿಸಿ ಮಾಜಿ ಅಧ್ಯಕ್ಷರಿಂದಲೇ ಟಿಕೆಟ್ ಪಡೆದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ನಾಯಕರನ್ನ ಬಿಟ್ಟು ನೇರ ಸೋನಿಯಾ ಮೂಲಕ ಟಿಕೆಟ್ ಲಾಬಿ ಮಾಡ್ತಿದ್ದಾರೆ. ಇತ್ತೀಚೆಗೆ ಸಿಎಂ, ಡಿಸಿಎಂ ಕರೆದ ಸಭೆಗಳಿಗೂ ವೀರಪ್ಪ ಮೊಯ್ಲಿ ತಲೆ ಹಾಕಿರಲಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಮುಖಂಡರು ಹಾಜರಾದರೂ ಮೊಯ್ಲಿ ಮಾತ್ರ ಸಭೆಯಿಂದ ದೂರ ಉಳಿದ್ದರು.
ಇದನ್ನೂ ಓದಿ: ಕಂಗನಾ ಅರೆ ಬೆತ್ತಲೆ ಫೋಟೋ ಶೇರ್ ಮಾಡಿದ ಕಾಂಗ್ರೆಸ್ ನಾಯಕಿ; ಬಿಜೆಪಿ ಕೆಂಡಾಮಂಡಲ; ಆಗಿದ್ದೇನು?
ಸೋನಿಯಾಯವರಿಂದಲೇ ಟಿಕೆಟ್ ಪಡೆದುಕೊಳ್ತೀನೆಂದು ಹೋಗಿರುವ ಮೊಯ್ಲಿ, ನಡೆಗೆ ಸಿಎಂ ಡಿಸಿಎಂ ಬೇಸತ್ತು ವೀರಪ್ಪ ಮೊಯ್ಲಿ ವಿಚಾರದಲ್ಲಿ ತಟಸ್ಥರಾಗಿದ್ದಾರೆ. ಹಾಗೂ ರಕ್ಷ ರಾಮಯ್ಯ ಪರ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ಯಾಟಿಂಗ್ ಮಾಡ್ತಿದ್ದಾರೆ. ಒಟ್ಟಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ಗೆ ಈ ನಾಲ್ಕು ಕ್ಷೇತ್ರಗಳ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಗೊಂದಲದಲ್ಲೇ ಹೆಸರನ್ನುಗಳನ್ನು ಅಂತಿಮಗೊಳಿಸಿ, ಹೈಕಮಾಂಡ್ಗೆ ಅಂಗಳಕ್ಕೆ ಕಳಿಸಿದ್ದಾರೆ. ಇದರ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿ ಕರ್ನಾಟಕದಲ್ಲಿನ ಲೋಕ ಸಮರದ ತಂತ್ರ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದು, ಬಾಕಿ ಉಳಿದಿರುವ 4 ಕ್ಷೇತ್ರಗಳಿಗೆ ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಾಕಿ ಉಳಿದಿರುವ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್
ಇಂದು ಅಥವಾ ನಾಳೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಸಾಧ್ಯತೆ
ಸಿದ್ದರಾಮಯ್ಯ, ಡಿಕೆಎಸ್ಗೂ ಕ್ಯಾರೇ ಎನ್ನದ ಮಾಜಿ ಸಿಎಂ
ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ತಿದೆ. ಈಗಾಗಲೇ ಟಾರ್ಗೆಟ್ 20 ಫಿಕ್ಸ್ ಮಾಡಿಕೊಂಡಿರುವ ಹಸ್ತ ಪಡೆ, ಅಳೆದು ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಿದೆ. ಬಾಕಿ ಉಳಿದಿರುವ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಯ್ಕೆಯೇ ದೊಡ್ಡ ತಲೆನೋವಾಗಿತ್ತು. ಇದೀಗ ಬಾಕಿ ಉಳಿದ ನಾಲ್ಕೂ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ ಹಾಗೂ ಚಾಮರಾಜನಗರ ಕ್ಷೇತ್ರದ ಟಿಕೆಟ್ಗೆ ಭಾರೀ ಪೈಪೋಟಿ ಇದ್ದ ಕಾರಣ, ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಕೊನೆಗೂ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.
ಅಭ್ಯರ್ಥಿಗಳು ಫೈನಲ್
ಗೊಂದಲದಲ್ಲೇ ಕೋಲಾರಕ್ಕೆ ಎಲ್.ಹನುಮಂತಯ್ಯ ಹೆಸರು ಅಂತಿಮ
ರಾಜ್ಯ ಕಾಂಗ್ರೆಸ್ ನಾಯಕರು ಕೋಲಾರ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲದಲ್ಲೇ ಮಾಜಿ ರಾಜ್ಯಸಭೆ ಸದಸ್ಯ ಎಲ್ಹನುಮಂತಯ್ಯ ಹೆಸರನ್ನು ಫೈನಲ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋಲಾರದ ಟಿಕೆಟ್ಗಾಗಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ಕುಮಾರ್ ಬಣದ ನಡುವೆ ಪೈಪೋಟಿ ಇತ್ತು. ಬೆಂಬಲಿಗರ ಜೊತೆ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಶಕ್ತಿ ಪ್ರದರ್ಶನವನ್ನೂ ಮಾಡಿದ್ರು. ಮೊನ್ನೆ ರಾಜ್ಯದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲೂ, ಮುನಿಯಪ್ಪ ಅಳಿಯನಿಗೆ ಟಿಕೆಟ್ ಕೊಟ್ರೆ, ನಾವು ಕೆಲಸ ಮಾಡಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ಕುಮಾರ್ ಕಡ್ಡಿ ಮುರಿದಂತೆ ಮುನಿಸ್ವಾಮಿ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ರು. ಹೀಗಾಗಿ ಎಲ್. ಹನುಮಂತಯ್ಯಗೆ ಟಿಕೆಟ್ ನೀಡಲು ಸಿಎಂ, ಡಿಸಿಎಂ ಒಲವು ತೋರಿದ್ದು, ನಿರ್ಧಾರವನ್ನು ಹೈಕಮಾಂಡ್ಗೆ ಬಿಟ್ಟಿದ್ದಾರೆ.
ಸಿಎಂ, ಡಿಸಿಎಂಗೆ ಸೆಡ್ಡು ಹೊಡೆದ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ, ಶಿವಶಂಕರ್ ರೆಡ್ಡಿ ಮಧ್ಯೆ ಟಿಕೆಟ್ ಪೈಪೋಟಿ ಇತ್ತು. ಇದರ ಜೊತೆಗೆ ನಾನು ಟಿಕೆಟ್ ಆಕಾಂಕ್ಷಿ ಎಂದು ವೀರಪ್ಪ ಮೊಹ್ಲಿ ಬಹಿರಂಗವಾಗಿಯೇ ಹೇಳಿಕೊಂಡಿದ್ರು. ಆದ್ರೆ, ಅಂತಿಮವಾಗಿ ಸಿಎಂ, ಡಿಸಿಎಂ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಹೆಸರನ್ನು ಫೈನಲ್ ಮಾಡಿದ್ದಾರೆ. ಇದಕ್ಕೆ ಸೆಡ್ಡು ಹೊಡೆದಿರುವ ವೀರಪ್ಪ ಮೊಯ್ಲಿ, ಟಿಕೆಟ್ಗಾಗಿ ಸೋನಿಯಾ ಗಾಂಧಿ ಮೊರೆ ಹೋಗಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷರಿಂದಲೇ ಟಿಕೆಟ್ ಪಡೆದುಕೊಳ್ಳಲು ನಿರ್ಧಾರ
ರಕ್ಷಾ ರಾಮಯ್ಯ ಹೆಸರು ಫೈನಲ್ ಆಗಿರುವ ವಿಷಯ ಗೊತ್ತಾಗ್ತಿದ್ದಂತೆ ವೀರಪ್ಪ ಮೊಯ್ಲಿ ಎಐಸಿಸಿ ಮಾಜಿ ಅಧ್ಯಕ್ಷರಿಂದಲೇ ಟಿಕೆಟ್ ಪಡೆದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ನಾಯಕರನ್ನ ಬಿಟ್ಟು ನೇರ ಸೋನಿಯಾ ಮೂಲಕ ಟಿಕೆಟ್ ಲಾಬಿ ಮಾಡ್ತಿದ್ದಾರೆ. ಇತ್ತೀಚೆಗೆ ಸಿಎಂ, ಡಿಸಿಎಂ ಕರೆದ ಸಭೆಗಳಿಗೂ ವೀರಪ್ಪ ಮೊಯ್ಲಿ ತಲೆ ಹಾಕಿರಲಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಮುಖಂಡರು ಹಾಜರಾದರೂ ಮೊಯ್ಲಿ ಮಾತ್ರ ಸಭೆಯಿಂದ ದೂರ ಉಳಿದ್ದರು.
ಇದನ್ನೂ ಓದಿ: ಕಂಗನಾ ಅರೆ ಬೆತ್ತಲೆ ಫೋಟೋ ಶೇರ್ ಮಾಡಿದ ಕಾಂಗ್ರೆಸ್ ನಾಯಕಿ; ಬಿಜೆಪಿ ಕೆಂಡಾಮಂಡಲ; ಆಗಿದ್ದೇನು?
ಸೋನಿಯಾಯವರಿಂದಲೇ ಟಿಕೆಟ್ ಪಡೆದುಕೊಳ್ತೀನೆಂದು ಹೋಗಿರುವ ಮೊಯ್ಲಿ, ನಡೆಗೆ ಸಿಎಂ ಡಿಸಿಎಂ ಬೇಸತ್ತು ವೀರಪ್ಪ ಮೊಯ್ಲಿ ವಿಚಾರದಲ್ಲಿ ತಟಸ್ಥರಾಗಿದ್ದಾರೆ. ಹಾಗೂ ರಕ್ಷ ರಾಮಯ್ಯ ಪರ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ಯಾಟಿಂಗ್ ಮಾಡ್ತಿದ್ದಾರೆ. ಒಟ್ಟಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ಗೆ ಈ ನಾಲ್ಕು ಕ್ಷೇತ್ರಗಳ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಗೊಂದಲದಲ್ಲೇ ಹೆಸರನ್ನುಗಳನ್ನು ಅಂತಿಮಗೊಳಿಸಿ, ಹೈಕಮಾಂಡ್ಗೆ ಅಂಗಳಕ್ಕೆ ಕಳಿಸಿದ್ದಾರೆ. ಇದರ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿ ಕರ್ನಾಟಕದಲ್ಲಿನ ಲೋಕ ಸಮರದ ತಂತ್ರ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದು, ಬಾಕಿ ಉಳಿದಿರುವ 4 ಕ್ಷೇತ್ರಗಳಿಗೆ ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ