ನಾಮಪತ್ರ ಸಲ್ಲಿಕೆಗೂ ಮುನ್ನ ಹಿರಿಯರ ಆಶೀರ್ವಾದ ಪಡೆದ ಡಿಕೆಸು
ಏಪ್ರಿಲ್ 26 ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮತದಾನ
ಈ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಮಾಡಿರುವ ಸುರೇಶ್
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸುವ ಆರ್ಭಟ ಇವತ್ತಿನಿಂದ ಅಧಿಕೃತವಾಗಿ ಶುರುವಾಗ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಿ.ಕೆ.ಸುರೇಶ್ ಇವತ್ತು ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್, ಗುರು-ಹಿರಿಯರ, ಮನೆದೇವರ ಆಶೀರ್ವಾದ ಪಡೆದಿದ್ದಾರೆ. ಅದರಂತೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ಒಳ್ಳೆಯದಾಗುವಂತೆ ಸಂಕಲ್ಪ ಮಾಡಿಕೊಂಡರು. ನಂತರ ಸಹೋದರ ಡಿ.ಕೆ.ಶಿವಕುಮಾರ್, ಅತ್ತಿಗೆ ಉಷಾ ಶಿವಕುಮಾರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.
ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ವಿಚ್ಛೇದನ.. ಇದಕ್ಕೆಲ್ಲಾ ಫೋನ್ ಟ್ಯಾಪಿಂಗ್ ಕಾರಣ?
ಅಣ್ಣ ಶಿವಕುಮಾರ್ಗೆ ಬಿ-ಫಾರಂ ನೀಡಿ ಚುನಾವಣೆಯಲ್ಲಿ ಗೆದ್ದು ಬರುವಂತೆ ಹಾರೈಸುವಂತೆ ಕೋರಿಕೊಂಡರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕರ್ನಾಟಕದಲ್ಲಿ ನಡೆಯುವ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟ ಆಗಲಿದೆ. ಶಿವಕುಮಾರ್ಗೆ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಅವರು ಕಣದಲ್ಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ B-ಫಾರಂ ಸಲ್ಲಿಸುವ ಮುನ್ನ ಅಣ್ಣ, ಅತ್ತಿಗೆ ಕಾಲಿಗೆ ಬಿದ್ದು, ಸಂಸದ ಡಿಕೆ ಸುರೇಶ್ ಆಶೀರ್ವಾದ ಪಡೆದುಕೊಂಡಿದ್ದಾರೆ.@DKShivakumar @DKSureshINC @INCKarnataka @BJP4Karnataka #LokSabhaElection2024 #LokSabha2024 #MPElection2024 #Khanapur #Karnataka #NewsFirstKannada pic.twitter.com/ISvlvTUjen
— NewsFirst Kannada (@NewsFirstKan) March 28, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಾಮಪತ್ರ ಸಲ್ಲಿಕೆಗೂ ಮುನ್ನ ಹಿರಿಯರ ಆಶೀರ್ವಾದ ಪಡೆದ ಡಿಕೆಸು
ಏಪ್ರಿಲ್ 26 ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮತದಾನ
ಈ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಮಾಡಿರುವ ಸುರೇಶ್
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸುವ ಆರ್ಭಟ ಇವತ್ತಿನಿಂದ ಅಧಿಕೃತವಾಗಿ ಶುರುವಾಗ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಿ.ಕೆ.ಸುರೇಶ್ ಇವತ್ತು ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್, ಗುರು-ಹಿರಿಯರ, ಮನೆದೇವರ ಆಶೀರ್ವಾದ ಪಡೆದಿದ್ದಾರೆ. ಅದರಂತೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ಒಳ್ಳೆಯದಾಗುವಂತೆ ಸಂಕಲ್ಪ ಮಾಡಿಕೊಂಡರು. ನಂತರ ಸಹೋದರ ಡಿ.ಕೆ.ಶಿವಕುಮಾರ್, ಅತ್ತಿಗೆ ಉಷಾ ಶಿವಕುಮಾರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.
ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ವಿಚ್ಛೇದನ.. ಇದಕ್ಕೆಲ್ಲಾ ಫೋನ್ ಟ್ಯಾಪಿಂಗ್ ಕಾರಣ?
ಅಣ್ಣ ಶಿವಕುಮಾರ್ಗೆ ಬಿ-ಫಾರಂ ನೀಡಿ ಚುನಾವಣೆಯಲ್ಲಿ ಗೆದ್ದು ಬರುವಂತೆ ಹಾರೈಸುವಂತೆ ಕೋರಿಕೊಂಡರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕರ್ನಾಟಕದಲ್ಲಿ ನಡೆಯುವ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟ ಆಗಲಿದೆ. ಶಿವಕುಮಾರ್ಗೆ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಅವರು ಕಣದಲ್ಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ B-ಫಾರಂ ಸಲ್ಲಿಸುವ ಮುನ್ನ ಅಣ್ಣ, ಅತ್ತಿಗೆ ಕಾಲಿಗೆ ಬಿದ್ದು, ಸಂಸದ ಡಿಕೆ ಸುರೇಶ್ ಆಶೀರ್ವಾದ ಪಡೆದುಕೊಂಡಿದ್ದಾರೆ.@DKShivakumar @DKSureshINC @INCKarnataka @BJP4Karnataka #LokSabhaElection2024 #LokSabha2024 #MPElection2024 #Khanapur #Karnataka #NewsFirstKannada pic.twitter.com/ISvlvTUjen
— NewsFirst Kannada (@NewsFirstKan) March 28, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ