ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ಗೆ ಮೂರು ಸೋಲು
ಸದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ ಕೊಕ್
ಮತ್ತೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಲಿದ್ದಾರಂತೆ..!
ಐದು ಬಾರಿ ಕಪ್ ಗೆದ್ದಿರೋ ಮುಂಬೈ ಇಂಡಿಯನ್ಸ್ಗೆ ಹೊಸ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ. ಒಂದು ಸೀಸನ್ನಲ್ಲಿ ಕಪ್ ಗೆಲ್ಲಿಸಿ, ಮತ್ತೊಂದು ಸೀಸನ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಫೈನಲ್ಗೆ ಕರೆದೊಯ್ದಿದ್ದಕ್ಕೆ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ಗೆ ಕರೆಸಿ ಕ್ಯಾಪ್ಟನ್ಸಿ ನೀಡಲಾಯ್ತು. ಈಗ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರು ಪಂದ್ಯಗಳನ್ನು ಸೋತಿದೆ.
ಹೌದು, 2024ರ ಐಪಿಎಲ್ನಲ್ಲಿ ಇನ್ನೂ ಒಂದು ಪಂದ್ಯವೂ ಮುಂಬೈ ಇಂಡಿಯನ್ಸ್ ಗೆದ್ದಿಲ್ಲ. ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದೆ. ಈ ಮಧ್ಯೆ ಹಾರ್ದಿಕ್ ಜಾಗಕ್ಕೆ ಮತ್ತೆ ರೋಹಿತ್ ಶರ್ಮಾ ಅವರೇ ಕ್ಯಾಪ್ಟನ್ ಆಗಿ ಬರಬಹುದು ಎಂದು ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಮನೋಜ್ ತಿವಾರಿ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಮಾತಾಡಿದ ಮನೋಜ್ ತಿವಾರಿ, 2024ರ ಆವೃತ್ತಿಯಲ್ಲಿ ಮುಂಬೈ ಕಳಪೆ ಆರಂಭ ಪಡೆದುಕೊಂಡಿದೆ. ಹಾಗಾಗಿ ರೋಹಿತ್ ಶರ್ಮಾ ಅವರನ್ನು ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ಮಾಡಬಹುದು ಎಂದರು.
ಮನೋಜ್ ತಿವಾರಿ ಹೇಳಿದ್ದೇನು..?
ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕರು ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ. ರೋಹಿತ್ ಶರ್ಮಾ ಐದು ಐಪಿಎಲ್ ಕಪ್ ಗೆದ್ದುಕೊಟ್ಟ ನಾಯಕ. ರೋಹಿತ್ ನಾಯಕತ್ವ ಕಿತ್ತುಕೊಂಡು ಹಾರ್ದಿಕ್ ಪಾಂಡ್ಯಗೆ ನೀಡಿದರು. ನಾಯಕನನ್ನು ಬದಲಾಯಿಸುವುದು ದೊಡ್ಡ ನಿರ್ಧಾರ. ಈ ಸೀಸನ್ನಲ್ಲಿ ಒಂದೇ ಒಂದು ಅಂಕ ಮುಂಬೈ ಪಡೆದಿಲ್ಲ ಎಂದರು.
ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಹೀನಾಯ ಸೋಲಿನ ಬಗ್ಗೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ಗೆ ಮೂರು ಸೋಲು
ಸದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ ಕೊಕ್
ಮತ್ತೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಲಿದ್ದಾರಂತೆ..!
ಐದು ಬಾರಿ ಕಪ್ ಗೆದ್ದಿರೋ ಮುಂಬೈ ಇಂಡಿಯನ್ಸ್ಗೆ ಹೊಸ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ. ಒಂದು ಸೀಸನ್ನಲ್ಲಿ ಕಪ್ ಗೆಲ್ಲಿಸಿ, ಮತ್ತೊಂದು ಸೀಸನ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಫೈನಲ್ಗೆ ಕರೆದೊಯ್ದಿದ್ದಕ್ಕೆ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ಗೆ ಕರೆಸಿ ಕ್ಯಾಪ್ಟನ್ಸಿ ನೀಡಲಾಯ್ತು. ಈಗ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರು ಪಂದ್ಯಗಳನ್ನು ಸೋತಿದೆ.
ಹೌದು, 2024ರ ಐಪಿಎಲ್ನಲ್ಲಿ ಇನ್ನೂ ಒಂದು ಪಂದ್ಯವೂ ಮುಂಬೈ ಇಂಡಿಯನ್ಸ್ ಗೆದ್ದಿಲ್ಲ. ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದೆ. ಈ ಮಧ್ಯೆ ಹಾರ್ದಿಕ್ ಜಾಗಕ್ಕೆ ಮತ್ತೆ ರೋಹಿತ್ ಶರ್ಮಾ ಅವರೇ ಕ್ಯಾಪ್ಟನ್ ಆಗಿ ಬರಬಹುದು ಎಂದು ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಮನೋಜ್ ತಿವಾರಿ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಮಾತಾಡಿದ ಮನೋಜ್ ತಿವಾರಿ, 2024ರ ಆವೃತ್ತಿಯಲ್ಲಿ ಮುಂಬೈ ಕಳಪೆ ಆರಂಭ ಪಡೆದುಕೊಂಡಿದೆ. ಹಾಗಾಗಿ ರೋಹಿತ್ ಶರ್ಮಾ ಅವರನ್ನು ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ಮಾಡಬಹುದು ಎಂದರು.
ಮನೋಜ್ ತಿವಾರಿ ಹೇಳಿದ್ದೇನು..?
ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕರು ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ. ರೋಹಿತ್ ಶರ್ಮಾ ಐದು ಐಪಿಎಲ್ ಕಪ್ ಗೆದ್ದುಕೊಟ್ಟ ನಾಯಕ. ರೋಹಿತ್ ನಾಯಕತ್ವ ಕಿತ್ತುಕೊಂಡು ಹಾರ್ದಿಕ್ ಪಾಂಡ್ಯಗೆ ನೀಡಿದರು. ನಾಯಕನನ್ನು ಬದಲಾಯಿಸುವುದು ದೊಡ್ಡ ನಿರ್ಧಾರ. ಈ ಸೀಸನ್ನಲ್ಲಿ ಒಂದೇ ಒಂದು ಅಂಕ ಮುಂಬೈ ಪಡೆದಿಲ್ಲ ಎಂದರು.
ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಹೀನಾಯ ಸೋಲಿನ ಬಗ್ಗೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ