ಹೃದಯಾಘಾತಕ್ಕೆ ಬಲಿಯಾದ ಲೋಕಸಭಾ ಚುನಾವಣಾ ಅಭ್ಯರ್ಥಿ
ಏಪ್ರಿಲ್ 26ರಂದು ನಡೆಯಬೇಕಾಗಿದ್ದ ಚುನಾವಣೆ ಮುಂದೂಡಿಕೆ
ಎದೆನೋವು ಕಾಣಿಸಿಕೊಂಡಿದ್ದಕ್ಕೆ ಆಸ್ಪತ್ರೆ ದಾಖಲಿಸಿದ್ರು ಉಳಿಯಲಿಲ್ಲ
ಮಧ್ಯಪ್ರದೇಶ: ಲೋಕಸಭಾ ಚುನಾವಣೆ ಅಭ್ಯರ್ಥಿಯೊಬ್ಬರು ಹೃದಯಾಘಾತಕ್ಕೆ ನಿಧನರಾದ ಕಾರಣ ಏಪ್ರಿಲ್ 26ರಂದು ನಡೆಯಬೇಕಾಗಿದ್ದ 2ನೇ ಹಂತದ ಚುನಾವಣೆಯನ್ನು ಮುಂದೂಡಲಾಗಿದೆ.
ಮಧ್ಯಪ್ರದೇಶದ ಬೇತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ್ ಭಾಲವಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಹೃದಯಾಘಾತಕ್ಕೆ ಅಶೋಕ್ ನಿಧನರಾಗಿದ್ದಾರೆ.
ಪಕ್ಷ ಹಂಚಿಕೊಂಡ ಮಾಹಿತಿ ಪ್ರಕಾರ, ಅಶೋಕ್ ಭಾಲವಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅಶೋಕ್ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು ಎಂದು ತಿಳಿಸಿದೆ.
ಇದನ್ನೂ ಓದಿ: ಗಂಡ-ಹೆಂಡತಿ ನಡುವೆ ಗಲಾಟೆ.. ಮಧ್ಯ ಪ್ರವೇಶಿಸಿದ ಬಾಮೈದುನನಿಗೆ ಚಾಕು ಇರಿದು ಕೊಲೆ
ಇನ್ನು ಅಶೋಕ್ ಭಾಲವಿ ಸಾವಿನ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ. ಹೀಗಾಗಿ 1951ರ ಸೆಕ್ಷನ್ 52ರ ಅಡಿಯಲ್ಲಿ ಏಪ್ರಿಲ್ 26ರಂದು ನಡೆಯಬೇಕಾಗಿದ್ದ ಲೋಕಸಭಾ ಚುನಾವಣೆ ಮುಂದೂಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೃದಯಾಘಾತಕ್ಕೆ ಬಲಿಯಾದ ಲೋಕಸಭಾ ಚುನಾವಣಾ ಅಭ್ಯರ್ಥಿ
ಏಪ್ರಿಲ್ 26ರಂದು ನಡೆಯಬೇಕಾಗಿದ್ದ ಚುನಾವಣೆ ಮುಂದೂಡಿಕೆ
ಎದೆನೋವು ಕಾಣಿಸಿಕೊಂಡಿದ್ದಕ್ಕೆ ಆಸ್ಪತ್ರೆ ದಾಖಲಿಸಿದ್ರು ಉಳಿಯಲಿಲ್ಲ
ಮಧ್ಯಪ್ರದೇಶ: ಲೋಕಸಭಾ ಚುನಾವಣೆ ಅಭ್ಯರ್ಥಿಯೊಬ್ಬರು ಹೃದಯಾಘಾತಕ್ಕೆ ನಿಧನರಾದ ಕಾರಣ ಏಪ್ರಿಲ್ 26ರಂದು ನಡೆಯಬೇಕಾಗಿದ್ದ 2ನೇ ಹಂತದ ಚುನಾವಣೆಯನ್ನು ಮುಂದೂಡಲಾಗಿದೆ.
ಮಧ್ಯಪ್ರದೇಶದ ಬೇತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ್ ಭಾಲವಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಹೃದಯಾಘಾತಕ್ಕೆ ಅಶೋಕ್ ನಿಧನರಾಗಿದ್ದಾರೆ.
ಪಕ್ಷ ಹಂಚಿಕೊಂಡ ಮಾಹಿತಿ ಪ್ರಕಾರ, ಅಶೋಕ್ ಭಾಲವಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅಶೋಕ್ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು ಎಂದು ತಿಳಿಸಿದೆ.
ಇದನ್ನೂ ಓದಿ: ಗಂಡ-ಹೆಂಡತಿ ನಡುವೆ ಗಲಾಟೆ.. ಮಧ್ಯ ಪ್ರವೇಶಿಸಿದ ಬಾಮೈದುನನಿಗೆ ಚಾಕು ಇರಿದು ಕೊಲೆ
ಇನ್ನು ಅಶೋಕ್ ಭಾಲವಿ ಸಾವಿನ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ. ಹೀಗಾಗಿ 1951ರ ಸೆಕ್ಷನ್ 52ರ ಅಡಿಯಲ್ಲಿ ಏಪ್ರಿಲ್ 26ರಂದು ನಡೆಯಬೇಕಾಗಿದ್ದ ಲೋಕಸಭಾ ಚುನಾವಣೆ ಮುಂದೂಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ