ಹರಿಯಾಣದ ನರ್ನಾಲ್ನ ಉನ್ಹಾನಿ ಗ್ರಾಮದ ಬಳಿ ನಡೆದ ಭೀಕರ ಅಪಘಾತ
1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಹೊತ್ತು ಹೋಗುತ್ತಿದ್ದ ಬಸ್ ಌಕ್ಸಿಡೆಂಟ್
ಒಂದಲ್ಲ ಎರಡಲ್ಲ ಬರೋಬ್ಬರಿ 30ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಂಭೀರ ಗಾಯ
ಚಂಡೀಗಢ: ಪಾನಮತ್ತ ಚಾಲಕನ ಎಡವಟ್ಟಿನಿಂದಾಗಿ ಸ್ಕೂಲ್ ಬಸ್ ಪಲ್ಟಿಯಾಗಿ 8 ಮಕ್ಕಳು ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಸ್ಕೂಲ್ ಬಸ್ ಡ್ರೈವರ್ನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು. ಸುಮಾರು 30 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಹರಿಯಾಣದ ಮಹೇಂದ್ರಗಢದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪಾನಮತ್ತ ಚಾಲಕನ ನಿರ್ಲಕ್ಷ್ಯದಿಂದಾಗಿ ಶಾಲಾ ಬಸ್ವೊಂದು ಮರಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ನಡೆದು ಹೋಗಿದೆ. ಕನಿನಾದ ಜಿಎಲ್ ಪಬ್ಲಿಕ್ ಸ್ಕೂಲ್ಗೆ ಸೇರಿದ ಬಸ್ ಇದಾಗಿದ್ದು, ಬಸ್ನಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ 8 ಮಕ್ಕಳು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಭೀಕರ ದುರಂತ.. ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿ 6 ಮಕ್ಕಳು ಸಾವು; 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಮಕ್ಕಳ ಸಹಾಯಕ್ಕೆ ಬಂದಿದ್ದರಿಂದ ಕೆಲವು ಮಕ್ಕಳ ಜೀವವನ್ನು ಕಾಪಾಡಲಾಗಿದೆ. ಸ್ಥಳೀಯರ ಪ್ರಕಾರ ಸ್ಕೂಲ್ ಬಸ್ ಡ್ರೈವರ್ನ ಅತಿವೇಗದ ಚಾಲನೆಯೇ ಈ ಭೀಕರ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೇ ಚಾಲಕ ಕುಡಿದು ಬಸ್ಓಡಿಸುತ್ತಿದ್ದ ಎಂದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಮಗು ಕೂಡ ಆರೋಪಿಸಿದೆ. ಅಲ್ಲದೇ ರಂಜಾನ್ ಹಬ್ಬಕ್ಕೆ ಶಾಲೆಗೆ ರಜೆ ಕೊಡದೇ ತರಗತಿಗಳನ್ನು ನಡೆಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇನ್ನು, ಹರಿಯಾಣದಲ್ಲಿ ನಡೆದ ಭೀಕರ ಅಪಘಾತದ ಸುದ್ದಿ ತಿಳಿದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡ ಮಕ್ಕಳಿಗೆ ಸ್ಥಳೀಯ ಆಡಳಿತ ಸಹಾಯ ನೀಡುತ್ತದೆ. ಮೃತ ಮಕ್ಕಳ ಕುಟುಂಬಕ್ಕೆ ನನ್ನ ಸಂತಾಪವಿದೆ, ಈ ನಷ್ಟವನ್ನು ಭರಿಸುವ ಶಕ್ತಿ ದೇವರು ಕೊಡಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಒಟ್ಟಾರೆ, ಶಾಲಾ ಬಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದು, ಅವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದ್ರೆ ಕುಡಿದು ಚಾಲಕ ವಾಹನ ಚಲಾಯಿಸಿದ್ದರಿಂದ ಪೋಷಕರಿಗೆ ಮುಂದಿನ ಭವಿಷ್ಯವಾಗಿದ್ದ ಮಕ್ಕಳು ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ವಿಪರ್ಯಾಸ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹರಿಯಾಣದ ನರ್ನಾಲ್ನ ಉನ್ಹಾನಿ ಗ್ರಾಮದ ಬಳಿ ನಡೆದ ಭೀಕರ ಅಪಘಾತ
1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಹೊತ್ತು ಹೋಗುತ್ತಿದ್ದ ಬಸ್ ಌಕ್ಸಿಡೆಂಟ್
ಒಂದಲ್ಲ ಎರಡಲ್ಲ ಬರೋಬ್ಬರಿ 30ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಂಭೀರ ಗಾಯ
ಚಂಡೀಗಢ: ಪಾನಮತ್ತ ಚಾಲಕನ ಎಡವಟ್ಟಿನಿಂದಾಗಿ ಸ್ಕೂಲ್ ಬಸ್ ಪಲ್ಟಿಯಾಗಿ 8 ಮಕ್ಕಳು ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಸ್ಕೂಲ್ ಬಸ್ ಡ್ರೈವರ್ನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು. ಸುಮಾರು 30 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಹರಿಯಾಣದ ಮಹೇಂದ್ರಗಢದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪಾನಮತ್ತ ಚಾಲಕನ ನಿರ್ಲಕ್ಷ್ಯದಿಂದಾಗಿ ಶಾಲಾ ಬಸ್ವೊಂದು ಮರಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ನಡೆದು ಹೋಗಿದೆ. ಕನಿನಾದ ಜಿಎಲ್ ಪಬ್ಲಿಕ್ ಸ್ಕೂಲ್ಗೆ ಸೇರಿದ ಬಸ್ ಇದಾಗಿದ್ದು, ಬಸ್ನಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ 8 ಮಕ್ಕಳು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಭೀಕರ ದುರಂತ.. ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿ 6 ಮಕ್ಕಳು ಸಾವು; 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಮಕ್ಕಳ ಸಹಾಯಕ್ಕೆ ಬಂದಿದ್ದರಿಂದ ಕೆಲವು ಮಕ್ಕಳ ಜೀವವನ್ನು ಕಾಪಾಡಲಾಗಿದೆ. ಸ್ಥಳೀಯರ ಪ್ರಕಾರ ಸ್ಕೂಲ್ ಬಸ್ ಡ್ರೈವರ್ನ ಅತಿವೇಗದ ಚಾಲನೆಯೇ ಈ ಭೀಕರ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೇ ಚಾಲಕ ಕುಡಿದು ಬಸ್ಓಡಿಸುತ್ತಿದ್ದ ಎಂದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಮಗು ಕೂಡ ಆರೋಪಿಸಿದೆ. ಅಲ್ಲದೇ ರಂಜಾನ್ ಹಬ್ಬಕ್ಕೆ ಶಾಲೆಗೆ ರಜೆ ಕೊಡದೇ ತರಗತಿಗಳನ್ನು ನಡೆಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇನ್ನು, ಹರಿಯಾಣದಲ್ಲಿ ನಡೆದ ಭೀಕರ ಅಪಘಾತದ ಸುದ್ದಿ ತಿಳಿದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡ ಮಕ್ಕಳಿಗೆ ಸ್ಥಳೀಯ ಆಡಳಿತ ಸಹಾಯ ನೀಡುತ್ತದೆ. ಮೃತ ಮಕ್ಕಳ ಕುಟುಂಬಕ್ಕೆ ನನ್ನ ಸಂತಾಪವಿದೆ, ಈ ನಷ್ಟವನ್ನು ಭರಿಸುವ ಶಕ್ತಿ ದೇವರು ಕೊಡಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಒಟ್ಟಾರೆ, ಶಾಲಾ ಬಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದು, ಅವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದ್ರೆ ಕುಡಿದು ಚಾಲಕ ವಾಹನ ಚಲಾಯಿಸಿದ್ದರಿಂದ ಪೋಷಕರಿಗೆ ಮುಂದಿನ ಭವಿಷ್ಯವಾಗಿದ್ದ ಮಕ್ಕಳು ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ವಿಪರ್ಯಾಸ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ