ಲೋಕ ಸಭಾ ಚುನಾವಣೆಯ ಸಮಯದಲ್ಲಿ ನಕ್ಸಲರ ಅಟ್ಟಹಾಸ
ಮಾರ್ಚ್ 23ರಂದು ದಾಂತೇವಾಡದಲ್ಲಿ ಐಇಡಿ ಸ್ಫೋಟ ನಡೆದಿತ್ತು
ಭದ್ರತಾ ಸಿಬ್ಬಂದಿ ಗುಂಡೇಟಿಗೆ ಮಹಿಳಾ ಕೇಡರ್ ಸೇರಿ 6 ಮಂದಿ ನಕ್ಸಲರು ಸಾವು
ಛತ್ತೀಸ್ಘಡ ರಾಜ್ಯದ ಬಿಜಾಪುರದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಮಹಿಳಾ ಕೇಡರ್ ಸೇರಿ ಆರು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮದ ಕಾಡಿನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ದಾಳಿ ನಡೆದಿದೆ. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್ ಮತ್ತು ಕೋಬ್ರಾ ಕಮಾಂಡೋಗಳು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಮಹಿಳೆ ಸೇರಿ ಒಟ್ಟು ಆರು ಜನರು ಭದ್ರತಾ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಕಾರ್ಯಚರಣೆ ಮುಂದುವರಿದಿದೆ ಎಂಬ ಸುದ್ದಿ ಕೇಳಿಬಂದಿದೆ.
ಇನ್ನು ಲೋಕ ಸಭಾ ಚುನಾವಣೆಯ ದಿನಾಂಕ ಪ್ರಕಟಗೊಂಡಿದೆ. ಬಿಜಾಪುರದ ಬಸ್ತಾರ್ನಲ್ಲಿ ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಅದಕ್ಕೂ ಮುನ್ನವೇ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆಗೆ ಗುಂಡಿನ ಚಕಮಕಿ ನಡೆದಿದೆ.
ಇದನ್ನೂ ಓದಿ: ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ.. ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
ಮಾರ್ಚ್ 23ರಂದು ದಾಂತೇವಾಡದಲ್ಲಿ ಐಇಡಿ ಸ್ಫೋಟ ನಡೆದಿತ್ತು. ಇದರಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಲೋಕ ಸಭಾ ಚುನಾವಣೆಯ ಸಮಯದಲ್ಲಿ ನಕ್ಸಲರ ಅಟ್ಟಹಾಸ
ಮಾರ್ಚ್ 23ರಂದು ದಾಂತೇವಾಡದಲ್ಲಿ ಐಇಡಿ ಸ್ಫೋಟ ನಡೆದಿತ್ತು
ಭದ್ರತಾ ಸಿಬ್ಬಂದಿ ಗುಂಡೇಟಿಗೆ ಮಹಿಳಾ ಕೇಡರ್ ಸೇರಿ 6 ಮಂದಿ ನಕ್ಸಲರು ಸಾವು
ಛತ್ತೀಸ್ಘಡ ರಾಜ್ಯದ ಬಿಜಾಪುರದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಮಹಿಳಾ ಕೇಡರ್ ಸೇರಿ ಆರು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮದ ಕಾಡಿನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ದಾಳಿ ನಡೆದಿದೆ. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್ ಮತ್ತು ಕೋಬ್ರಾ ಕಮಾಂಡೋಗಳು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಮಹಿಳೆ ಸೇರಿ ಒಟ್ಟು ಆರು ಜನರು ಭದ್ರತಾ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಕಾರ್ಯಚರಣೆ ಮುಂದುವರಿದಿದೆ ಎಂಬ ಸುದ್ದಿ ಕೇಳಿಬಂದಿದೆ.
ಇನ್ನು ಲೋಕ ಸಭಾ ಚುನಾವಣೆಯ ದಿನಾಂಕ ಪ್ರಕಟಗೊಂಡಿದೆ. ಬಿಜಾಪುರದ ಬಸ್ತಾರ್ನಲ್ಲಿ ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಅದಕ್ಕೂ ಮುನ್ನವೇ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆಗೆ ಗುಂಡಿನ ಚಕಮಕಿ ನಡೆದಿದೆ.
ಇದನ್ನೂ ಓದಿ: ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ.. ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
ಮಾರ್ಚ್ 23ರಂದು ದಾಂತೇವಾಡದಲ್ಲಿ ಐಇಡಿ ಸ್ಫೋಟ ನಡೆದಿತ್ತು. ಇದರಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.